ಕೋವಿಡ್೧೯ ಪರಿಣಾಮ- ಬೀದಿಬದಿ ಅಂಗಡಿಗಳು ಕ್ಲೋಜ್,ಶಿರಸಿಯಲ್ಲಿ ದೇವಸ್ಥಾನದಲ್ಲಿ ಊಟ

ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಭೀತಿ ಹಿನ್ನೆಲೆಯಲ್ಲಿ ಬೀದಿ ಬದಿ ಫಾಸ್ಟ್ಫುಡ್ ಅಂಗಡಿ ಬಂದ್ ಹಾಗೂ ನಾಟಕ, ಸಿನೆಮಾ, ಸಾರ್ವಜನಿಕ ತಾತ್ಕಾಲಿಕ ಅಂಗಡಿಗಳನ್ನು ಮುಚ್ಚಲು ಆದೇಶಿಸಿರುವುದರಿಂದ ಸಿದ್ಧಾಪುರ ಸೇರಿದಂತೆ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಜಾತ್ರೆ,ಉತ್ಸವಗಳ ತಾತ್ಕಾಲಿಕ ಅಂಗಡಿಗಳನ್ನು ಮುಚ್ಚಲಾಗಿದೆ.

ಬೀದಿಬದಿ ಫಾಸ್ಟ್ಫುಡ್ ಅಂಗಡಿಗಳನ್ನೂ ಮುಚ್ಚುವ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ನಗರಗಳ ಪಾನಿಪುರಿ, ಕಬಾಬ್,ಚಿಕನ್,ಎಗ್, ವೆಜ್‌ರೈಸ್ ಅಂಗಡಿಗಳನ್ನು ಮುಚ್ಚಲಾಗಿದೆ.
ಇಂಥ ದಿನದ ವ್ಯಾಪಾರದಿಂದ ಬದುಕುತಿದ್ದ ಸಣ್ಣ ಅಂಗಡಿಗಳು, ತಳ್ಳುಗಾಡಿಗಳ ವ್ಯಾಪಾರ ಸೇರಿದಂತೆ ಶಾಶ್ವತ ಕಟ್ಟಡಗಳಲ್ಲಿಲ್ಲದ ಚಿಕ್ಕ ವ್ಯಾಪಾರಿಗಳ ವ್ಯವಹಾರ ನಿಂತಿದೆ. ಕರೋನಾ ವಿಸ್ತರಿಸದಂತೆ ತಡೆಯುವ ಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಹೊರಡಿಸಿರುವ ಈ ಆದೇಶದಿಂದಾಗಿ ಪ್ರವಾಸಿಗರು,ಹೊರಗಿನ ವ್ಯಕ್ತಿಗಳು ಬಂದು ಅಗ್ಗದ ವಸ್ತುಗಳನ್ನು ಖರೀದಿಸಿ ರೋಗ ಹರಡಲು ಸಹಕರಿಸುವ ಸಾಧ್ಯತೆಗಳನ್ನು ನಿಯಂತ್ರಿಸಲಾಗಿದೆ. ಕರೋನಾ ಹರಡದಂತೆ ಮುಂಜಾಗ್ರತೆ ವಹಿಸಿರುವ ಜಿಲ್ಲಾಡಳಿತದ ಕ್ರಮದಿಂದ ದಿನದ ಅನ್ನ ಕಂಡುಕೊಂಡಿದ್ದ ಬಡ ವ್ಯಾಪಾರಿಗಳಿಗೆ ತೊಂದರೆಯಾದರೆ ಇವುಗಳನ್ನು ಅವಲಂಬಿಸಿದ್ದ ಸ್ಥಳಿಯರಿಗೂ ತೊಂದರೆಯಾಗಿದೆ.
ಶಿರಸಿಯ ಸೂಕ್ತ ಕ್ರಮ- ಕರೋನಾ ವೈರಸ್ ಹರಡದಂತೆ ಜಿಲ್ಲಾಡಳಿತ ಕೈಗೊಂಡ ಕಠಿಣ ಕ್ರಮದಿಂದಾಗಿ ಉತ್ತರಕನ್ನಡ ಜಿಲ್ಲೆ, ರಾಜ್ಯಾದ್ಯಂತ ಬಡವರಿಗೇ ತೊಂದರೆಯಾಗಿದೆ. ಈ ಸಮಸ್ಯೆಗೆ ಪರಿಹಾರ ನೀಡಿರುವ ಶಿರಸಿಯ ಮಾರಿಕಾಂಬಾ ದೇವಾಲಯ ಜಾತ್ರೆಯ ವ್ಯಾಪಾರಿಗಳಿಗೆ ತಮ್ಮ ಡಿಪಾಸಿಟ್ ನ ಕೆಲವುಭಾಗ ಮರಳಿಸಲು ನಿರ್ಧರಿಸಿದೆ. ಇದರ ಜೊತೆಗೆ ಈ ವ್ಯಾಪಾರಿಗಳು ಮತ್ತು ಬೀದಿಬದಿಯ ವ್ಯಾಪಾರಿಗಳಿಗಾಗಿ ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿಯ ಊಟ ಪೂರೈಸಲು ನಿರ್ಧರಿಸಿದೆ.
ಯುಗಾದಿಯ ವರೆಗೆ ಬೀದಿ ವ್ಯಾಪಾರ ನಿರ್ಬಂಧವಿರುವುದರಿಂದ ಅಲ್ಲಿಯವರೆಗೆ ಮಾರಿಕಾಂಬಾ ದೇವಾಲಯದಿಂದ ದಾಸೋಹ ನಡೆಯಲಿದೆ. ಶಿರಸಿಗೆ ಬಂದಿದ್ದ ನಾಟಕ ಕಂಪನಿಗಳಿಗೆ ಆಹಾರ ಸಾಮಗ್ರಿ ಸಂಗ್ರಹ ಮತ್ತು ಪೊಲೀಸರಿಗೆ ಮುಖಗವಸು ನೀಡುವ ಮೂಲಕ ಶಿರಸಿ ಪತ್ರಕರ್ತರೂ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.

ಕೃಷಿ-ಖುಷಿ ವೈಜ್ಞಾನಿಕ ಮತ್ತು ಸಾಂಪ್ರದಾಯಿಕ ಕೃಷಿಯಲ್ಲಿ ಖುಷಿ ಕಾಣುತ್ತಿರುವ ಸಿದ್ಧಾಪುರದ ಯುವಕರು
ಕೃಷಿಯಲ್ಲಿ ಸಾಧನೆ ಮಾಡಬೇಕೆಂದು ಬಯಸುವ ವಿರಳ ಯುವಕರಲ್ಲಿ ತಾಲೂಕಿನ ಹೆಮಟೆಮನೆಯ ಎಚ್.ಎಲ್. ವೇಣು ಮತ್ತು ಬೇಡ್ಕಣಿಯ ಜಯಪ್ರಕಾಶ ನಾಯ್ಕ ಪ್ರಮುಖ ಯುವಕರಾಗಿದ್ದಾರೆ.
ವೇಣು ಬಿದ್ರಕಾನ ಹೆಮಟೆಮನೆಯ ಯುವಕ. ಜನಾನುರಾಗಿಯಾಗಿದ್ದ ಇವರ ತಂದೆ ಎಲ್.ಕೆ.ಹೆಗಡೆ ಅಕಾಲಿಕವಾಗಿ ಮರಣ ಹೊಂದಿದ ನಂತರ ಬಿ.ಕಾಂ. ಪದವಿ ನಂತರ ಕೃಷಿಯಲ್ಲಿ ತೊಡಗಿಕೊಂಡರು. ಆಧುನಿಕ ಕೃಷಿ, ಹೊಸಪ್ರಯೋಗ ಎನ್ನದೆ ತಮ್ಮ ತೋಟದಲ್ಲಿ ಹಿಂದಿನಿAದ ಇದ್ದ ಕಾಫಿ,ಅಡಿಕೆ, ಕಾಳು ಮೆಣಸು ಬೆಳೆಯುತ್ತಾ,ಪಶುಸಂಗೋಪನೆಯಲ್ಲಿಯೂ ತೊಡಗಿಕೊಂಡರು.
ಪದವಿನಂತರ ಮಹಾನಗರ ಸೇರದೆ ಕುಟುಂಬದ ಜವಾಬ್ಧಾರಿ ಹೊತ್ತ ವೇಣು ಸ್ಥಳಿಯ ಸೇವಾ ಸಹಕಾರಿ ಸಂಘದ ಯುವ ಸದಸ್ಯರಾಗಿ ಸಾಂಪ್ರದಾಯಿಕ ಕೃಷಿ ಮಾಡುತ್ತಾ ಕೃಷಿಯಲ್ಲೇ ಖುಷಿ ಕಂಡಿದ್ದಾರೆ.
ಇವರ ತಂದೆ ಹಿಂದೆ ಕೃಷಿಯೊಂದಿಗೆ ಸ್ಥಳಿಯ ಸಾಮಾಜಿಕ ಜವಾಬ್ಧಾರಿ ನಿರ್ವಹಿಸುತ್ತಲೇ ಧಾರವಾಡದ ಕೆ.ಎಂ.ಎಫ್. ನಿರ್ಧೇಶಕರಾಗಿದ್ದರು. ತಂದೆಯAತೆಯೇ ಮಗ ವೇಣು ಕೂಡಾ ಕೃಷಿ, ಕೌಟುಂಬಿಕ ಜವಾಬ್ಧಾರಿ, ಸೇವಾ ಸಹಕಾರಿ ಸಂಘ ದ ಮೂಲಕ ಯುವಕರು ಹಳ್ಳಿಯಲ್ಲಿದ್ದೂ ಪೇಟೆಯಲ್ಲಿರುವವರಂತೆಯೇ ಖುಷಿಯಾಗಿ ಸಂತೃಪ್ತ ಜೀವನ ಮಾಡಬಹುದೆನ್ನುವುದಕ್ಕೆ ದೃಷ್ಟಾಂತವಾಗಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *