ಕರೋನಾ ಪರಿಣಾಮ: ವಾರದ ಸಂತೆಯ ಜಾಗ ಬದಲು

ಸಿದ್ಧಾಪುರ,ಮಾ.೧೭- ಕರೋನಾ ಎಲ್ಲರನ್ನೂ ನಡುಗಿಸುತಿದ್ದು ಇಲ್ಲಿಯ ಮಾರುಕಟ್ಟೆ ಇಲ್ಲದ ರಸ್ತೆಯ ಮೇಲೆ ನಡೆಯುತಿದ್ದ ಬುಧವಾರದ ವಾರದ ಸಂತೆಯನ್ನು ತಾತ್ಕಾಲಿಕವಾಗಿ ನೆಹರೂ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. (ಸಮಯ ಸಂಜೆ 5-30 ರ ಮೊದಲು)
ಈ ಬಗ್ಗೆ ಇಂದು ನಡೆದ ತಾಲೂಕಾ ಆಡಳಿತದ ಸಭೆಯಲ್ಲಿ ನಿರ್ಣಯಿಸಿದ್ದು ರಸ್ತೆಮೇಲೆಯೇ ನಡೆಯುತಿದ್ದ ಸಂತೆ ಸ್ಥಳಿಯರು, ಜನಸಾಮಾನ್ಯರಿಗೆ ತೊಂದರೆ ಮಾಡುವುದಲ್ಲದೆ ರಸ್ತೆಯಲ್ಲಿ ನಡೆದು ಹೋಗುವ ಜನರಿಗೆ ಕೂಡಾ ಸಂತೆಯ ಬಿಸಿ ತಾಗಲಿರುವ ಹಿನ್ನೆಲೆಯಲ್ಲಿ ಕರೋನಾ ಮುನ್ನೆಚ್ಚರಿಕೆಯಾಗಿ ವಾರದ ಸಂತೆಯ ಸ್ಥಳವನ್ನು ಹಳೆ ಜಾಗದಿಂದ ನೆಹರೂ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಸಿದ್ಧಾಪುರದ ರಸ್ತೆ ಮೇಲಿನ ಸಂತೆಯ ಬಗ್ಗೆ ಬಹುಹಿಂದಿನಿಂದಲೂ ವಿರೋಧವಿತ್ತು. ಈ ಬಗ್ಗೆ ಶಾಸಕರು, ಸಚಿವರು, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಕೆಲವರ ಹಿತಾಸಕ್ತಿಯಿಂದಾಗಿ ವಾರದ ಸಂತೆಯ ಜಾಗ ಬದಲಾಗಿರಲಿಲ್ಲ. ಈಗ ಕರೋನಾ ಭೀತಿ ಈ ರಸ್ತೆ ಮೇಲಿನ ಅವ್ಯವಸ್ಥಿತ ಸಂತೆಯನ್ನು ಸ್ಥಳಾಂತಿಸುವಂತೆ ಮಾಡಿದೆ.

ಈ ಬಗ್ಗೆ ಸಾರ್ವಜನಿಕರು ಹ಼ರ್ಷಿತರಾಗಿದ್ದು ಜನರು, ಸ್ಥಳಿಯರು ಎಲ್ಲರಿಗೂ ಅನಾನುಕೂಲವಾದ ಬುಧವಾರದ ವಾರದ ಸಂತೆಯ ಸ್ಥಳ ಬದಲಾವಣೆ ಬಗ್ಗೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ತಾಲೂಕಿನ ಮಂಗನಕಾಯಿಲೆ ಮತ್ತು ಕರೋನಾ ಮುನ್ನೆಚ್ಚರಿಕೆಗಳ ಬಗ್ಗೆ ಕೂಡಾ ಈ ತುರ್ತು ಸಭೆಯಲ್ಲಿ ಚರ್ಚೆಯಾಗಿದ್ದು ಮಂಗನಕಾಯಿಲೆ ಮತ್ತು ಕರೋನಾ ತಡೆ, ಮುನ್ನೆಚ್ಚರಿಕೆಗಾಗಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದ್ದು ಸಾರ್ವಜನಿಕರು ಭಯಮುಕ್ತರಾಗಿರಲು ವಿನಂತಿಸಿದ್ದಾರೆ.

ಮೊದಲು ಮಾನವನಾಗು ಸೂಲಿಬೆಲೆ
ಹೀಗೆಂದು ಟ್ವೀಟ್ ಮಾಡುವ ಮೂಲಕ ನಟ ಧನಂಜಯ್ ಚಕ್ರವರ್ತಿ ಸೂಲಿಬೆಲೆಯವರಿಗೆ ಟಕ್ಕರ್ ನೀಡಿದ್ದಾರೆ. ಇಂದು ಕರೋನಾ ಬಗ್ಗೆ ನಂಜಿನ ಹೇಳಿಕೆ ನೀಡಿದ ಚಕ್ರವರ್ತಿ ಸೂಲಿಬೆಲೆ ಇಟಲಿಯಲ್ಲಿ ಜನ ಸಾಯುತ್ತಿರುವ ಬಗ್ಗೆ ಏಸು ಕ್ರಿಸ್ತರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರೀಯೆ ನೀಡಿದ ನಟ ಧನಂಜಯ್ ಚುಟುಕಾಗಿ ‘ಮೊದಲು ಮಾನವನಾಗು’ ಎಂದು ಟ್ವೀಟ್ ಮಾಡಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *