ಕೋವಿಡ್೧೯ ಪರಿಣಾಮ- ಸರ್ಕಾರ, ವೈದ್ಯರ ರಗಳೆಗಳಿಂದ ಬಡವಾಗುತ್ತಿರುವ ಹೊರರೋಗಿಗಳು

ಕರೋನಾ ವೈರಸ್ ಮತ್ತು ಮಂಗನಕಾಯಿಲೆಗಳ ಬಗ್ಗೆ ವಿಶೇಶ ಗಮನ ಹರಿಸುತ್ತಿರುವ ಸರ್ಕಾರ, ಆಸ್ಫತ್ರೆಗಳ ಕ್ರಮದಿಂದ ಸರ್ಕಾರಿ ಆಸ್ಫತ್ರೆಗಳ ಇತರ ಹೊರರೋಗಿಗಳಿಗೆ ತೊಂದರೆಯಾಗುತ್ತಿರುವ ವಿದ್ಯಮಾನ ವರದಿಯಾಗಿದೆ.

ಶಿರಸಿ-ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆಯ ಸರ್ಕಾರಿ ಆಸ್ಫತ್ರೆಗಳಲ್ಲಿ ಕರೋನಾ ಸೋಂಕು ಮತ್ತು ಮಂಗನಕಾಯಿಲೆಗಳ ಬಗ್ಗೆ ವಿಶೇಶ ನಿಗಾ ವಹಿಸಲಾಗುತ್ತಿದೆ. ವೈದ್ಯರು, ಆಸ್ಫತ್ರೆಗಳು ಈ ಮಾರಕ ರೋಗಗಳ ಬಗ್ಗೆ ವಿಶೇಶ ಆಸಕ್ತಿ ವಹಿಸುತ್ತಿರುವುದರಿಂದ ಸರ್ಕಾರಿ ಆಸ್ಫತ್ರಗಳಿಗೆ ಬರುವ ಇತರ ಸಾಮಾನ್ಯ ಹೊರರೋಗಿಗಳ ಬಗ್ಗೆ ಉಪೇಕ್ಷೆಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ.
ಸಿದ್ಧಾಪುರದಲ್ಲಿ ಸೋಮವಾರ ಮಧ್ಯಾಹ್ನದ ಅವಧಿಯಲ್ಲಿ ಕೆಲವು ವೈದ್ಯರಿಲ್ಲದೆ ಸಾರ್ವಜನಿಕರು, ಮಕ್ಕಳಿಗೆ ತೊಂದರೆಯಾಯಿತು ಎಂದು ಕೆಲವರು. ದೂರಿದರು. ಒಂದುಗಂಟೆಗೇ ಊಟಕ್ಕೆ ತೆರಳುವ ವೈದ್ಯರು, ಸಿಬ್ಬಂದಿಗಳು ಮೂರು ವರೆಯವರೆಗೂ ಬಂದಿರುವುದಿಲ್ಲ. ಇದರಿಂದ ಚಿಕಿತ್ಸೆಗೆ ಬಂದು ಸರತಿಸಾಲಿನಲ್ಲಿ ಕಾಯುವವರಿಗೆ ತೊಂದರೆಯಾಗುತ್ತಿದೆ ಎಂದು ಕೆಲವರು ದೂರಿದರು.
ಮಕ್ಕಳು, ಹಿರಿಯರು ನಾಲ್ಕೈದು ತಾಸು ಸರತಿ ಸಾಲಲ್ಲಿ ನಿಂತು ಚಿಕಿತ್ಸೆ ಪಡೆಯುವ ಸ್ಥಿತಿ ಸಿದ್ದಾಪುರದಲ್ಲಿದೆ. ಆಸ್ಫತ್ರೆಗೆ ಬರುವವರೇ ಅಶಕ್ತರು, ಅನಾರೋಗ್ಯ ಉಂಟಾದವರು ಇಂಥ ಮಕ್ಕಳು, ಹಿರಿಯರನ್ನು ದಿನವಿಡೀ ಕಾಯುಸುತ್ತಿರುವುದು ಇಲ್ಲಿ ಸಾಮಾನ್ಯ. ವೈದ್ಯರು ಬಂದು ಹೋಗುವ ಬಗ್ಗೆ ನಿಯಮಿತ, ನಿಶ್ಚಿತ ಸಮಯಮಾಹಿತಿ ಇಲ್ಲದಿರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಈಗ ಈ ಕೊರೊನಾ ಸೋಂಕಿನ ಭಯ, ಈ ಅವ್ಯವಸ್ಥೆಗಳ ಬಗ್ಗೆ ಹೇಳುವವರು, ಕೇಳುವವರು ಇಲ್ಲದಂತಾಗಿರುವುದು ನಮ್ಮ ತಾಲೂಕಿನ ದೌರ್ಭಾಗ್ಯ.

  • ಕೆ.ಟಿ.ನಾಯ್ಕ ಹೆಗ್ಗೇರಿ, ತಾಲೂಕಾ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ.

ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡುವೆ:
ರಂಜನ್ ಗೊಗೊಯ್
ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ರಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ನಾಮನಿರ್ದೇಶನದ ಬಗ್ಗೆ ಮಾತನಾಡಲಿದ್ದೇನೆ ಎಂದು ಹೇಳಿದ್ದಾರೆ.
ಗೋಗೊಯ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುತ್ತಿದ್ದಂತೆಯೇ ಎಲ್ಲಾ ಕಡೆ ಅವರು ನ್ಯಾಯಮೂರ್ತಿಗಳಾಗಿದ್ದಾಗ ಮೋದಿ ಸರ್ಕಾರಕ್ಕೆ ಮಾಡಿದ ಸಹಾಯಗಳಿಗೆ ಇದು ಪ್ರತಿಫಲ ಎಂಬರ್ಥದಲ್ಲಿ ಜನರು ಟೀಕೆಗಳನ್ನು ಮಾಡಿದ್ದರು.
“ಬಹುಶಃ ನಾಳೆ ದೆಹಲಿಗೆ ಹೋಗುತ್ತೇನೆ. ಮೊದಲು ಪ್ರಮಾಣವಚನ ಸ್ವೀಕರಿಸುತ್ತೇನೆ, ನಂತರ ನಾನು ಇದನ್ನು ಏಕೆ ಒಪ್ಪಿಕೊಂಡೆ ಎಂದು ಮಾಧ್ಯಮಗಳೊಂದಿಗೆ ವಿವರವಾಗಿ ಮಾತನಾಡುತ್ತೇನೆ …” ಎಂದು ರಂಜನ್ ಗೊಗೊಯ್ ಅಸ್ಸಾಂನ ಗುವಾಹಟಿಯಲ್ಲಿ ಹೇಳಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *