ಜಾತ್ಯಾತೀತತೆಯ ಬಗ್ಗೆ ಬಲಪಂಥೀಯರ ಲಾಗಾಯ್ತಿನ ಲೇವಡಿ

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ
ಸಂವಿಧಾನ ಸಭೆಯಲ್ಲಿ ೧೯೪೯ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು, ಅದನ್ನೇ ಹೆಚ್ಚು ಆಕ್ರಮಣಕಾರಿಯಾಗಿ ಮುಂದುವರಿಸಿದ್ದಾರೆ. ಎನ್‌ಆರ್‌ಸಿ, ಸಿಎಎ ಹಿನ್ನೆಲೆಯಲ್ಲಿ ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಕೆಲ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಅಂದು ಜಾತ್ಯಾತೀತತೆಯ ಕುರಿತು ಬಲಪಂಥೀಯರ ನಿರಂತರ ಲೇವಡಿಯಿಂದ ಆತಂಕಿತರಾದವರಲ್ಲಿ ಜವಾಹರಲಾಲ್ ನೆಹರೂ ಅವರೂ ಒಬ್ಬರಾಗಿದ್ದರು. ಭಾರತದ ಎಲ್ಲಾ ಸಮಸ್ಯೆಗಳಿಗೆ ಜಾತ್ಯತೀತತೆಯೇ ಮೂಲ ಕಾರಣ ಎಂದು ಬಿಂಬಿಸಲಾಗುತ್ತಿದ್ದುದೇ ಇದಕ್ಕೆ ಕಾರಣ.
“ನಾವು ಒಂದು ಜಾತ್ಯತೀತ ರಾಷ್ಟ್ರ ಎಂದು ಹೇಳುವುದರಿಂದ ನಾವು ಅದ್ಭುತವಾದ ಔದಾರ್ಯಪೂರ್ಣವಾದುದನ್ನು ಮಾಡುತ್ತಿದ್ದೇವೆ ಎಂದಾಗಲೀ, ಜಗತ್ತಿಗೆ ನಮ್ಮ ಜೇಬಿನಿಂದ ಏನನ್ನಾದರೂ ಕೊಡುತ್ತಿದ್ದೇವೆ ಎಂದಾಗಲೀ, ನಾವು ಮಾಡಬಾರದನ್ನೇನ್ನಾದರೂ ಮಾಡುತ್ತಿದ್ದೇವೆ ಎಂದಾಗಲೀ ಅರ್ಥವಲ್ಲ.
ಜಗತ್ತಿನ ಕೆಲವು ದಾರಿತಪ್ಪಿದ ಮತ್ತು ಹಿಂದುಳಿದ ರಾಷ್ಟ್ರಗಳನ್ನು ಹೊರತುಪಡಿಸಿ ಪ್ರತಿಯೊಂದು ದೇಶವು ಮಾಡಿರುವುದನ್ನೇ ನಾವು ಮಾಡಿದ್ದೇವೆ” ಎಂದು ಅವರು ಸಂವಿಧಾನ ಸಭೆಯಲ್ಲಿ ಹೇಳಿದ್ದರು. ಆ ಮೂಲಕ ನಾಗರಿಕ ಜಗತ್ತಿನಲ್ಲಿ ಒಪ್ಪಿತವಾದ ಜಾತ್ಯತೀತ ತತ್ವಗಳನ್ನು ಸಮರ್ಥಿಸಿದ್ದರು.
ದೇಶ ವಿಭಜನೆಯ ಹಿಂಸಾಚಾರದ ಬಳಿಕವೂ ಜಾತ್ಯತೀತತೆಯ ಪರಿಕಲ್ಪನೆಯನ್ನು ಸಮರ್ಥಿಸಬಲ್ಲ ನೈತಿಕ ಸ್ಥೈರ್ಯವಿದ್ದ ಜನರು ಅಂದು ಇದ್ದರೆ, ಇಂದು ಜಾತ್ಯತೀತ ಎಂದು ಹೇಳಿಕೊಳ್ಳುವ ಪಕ್ಷಗಳಲ್ಲಿಯೂ ಈ ನಂಬಿಕೆ ಸವಕಲಾಗುತ್ತಿದೆ. ವಿಭಜನಕಾರಿ ಚಿಂತನೆಗಳಿಗೆ ಹಿಂದುತ್ವ ಪಕ್ಷಗಳ ಬಹಿರಂಗ ನಿಷ್ಟೆಗೆ ಎದುರಾಗಿ, ಜಾತ್ಯತೀತತೆಯ ಪರ ಹಿಂಜರಿಕೆಯ, ಚೈತನ್ಯವಿಲ್ಲದ ಪ್ರತಿರೋಧವಷ್ಟೇ ವ್ಯಕ್ತವಾಗುತ್ತಿದೆ. ವಾಸ್ತವವಾಗಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸುತ್ತಿರುವವರು ಮಾತ್ರ ರಾಜಕೀಯ ರಂಗದಲ್ಲಿ ಜಾತ್ಯತೀತತೆಯನ್ನು ಪುನಶ್ಚೇತನಗೊಳಿಸುತ್ತಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳು
ಗಾಂಧಿಯವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿರಲಿಲ್ಲ. ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದವರು ನಂಬಿದ್ದರು. ಇಂದಿನಂತೆ ಅಂದೂ ಕೂಡಾ ತಾವು ಗಾಂಧಿಯವರ ಅನುಯಾಯಿಗಳು ಎಂದು ಹೇಳಿಕೊಳ್ಳುವ ಕಾಂಗ್ರೆಸಿಗರಿದ್ದರು. ಆದರೆ, ಅವರು ಗಾಂಧಿಯವರ ಮೇಲಿನ ವಿಚಾರಗಳನ್ನು ತಿರಸ್ಕರಿಸಿ, ಪೌರತ್ವ ಕುರಿತ ಹಿಂದೂತ್ವವಾದಿಗಳ ಸಂಕುಚಿತ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಸೀಮಿತಗೊಳಿಸುವ ಪರಿಕಲ್ಪನೆಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸಿದ್ದರು. ಅಂತಹವರಲ್ಲಿ ಒಬ್ಬರು ಕಾಂಗ್ರೆಸಿಗ ಮಹಾವೀರ ತ್ಯಾಗಿ. ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ಚರ್ಚೆಯನ್ನು ಮುಂದೂಡಿ, ನಂತರದಲ್ಲಿ ಈ ವಿಷಯದ ಕುರಿತು ನಿರ್ಧರಿಸಬೇಕು ಎಂದು ಅವರು ಸಂವಿಧಾನ ಸಭೆಗೆ ಸಲಹೆ ಮಾಡಿದ್ದರು.
ಅವರದ್ದೇ ನಿಲುವನ್ನೇ ಗೃಹಮಂತ್ರಿ ಅಮಿತ್ ಶಾ ಇತ್ತೀಚೆಗೆ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯು ಪ್ರತಿಫಲಿಸುತ್ತದೆ. ತಮಗೆ ವಿಶೇಶ ಅವಕಾಶಗಳನ್ನು ಬೆಂಬಲಿಸುವುದಾದರೆ, ಅಲ್ಪಸಂಖ್ಯಾತರಿಗೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ನೈತಿಕ ಹಕ್ಕಿಲ್ಲ ಎಂದವರು ಹೇಳಿದ್ದರು.

ತ್ಯಾಗಿಯ ವಿಚಾರಗಳನ್ನು ಮತ್ತು ಶಾ ಪುನರುಚ್ಛಾರವನ್ನು ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ತಿರಸ್ಕರಿಸಿದ್ದರು.
“ಈ ಪ್ರಸ್ತಾಪವನ್ನು ಬೆಂಬಲಿಸಲು ಇರುವ ಏಕೈಕ ಕಾರಣವೆಂದರೆ- ಯಾರೂ ಇದನ್ನು ಊಹಿಸಬಹುದು- ಅಲ್ಪಸಂಖ್ಯಾತರ ಹಕ್ಕುಗಳು ಸಾಂಬಂಧಿಕವಾಗಿರಬೇಕು ಎಂಬುದು. ಅದರ (ತ್ಯಾಗಿ ವಾದದ) ಅರ್ಥವೆಂದರೆ ನಾವು ಹಿಂದೂಸ್ಥಾನ್ ಪ್ರದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ಯಾವುದೇ ಹಕ್ಕುಗಳನ್ನು ನೀಡುವ ಮೊದಲು ಪಾಕಿಸ್ತಾನದ ಸಂವಿಧಾನ ಸಭೆಯು ಅಲ್ಪಸಂಖ್ಯಾತರಿಗೆ ಯಾವ ಹಕ್ಕುಗಳನ್ನು ನೀಡುತ್ತದೆ ಎಂದು ಕಾದುನೋಡಬೇಕು ಎಂಬುದು” ಎಂದು ಅಂಬೇಡ್ಕರ್ ಹೇಳಿದ್ದರು.

ಶಿರಸಿ ವಿಧಾನಸಭಾ ಕ್ಷೇತ್ರದ ಬಗುರ್‌ಹುಕುಂ ಸಕ್ರಮೀಕರಣ ಸಮಿತಿ ಸದಸ್ಯರಾಗಿ ಹೊನ್ನಪ್ಪವಡ್ಡರ್ ನೇಮಕ
ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮೀತಿಯ ಶಿರಸಿ ಕ್ಷೇತ್ರದ ಸದಸ್ಯರನ್ನು ಸರ್ಕಾರ ನೇಮಿಸಿದ್ದು ಸಿದ್ಧಾಪುರದ ಹೊನ್ನಪ್ಪ ವಡ್ಡರ್ ಈ ಸಮೀತಿಯ ಸದಸ್ಯ(ಪ.ಜಾ.)ರಾಗಿ ನೇಮಕವಾಗಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಸಮೀತಿಯ ಅಧ್ಯಕ್ಷರಾಗಿ ಸ್ಥಳಿಯ ಶಾಸಕರು ಕಾರ್ಯನಿರ್ವಹಿಸಬೇಕಿದ್ದು, ಆಯಾ ತಾಲೂಕಿನ ತಹಸಿಲ್ಧಾರರು ಕಾರ್ಯದರ್ಶಿಗಳಾಗಿರುತ್ತಾರೆ. ಇಂಥ ಸಮೀತಿಯ ಸದಸ್ಯರ ಸಂಖ್ಯೆ ೫ ಕ್ಕೆ ಸೀಮಿತವಾಗಿದ್ದು, ಶಾಸಕರು,ತಹಸಿಲ್ಧಾರರು ಖಾಯಂ ಸದಸ್ಯರು, ಅಧ್ಯಕ್ಷರು, ಕಾರ್ಯದರ್ಶಿಗಳಾಗಿರುತ್ತಾರೆ.
ಸಿದ್ದಾಪುರದಿಂದ ಪ.ಜಾ.ಪ್ರತಿನಿಧಿಯಾಗಿ ಹೊನ್ನಪ್ಪ ವಡ್ಡರ್ ನೇಮಕವಾಗಿದ್ದು, ಶಿರಸಿಯ ಜಯಶ್ರೀ ಪುರುಷೋತ್ತಮ ಮಡಿವಾಳ ಮಹಿಳಾ ಪ್ರತಿನಿಧಿಯಾಗಿ ನೇಮಕವಾಗಿದ್ದಾರೆ. ಶಿರಸಿಯ ಗಜಾನನ ಹೆಗಡೆ ಮಂಡಗಾರ ಇನ್ನೊಬ್ಬ ಸದಸ್ಯರಾಗಿದ್ದಾರೆ.

ಸಿದ್ದಾಪುರ :ಕೊರೊನಾಸೋಂಕಿನಬಗ್ಗೆಮಾಹಿತಿಕಾ ರ‍್ಯಕ್ರಮಪಟ್ಟಣದನ್ಯಾಯಾಲಯದಲ್ಲಿಬುಧವಾರನಡೆಯಿತು.
ಈ ಸಂರ್ಭದ ಲ್ಲಿ ಮಾತನಾಡಿದವೈದ್ಯಾಧಿಕಾರಿಡಾ.ಶ್ರೀಪ್ರಿಯಾ,‘ ಕೊರೊನಾವೈರಸ್ ಹೊಸದಲ್ಲ. ಕೆಲವರ್ಷ ಗಳಹಿಂದೆ ಈ ವೈರಸ್ಕಂಡುಬಂದಿತ್ತು. ಈಗಪುನಃಕಾಣಿಸಿಕೊಂಡಿದೆ.ಆದರೆವಿಶ್ವದಲ್ಲಿವೇಗವಾಗಿಹರಡುತ್ತಿರುವುದರಿಂದಭೀತಿಹುಟ್ಟಿಸಿದೆ.ಅತಿಯಾದಜ್ವರಮತ್ತುಉಸಿರಾಟದತೊಂದರೆ ಈ ರೋಗದಮುಖ್ಯಲಕ್ಷಣಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *