ಕರೋನಾ ಲಾಕ್ ಔಟ್ :1.70ಲಕ್ಷ ಕೋಟಿ ತತ್ಕಾಲಿಕ ಯೋಜನೆ ಪ್ರಕಟ

ಕೊರೊನಾ ಲಾಕ್ ಔಟ್ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *