ಕರೋನಾ ಲಾಕ್ ಔಟ್ :1.70ಲಕ್ಷ ಕೋಟಿ ತತ್ಕಾಲಿಕ ಯೋಜನೆ ಪ್ರಕಟ

ಕೊರೊನಾ ಲಾಕ್ ಔಟ್ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *