ದೇಶದಲ್ಲಿ ಸಾವಿರ ಸಮೀಪಿಸಿದ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ಕಳೆದ ಮೂರುದಿವಸಗಳಲ್ಲಿ ಮೂವತ್ತು ಜನರಲ್ಲಿ ಸೋಂಕು ಧೃಡ, ಉತ್ತರ ಕನ್ನಡದಲ್ಲಿ ಇಂದು ಮೂರು ಹೊಸ ಪ್ರಕರಣಗಳು ಪತ್ತೆ!

ಕರೋನಾ ಮೂರನೇ ಹಂತ-

ದೇಶದಲ್ಲಿ ಸಾವಿರ ಸಮೀಪಿಸಿದ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ಕಳೆದ ಮೂರುದಿವಸಗಳಲ್ಲಿ ಮೂವತ್ತು ಜನರಲ್ಲಿ ಸೋಂಕು ಧೃಡ,
ಉತ್ತರ ಕನ್ನಡದಲ್ಲಿ ಇಂದು ಮೂರು ಹೊಸ ಪ್ರಕರಣಗಳು ಪತ್ತೆ!

ಸರ್ಕಾರ, ಜನರ ಸಾರ್ವಜನಿಕ, ವೈಯಕ್ತಿಕ ಕಾಳಜಿಗಳ ನಡುವೆ ವಿಶ್ವದಲ್ಲಿ ಕರೋನಾ ಸೋಂಕಿತರ ಸಂಖ್ಯೆ, ಕರೋನಾ ಸಾವುಗಳ ಸಂಖ್ಯೆ ಏರುತ್ತಿದೆ.
ಭಾರತದಲ್ಲಿ ಈ ವಾರದ ಕೊನೆಯ ದಿನವಾದ ಇಂದು ಕರೋನಾ ಸೋಂಕಿತರ ಸಂಖ್ಯೆ ಸಾವಿರ ಸಮೀಪಿಸಿದೆ. ಕರ್ನಾಟಕದಲ್ಲಿ ಈವರೆಗೆ ಕರೋನಾ ಸೋಕಿತರ ಸಂಖ್ಯೆ 75 ದಾಟಿದ್ದು ಕಳೆದ ವಾರ 25 ರಷ್ಟಿದ್ದ ಕರೋನಾ ಸೋಂಕಿತರ ಸಂಖ್ಯೆ ಕಳೆದ ನಾಲ್ಕು ದಿವಸಗಳಲ್ಲಿ ಸರಾಸರಿ ಹತ್ತರ ಸಂಖ್ಯೆಯಲ್ಲಿ ವೃದ್ಧಿಯಾಗಿದ್ದು ಮೂರನೇ ಹಂತದಲ್ಲಿ ರಾಜ್ಯದ ಕರೋನಾ ಸೋಂಕಿತರ ಸಂಖ್ಯೆ ನೂರರ ಬಳಿ ಧಾವಿಸಿದ್ದರೆ ಭಾರತದಲ್ಲಿ ಇದರ ನಾಗಾಲೋಟ ಸಾವಿರ ಸಮೀಪಿಸಿದಂತಾಗಿದೆ.
ಸ್ವಯಂ ನಿಯಂತ್ರಣ, ಗೃಹಬಂಧನ, ವ್ಯಾಪಕ ಸುರಕ್ಷತಾ ಕ್ರಮಗಳನ್ನು ಅವಲಂಬಿಸದಿದ್ದರೆ ಈ ಸಂಖ್ಯೆ ಪ್ರತಿವಾರ ನಾಲ್ಕುಪಟ್ಟು ಹೆಚ್ಚುವ ಅಪಾಯವಿದೆ. ವಿಶ್ವದಲ್ಲಿ ಕರೋನಾ ಸೊಂೀಕಿತರು 4ಲಕ್ಷ, ಸಾವುಗಳ ಸಂಖ್ಯೆ 40 ಸಾವಿರ ಅನುಪಾತದಲ್ಲಿರುವುದು ದುರಂತಕ್ಕೆ ಹಿಡಿದ ಕನ್ನಡಿಯಾಗಿದೆ. ರಾಜ್ಯ,ದೇಶ,ವಿಶ್ವದಲ್ಲಿ ಕರೋನಾ ಸೋಂಕಿತರು ಮತ್ತು ಸಾವುಗಳ ಸಂಖ್ಯೆ 1:10, ಅಥವಾ 10, 100 ಅನುಪಾತದಲ್ಲಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 7. ಇವರಲ್ಲಿ ಕೆಲವರನ್ನು ನೌಕಾನೆಲೆ, ಆಯ್.ಎನ್.ಎಸ್. ಪತಂಜಲಿ ಆಸ್ಫತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮೂರುಜನರು ಅಪಾಯದ ಹಂತದಿಂದ ಮುಕ್ತರಾಗಿದ್ದಾರೆ ಎನ್ನಲಾಗಿದೆ.
ಇಂಥ ವಿಕೋಪದ ಸಂದರ್ಭದಲ್ಲಿ ಕೂಡಾ ದೇಶದ ಜನತೆ ಸರ್ಕಾರ, ತಜ್ಞರ ಎಚ್ಚರಿಕೆ ನಿರ್ಲಕ್ಷಿಸಿ ಮನೆಯಿಂದ ಹೊರಗಿರುತ್ತಿರುವುದು ಅಪಾಯಕ್ಕೆ ಮುನ್ಸೂಚನೆಯಂತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *