ಕಣ್ಗಾವಲಿಗೆ ದ್ರೋಣ್ ಬಂತು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಮಾಸ್ಕಿಲ್ಲ, ಇತರ ಅನುಕೂಲಗಳೂ ಯಾಕಿಲ್ಲ?

ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ.
ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ ಪೊಲೀಸ್ ಇಲಾಖೆ ವೃಥಾ ಓಡಾಡುವವರನ್ನು ನಿಲ್ಲಿಸಿ ನಾವು ಲಾಕ್‍ಡೌನ್ ಉದ್ಧೇಶ ಉಲ್ಲಂಘಿಸಿದ್ದೇವೆ ಎಂದು ಫಲಕ ಹಿಡಿಸಿ ಪ್ರಾಯಶ್ಚಿತ್ತ ಮಾಡುತಿದ್ದಾರೆ. ಈ ಕ್ರಮದ ಬಗ್ಗೆ ಯಾರಿಗೂ ತಕರಾರಿರಲಿಕ್ಕಿಲ್ಲ. ಆದರೆ ಆರೋಗ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗಳಿಗೆ ಮಾಸ್ಕ್, ಸೆನಿಟೈಸರ್, ಪಾಸ್ ಸೇರಿದಂತೆ ಅವಶ್ಯ ಅನುಕೂಲಗಳನ್ನು ಮಾಡದೆ ಶೋಷಣೆ ಮಾಡುತ್ತಿರುವ ಬಗ್ಗೆ ವಿರೋಧ ವ್ಯಕ್ತವಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸೇವೆ ನೀಡುತಿದ್ದಾರೆ. ಆದರೆ ಇವರಿಗೆ ಅಗತ್ಯ ಸುರಕ್ಷತಾ ಸಲಕರಣೆಗಳೂ ಇಲ್ಲ, ಕೇಂದ್ರ ಪ್ರಕಟಿಸಿರುವ ವಿಮಾ ಅನುಕೂಲಗಳೂ ಇಲ್ಲ ಎನ್ನುವ ಆಕ್ಷೇಪ ವ್ಯಕ್ತವಾಗಿದೆ.
ಈ ಬಗ್ಗೆ ಸಮಾಜಮುಖಿಗೆ ಮಾಹಿತಿ ನೀಡಿರುವ ಕಾರ್ಮಿಕ ಮುಖಂಡೆ ಯಮುನಾ ಗಾಂವಕರ್. ಆರೋಗ್ಯ ಇಲಾಖೆಯ ಆಶಾಗಳು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಮಟ್ಟದಲ್ಲಿ ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆಯ ಕೆಲಸಗಳನ್ನೂ ಮಾಡುತಿದ್ದಾರೆ ಆದರೆ ಅವರಿಗೆ ಸುರಕ್ಷತಾ ಅನುಕೂಲಗಳನ್ನು ಕೊಡದೆ, ವಿಮಾ ಅನುಕೂಲಗಳನ್ನೂ ದೊರಕಿಸದೆ ಸರ್ಕಾರವೇ ಶೋಷಣೆ, ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಉಳ್ಳವರಿಗೊಂದು, ಇಲ್ಲದವರಿಗೊಂದು. ಹಿರಿಯ ಅಧಿಕಾರಿಗಳಿಗೊಂದು ಕೆಳಹಂತದ ಶ್ರಮಿಕ ಉದ್ಯೋಗಿಗಳಿಗೊಂದು ನ್ಯಾಯ ಎನ್ನುವ ತಾರತಮ್ಯ ಮಾಡುತ್ತಿವೆ. ಈ ಬಗ್ಗೆ ಯಾರೂ ಮಾತನಾಡದಿರುವುದುಆಶ್ಚರ್ಯ ಎಂದಿದ್ದಾರೆ. ಸಂಘಟನಾ ಶಕ್ತಿ, ಇತರ ಅನುಕೂಲ, ಅವಕಾಶಗಳಿಲ್ಲದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರಿಗೆ ಸರ್ಕಾರ ಮಾಡುತ್ತಿರುವ ತಾರತಮ್ಯ ಜನಸಾಮಾನ್ಯರ ವಿರೋಧಕ್ಕೂ ಕಾರಣವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *