ಕಣ್ಗಾವಲಿಗೆ ದ್ರೋಣ್ ಬಂತು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಮಾಸ್ಕಿಲ್ಲ, ಇತರ ಅನುಕೂಲಗಳೂ ಯಾಕಿಲ್ಲ?

ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ.
ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ ಪೊಲೀಸ್ ಇಲಾಖೆ ವೃಥಾ ಓಡಾಡುವವರನ್ನು ನಿಲ್ಲಿಸಿ ನಾವು ಲಾಕ್‍ಡೌನ್ ಉದ್ಧೇಶ ಉಲ್ಲಂಘಿಸಿದ್ದೇವೆ ಎಂದು ಫಲಕ ಹಿಡಿಸಿ ಪ್ರಾಯಶ್ಚಿತ್ತ ಮಾಡುತಿದ್ದಾರೆ. ಈ ಕ್ರಮದ ಬಗ್ಗೆ ಯಾರಿಗೂ ತಕರಾರಿರಲಿಕ್ಕಿಲ್ಲ. ಆದರೆ ಆರೋಗ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗಳಿಗೆ ಮಾಸ್ಕ್, ಸೆನಿಟೈಸರ್, ಪಾಸ್ ಸೇರಿದಂತೆ ಅವಶ್ಯ ಅನುಕೂಲಗಳನ್ನು ಮಾಡದೆ ಶೋಷಣೆ ಮಾಡುತ್ತಿರುವ ಬಗ್ಗೆ ವಿರೋಧ ವ್ಯಕ್ತವಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸೇವೆ ನೀಡುತಿದ್ದಾರೆ. ಆದರೆ ಇವರಿಗೆ ಅಗತ್ಯ ಸುರಕ್ಷತಾ ಸಲಕರಣೆಗಳೂ ಇಲ್ಲ, ಕೇಂದ್ರ ಪ್ರಕಟಿಸಿರುವ ವಿಮಾ ಅನುಕೂಲಗಳೂ ಇಲ್ಲ ಎನ್ನುವ ಆಕ್ಷೇಪ ವ್ಯಕ್ತವಾಗಿದೆ.
ಈ ಬಗ್ಗೆ ಸಮಾಜಮುಖಿಗೆ ಮಾಹಿತಿ ನೀಡಿರುವ ಕಾರ್ಮಿಕ ಮುಖಂಡೆ ಯಮುನಾ ಗಾಂವಕರ್. ಆರೋಗ್ಯ ಇಲಾಖೆಯ ಆಶಾಗಳು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಮಟ್ಟದಲ್ಲಿ ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆಯ ಕೆಲಸಗಳನ್ನೂ ಮಾಡುತಿದ್ದಾರೆ ಆದರೆ ಅವರಿಗೆ ಸುರಕ್ಷತಾ ಅನುಕೂಲಗಳನ್ನು ಕೊಡದೆ, ವಿಮಾ ಅನುಕೂಲಗಳನ್ನೂ ದೊರಕಿಸದೆ ಸರ್ಕಾರವೇ ಶೋಷಣೆ, ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಉಳ್ಳವರಿಗೊಂದು, ಇಲ್ಲದವರಿಗೊಂದು. ಹಿರಿಯ ಅಧಿಕಾರಿಗಳಿಗೊಂದು ಕೆಳಹಂತದ ಶ್ರಮಿಕ ಉದ್ಯೋಗಿಗಳಿಗೊಂದು ನ್ಯಾಯ ಎನ್ನುವ ತಾರತಮ್ಯ ಮಾಡುತ್ತಿವೆ. ಈ ಬಗ್ಗೆ ಯಾರೂ ಮಾತನಾಡದಿರುವುದುಆಶ್ಚರ್ಯ ಎಂದಿದ್ದಾರೆ. ಸಂಘಟನಾ ಶಕ್ತಿ, ಇತರ ಅನುಕೂಲ, ಅವಕಾಶಗಳಿಲ್ಲದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರಿಗೆ ಸರ್ಕಾರ ಮಾಡುತ್ತಿರುವ ತಾರತಮ್ಯ ಜನಸಾಮಾನ್ಯರ ವಿರೋಧಕ್ಕೂ ಕಾರಣವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *