ಕರೋನಾ: ಅತಿಕೆಟ್ಟ ರಾಷ್ಟ್ರೀಯ ದುರಂತವನ್ನೂ ವ್ಯಕ್ತಿ ಆರಾಧನೆಗಾಗಿ (ದುರ್ಬಳಕೆ) ಬಳಕೆ ?

ಹಿರಿಯ ಲೇಖಕ, ಚಿಂತಕ ರಾಮಚಂದ್ರ ಗುಹಾ ಅವರ ಟ್ವೀಟ್:

ಈಗಾಗಲೇ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯೊಂದು ಅಸ್ತಿತ್ವದಲ್ಲಿರುವಾಗ ಹೊಸ ನಿಧಿಯನ್ನು ಸ್ಥಾಪಿಸುವ ಅಗತ್ಯವಾದರೂ ಏನಿದೆ?

ಅದೂ ಅಲ್ಲದೆ PM-CARES ಎನ್ನುತ್ತ ತನ್ನನ್ನು ತಾನೇ ಉಬ್ಬಿಸಿಕೊಳ್ಳುವಂತೆ ಹೆಸಿರಿಟ್ಟುಕೊಳ್ಳುವುದೇಕೆ? ಒಂದು ಅತಿಕೆಟ್ಟ ರಾಷ್ಟ್ರೀಯ ದುರಂತವನ್ನೂ ವ್ಯಕ್ತಿ ಆರಾಧನೆಗಾಗಿ (ದುರ್ಬಳಕೆ) ಬಳಕೆ ಮಾಡಿಕೊಳ್ಳಬೇಕೇ?

PM-CARES ಒಂದು ಸಾರ್ವಜನಿಕ ದತ್ತಿ ಸಂಸ್ಥೆಯಾಗಿದೆ. ಪ್ರಧಾನ ಮಂತ್ರಿಯು ಅದರ ಅಧ್ಯಕ್ಷರಾಗಿದ್ದು, ದೇಶದ ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ಹಣಕಾಸು ಮಂತ್ರಿ ಈ ಸಂಸ್ಥೆಯ ಇತರ ಸದಸ್ಯರಾಗಿರುತ್ತಾರೆ.

ಸಂಸ್ಥೆಯ ಘೋಷಿತ ಧ್ಯೇಯೋದ್ದೇಶ: ಯಾವುದೇ ವಿಧವಾದ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸುವುದು ಮತ್ತು ಅದರಿಂದ ಬಾಧಿತರಾದವರಿಗೆ ಪರಿಹಾರ ಒದಗಿಸುವುದು.

ಉದಾಹರಣೆಗೆ ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಉಂಟಾಗಿರುವ ತುರ್ತು ಪರಿಸ್ಥಿತಿ.
ಇದರ ಕುರಿತು ಕೆಲವು ಪ್ರಶ್ನೆಗಳು:

1. ಸಾರ್ವಜನಿಕ ದತ್ತಿ ಸಂಸ್ಥೆಯನ್ನು ರಚಿಸಲು ತೀರ್ಮಾನಿಸಿದ್ದು ಯಾವಾಗ?

2. ಹಾಗೆ ಮಾಡಲೇಬೇಕೆಂಬ ಬಲವಾದ ಕಾರಣಗಳೇನು?

3. ಈಗಾಗಲೇ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಅಸ್ತಿತ್ವದಲ್ಲಿದ್ದರೂ ಹೊಸದಾಗಿ ಸಾರ್ವಜನಿಕ ದತ್ತಿ ಸಂಸ್ಥೆಯೊಂದನ್ನು ಸ್ಥಾಪಿಸುವುದರಿಂದ ಉಂಟಾಗುವ ಪ್ರಯೋಜನಗಳೇನು?

4. ಅದರ ನಿಯಮಾವಳಿಗಳನ್ನು (ಬೈ ಲಾ) ನೋಡಲು/ ಓದಲು ನಮಗೆ ಅವು ಎಲ್ಲಿ ಲಭ್ಯವಾಗುತ್ತವೆ?

5. ಯಾವ ಕಾಯಿದೆಯ ಅಡಿಯಲ್ಲಿ ಈ ಸಂಸ್ಥೆಯನ್ನು ನೋಂದಣಿ ಮಾಡಲಾಗಿದೆ?

6. ಎಲ್ಲಿ ಮತ್ತು ಯಾವಾಗ ಈ ನೋಂದಣಿ ಮಾಡಲಾಯಿತು?

7. ಉಪ-ನೋಂದಣಾಧಿಕಾರಿಯವರು ಪ್ರಧಾನ ಮಂತ್ರಿಯವರ ಮನೆಗೆ ಭೇಟಿ ನೀಡಿದರೇ ಅಥವಾ ಪ್ರಧಾನಿಯವರೇ ಉಪ-ನೋಂದಣಾಧಿಕಾರಿಯವರ ಕಛೇರಿಗೆ ಹೋಗಿ ಬಂದರೇ?

8. ಈ ದತ್ತಿ ಸಂಸ್ಥೆಯ ಸೆಟ್ಲರ್ (ಸಂಸ್ಥೆಯನ್ನು ಪ್ರಾರಂಭಿಸುವವ) / ಅಧ್ಯಕ್ಷ ಯಾರು? – ಭಾರತದ ಪ್ರಧಾನ ಮಂತ್ರಿಯವರೇ ಅಥವಾ ನರೇಂದ್ರ ಮೋದಿಯವರೇ?

9. ಇತರ ಸದಸ್ಯರನ್ನು ಅವರವರ ವ್ಯಕ್ತಿಗತ ಹೆಸರುಗಳಿಂದ ನಾಮಕರಣ ಮಾಡಲಾಗಿದೆಯೋ ಅಥವಾ ಅವರ ಅಧಿಕೃತ ಹುದ್ದೆಗಳ ಮೂಲಕವೋ?

10. PM-CARES ಟ್ರಸ್ಟ್ ಕಛೇರಿ ನೋಂದಣಿಯಾಗಿರುವ ಅಧಿಕೃತ ವಿಳಾಸವೇನು?

11. ಹಾಗಾದರೆ ದೀರ್ಘಕಾಲದಿಂದ ಸಾಂಸ್ಥೀಕರಣಗೊಂಡಿರುವ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ದೇಣಿಗೆ ನೀಡುವ ಬದಲಿಗೆ, ಹೊಸದಾಗಿ ಉದ್ಭವವಾಗಿರುವ ಈ ಸಾರ್ವಜನಿಕ ದತ್ತಿ ನಿಧಿಗೆ ದಾನ ಮಾಡಲು ಅಕ್ಷಯ್ ‘ಕೆನಡಾ’ ಕುಮಾರ್ (ಹಿಂದಿ ಸಿನಿಮಾ ನಟ), ವಿಜಯ್ ‘ಪೇ ಟಿಎಂ’ (ಉದ್ಯಮಿ – Paytm ಕಂಪನಿಯ ಸಂಸ್ಥಾಪಕ), ಜೇ ‘ಬಿಸಿಸಿಐ’ ಶಾ (ಅಮಿತ್ ಶಾ ಪುತ್ರ), ಮುಂತಾದವರು ಒಬ್ಬರ ಮೇಲೊಬ್ಬರು ಬೀಳುತ್ತಿರುವುದಕ್ಕೆ ಕಾರಣವೇನು?

#DeMo (ಡೀಮಾನೆಟೈಸೇಶನ್ – ನೋಟ್ ಅಮಾನ್ಯೀಕರಣ) ದ ಮರುದಿನವೇ Paytm ಜಾಹೀರಾತುಗಳಲ್ಲಿ ಮೋದಿ ಕಾಣಿಸಿಕೊಂಡಿದ್ದನ್ನು ಮರೆತಿದ್ದೀರೇನು?

– Translated by Com. Jyothi. A

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *