ಕರೋನಾ ಪರಿಣಾಮ ಲೂಟಿಗಿಳಿದ ವ್ಯಾಪಾರಿಗಳು!

ಕರೋನಾ ಮುನ್ನೆಚ್ಚರಿಕೆ ವಹಿಸದೆ ಕೇಂದ್ರ ಸರ್ಕಾರ ಮಾಡಿಟ್ಟಿರುವ ಲಾಕ್‍ಔಟ್ ನಿಂದಾಗಿ ಕೆಲವೆಡೆ ವ್ಯಾಪಾರಿಗಳು ಹಗಲುದರೋಡೆಗೆ ಇಳಿದಿರುವ ದೂರುಗಳು ಕೇಳಿ ಬರುತ್ತಿವೆ.
ಮನೆಮನೆಗೆ ತರಕಾರಿ,ಆಹಾರ ಸಾಮಗ್ರಿ ಪೂರೈಸುತ್ತಿರುವ ಸರ್ಕಾರಿ ನಿಯಂತ್ರಿತ ವ್ಯವಸ್ಥೆಯ ಲಾಭ ಪಡೆದು ವ್ಯಾಪಾರಿಗಳು ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವುದಕ್ಕೆ ಎಲ್ಲೆಡೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇರಿದಂತೆ ಕೆಲವೆಡೆ ವ್ಯಾಪಾರಿಗಳು ಸರ್ಕಾರದ ನಿಗದಿತ ದರಕ್ಕಿಂತ ಹೆಚ್ಚು ಪಡೆದು ತರಕಾರಿ, ಆಹಾರ ಸಾಮಗ್ರಗಳನ್ನು ಕೊಡುತ್ತಿರುವ ಬಗ್ಗೆ ಪತ್ರಕರ್ತರೊಬ್ಬರು ಆಕ್ಷೇಪಿಸಿದ್ದಾರೆ.

ಇಂಥದ್ದೇ ವ್ಯಾಪಾರಿಗಳು ಸಿದ್ದಾಪುರದಲ್ಲಿ ಒಂದೊಂದು ಕಟ್ಟು ಬಸಳೆ, ಹರವೆ ಸೊಪ್ಪಿನ ಕಟ್ಟಿಗೆ ತಲಾ ನೂರು, ನೂರಾ ಇಪ್ಪತ್ತು ಪಡೆದಿರುವ ಬಗ್ಗೆ ಪ್ರಚಲಿತ ಆಶ್ರಮದ ನಾಗರಾಜ್ ನಾಯ್ಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಿದ್ದಾಪುರದ ಕೋಲಶಿರ್ಸಿ ಪಂಚಾಯತ್ ವ್ಯಾಪ್ತಿಯಲ್ಲಿ ತರಕಾರಿಗಳಿಗೆ ಒಂದೊಂದು ಪಾಂಯಿಟ್ ನಲ್ಲಿ ಒಂದೊಂದು ಬೆಲೆಯಲ್ಲಿ ತರಕಾರಿ ಮಾರಿರುವ ಬಗ್ಗೆ ಸ್ಥಳಿಯರು ದೂರಿದ್ದಾರೆ.
ಹೀಗೆ ರಾಜ್ಯದಾದ್ಯಂತ ಕೆಲವು ಆಡಳಿತ ಪಕ್ಷದ ವ್ಯಾಪಾರಿಗಳು ಆಹಾರಧಾನ್ಯಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದು ಈಗ ಅಭಾವಸೃಷ್ಟಿಸಿ ಹೆಚ್ಚಿನ ಬೆಲೆಯಲ್ಲಿ ಮಾರಿ ಲಾಭ ಮಾಡಲು ಹೊಂಚುಹಾಕಿರುವ ವಿದ್ಯಮಾನವೂ ನಡೆದಿದೆ.
ಈ ತೊಂದರೆಗಳ ಬಗ್ಗೆ ಆಯಾ ತಾಲೂಕುಗಳಲ್ಲಿ ತಹಸಿಲ್ದಾರರು ಅಥವಾ ನೇರವಾಗಿ ಜಿಲ್ಲಾಧಿಕಾರಿಗಳ ಮೂಲಕ ತಮ್ಮ ತಕರಾರು ದಾಖಲಿಸಬಹುದಾಗಿದೆ. ಹಬ್ಬ-ಉತ್ಸವ, ಆಚರಣೆ, ಕಾರ್ಯಕ್ರಮಗಳಲ್ಲೆಲ್ಲಾ ಲಾಭ ಮಾಡುವ ವ್ಯಾಪಾರಿವರ್ಗ ಈಗ ಕೊರೋನಾ ಸಂಕಟವನ್ನೂ ತಮ್ಮ ಲಾಭ,ಅನುಕೂಲಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಗ್ರಾ.ಪಂ. ಮಟ್ಟದಿಂದ ನಗರಸಭೆ, ಮಹಾನಗರ ಪಾಲಿಕೆಗಳ ವರೆಗೆ ಇಂಥ ಕಷ್ಟ ಕಾಲದ ದುರುಪಯೋಗದಿಂದ ಲಾಭ ಪಡೆಯುತ್ತಿರುವ ಪಕ್ಕಾ ವ್ಯವಹಾರಸ್ಥರನ್ನು ನಿಯಂತ್ರಿಸಿ, ಜನಸಾಮಾನ್ಯರ ಶೋಷಣೆ ತಡೆಯುವ ಪ್ರಯತ್ನ ಸರ್ಕರದಿಂದ ಆಗಬೇಕಿದೆ.

ಶಿಶು ಮತ್ತು ಮಹಿಳೆಯರಿಗೆ ಮನೆಗೇ ಸೌಲಭ್ಯ, ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು?
ರಾಜ್ಯ ಮತ್ತು ದೇಶದಲ್ಲಿ ಶಿಸುಗಳು ಮತ್ತು ಮಹಿಳೆಯರಿಗೆ ಆಹಾರ ಪೂರೈಸುವ ಅಂಗನವಾಡಿಗಳ ಅಡುಗೆ ವ್ಯವಸ್ಥೆ ನಿಲ್ಲಿಸಿ ಫಲಾನುಭವಿಗಳ ಮನೆಗೆ ಆಹಾರ ಸಾಮಗ್ರಿ ಒದಿಸುವ ಸರ್ಕಾರಗಳ ಹೊಸ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ.
ಬಹಳ ವರ್ಷಗಳಿಂದ ಅಂಗನವಾಡಿಗಳಲ್ಲಿ ಆಹಾರ ತಯಾರಿಸಿ ಮಕ್ಕಳಿಗೆ,ಮಹಿಳೆಯರಿಗೆ ನೀಡುವ ವ್ಯವಸ್ಥೆ ಜಾರಿಯಲ್ಲಿತ್ತು ಆದರೆ ಇದೇ ವರ್ಷದಿಂದ ಅಂಗನವಾಡಿಗಳಲ್ಲಿ ಆಹಾರ ತಯಾರಿಕೆ ನಿಲ್ಲಿಸಿ, ಆಹಾರ ಸಾಮಗ್ರಿಗಳನ್ನು ನೇರವಾಗಿ ಮಹಿಳೆಯರು, ಮಕ್ಕಳಿಗೆ ತಲುಪಿಸುವ ವ್ಯವಸ್ಥೆಯನ್ನು ಕಾರ್ಮಿಕ ಸಂಘಟನೆಗಳು ವಿರೋಧಿಸಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *