

ಕರೋನಾ ಲಾಕ್ಔಟ್ ನಿಂದ ಮಲೆನಾಡಿನ ರೈತರು ಹಾನಿ ಅನುಭವಿಸುವಂತಾಗಿದ್ದು,ಅವರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾರದೆ ತೊಂದರೆಗೆ ಒಳಗಾಗಿದ್ದಾರೆ. ಕರಾವಳಿ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದ ರೈತರು ತೊಂದರೆಗೆ ಒಳಗಾಗಿದ್ದಾರೆ. ಬನವಾಸಿ, ಸಾಗರ, ಸೊರಬ ಪ್ರದೇಶಗಳಲ್ಲಿ ಅನಾನಸ್, ಪಪ್ಪಾಯಿ ಬೆಳೆ ಹಣ್ಣಾಗಿ ಹಾಳಾಗುತ್ತಿದೆ. ಸಿದ್ದಾಪುರ ಮತ್ತು ಗೋಕರ್ಣ ಭಾಗಗಳಲ್ಲಿ ತರಕಾರಿ ಬೆಳೆದ ರೈತರು ಹಾನಿಯಿಂದ ಕಂಗಾಲಾಗುವಂತಾಗಿದೆ.
ಈ ತೊಂದರೆಗಳ ಹಿನ್ನೆಲೆಯಲ್ಲಿ ಇಂದು ಸಿದ್ಧಾಪುರದ ಗೋಳಗೋಡಿನ ತರಕಾರಿ ಬೆಳೆಗಾರರು ಸ್ಥಳಿಯ ತಹಸಿಲ್ದಾರರಿಗೆ ಮನವಿ ನೀಡಿ ತಾವು ಬೆಳೆದ ತರಕಾರಿ ಸಾಗಾಟ, ಮಾರಾಟಗಳಿಗೆ ಅನುಕೂಲ ಮಾಡಿಕೊಡಬೇಕೆಂದು ವಿನಂತಿಸಿ ಮನವಿ ನೀಡಿದರು.



ಗೋಳಗೋಡಿನ ತರಕಾರಿ ಗದ್ದೆಗಳಿಗೆ ಭೇಟಿ ನೀಡಿ, ಸ್ಥಳ ಪರಶೀಲನೆ ಮಾಡಿದ ತಹಸಿಲ್ದಾರರು ತಾಲೂಕಿನಲ್ಲಿ ತರಕಾರಿ ಸಾಗಾಟ, ಮಾರಾಟಕ್ಕೆ ಅವಕಾಶ ನೀಡುವ ಭರವಸೆ ನೀಡಿದರು.
ಈ ರೈತರ ಸಂಕಷ್ಟದಿಂದಾಗಿ ದೀಪ ಆರಿಸಿ, ನಾಟಕ ಮಾಡುವ ಪ್ರಭುತ್ವ, ನಾಯಕತ್ವ ರೈತರು, ಜನಸಾಮಾನ್ಯರ ಹಿತ ನಿರ್ಲಕ್ಷಿಸಿ,ಕಪಟ ನಾಟಕದಲ್ಲಿ ತೊಡಗಿರುವ ಜನಪ್ರತಿನಿಧಿಗಳ ಬಗ್ಗೆಯೂ ಜನಸಾಮಾನ್ಯರು ವಿರೋಧಿಸುವಂತಾಗಿದೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
