ಲಾಕ್‍ಔಟ್ ತೊಂದರೆಗೆ ಸ್ಥಳಿಯಾಡಳಿತದ ಸಹಕಾರ, ಹಾಲಿಗೆ ಹಾಂ, ಮಾಂಸಕ್ಕೆ ನೊ!

ಮುಂಜಾಗೃತೆಯಿಲ್ಲದೆ ವಿದೇಶಿಯರು, ವಿದೇಶದಲ್ಲಿದ್ದ ಸ್ವದೇಶಿಯರನ್ನು ಒಳಗೆ ಬಿಟ್ಟುಕೊಂಡ ಕೇಂದ್ರಸರ್ಕಾರ ದಿಢೀರ್ ಲಾಕ್‍ಔಟ್ ಘೋಶಿಸಿ ದೇಶವನ್ನೇ ಗೊಂದಕ್ಕೀಡುಮಾಡಿದೆ. ಈ ಸಮಯದಲ್ಲಿ ಗ್ರಾಮ, ವಾರ್ಡ್, ಎಲ್ಲೆಡೆ ದಿನಸಿ, ತರಕಾರಿ ಪೂರೈಸುವ ಮೂಲಕ ಸ್ಥಳಿಯಾಡಳಿತ ಜನರ ತೊಂದರೆಗೆ ಸ್ಫಂಧಿಸಿದೆ.

ಈ ಪರಿಹಾರ ಕ್ರಮಗಳ ನಡುವೆ ಬಹುತೇಕ ಕಡೆ ದಿನಬಳಕೆಯ ಮೊಟ್ಟೆ, ಮಾಂಸ, ಮೀನಿಗಾಗಿ ಹಾಹಾಕಾರವೆದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸೇರಿದಂತೆ ಕೆಲವೆಡೆ ಮೀನು-ಮಾಂಸಗಳಿಗೆ ತೊಂದರೆಯಾಗುತ್ತಿಲ್ಲ ಎನ್ನುವ ವರದಿಗಳನ್ನು ಹೊರತು ಪಡಿಸಿದರೆ ಬಹುತೇಕ ಕಡೆ ಮಾಂಸಾಹಾರಿಗಳು, ಮದ್ಯಪ್ರೀಯರಿಗೆ ಅನಿವಾರ್ಯ ಸನ್ಯಾಸದ ಅನುಭವವಾಗುತ್ತಿದೆ. ಈ ಪರಿಸ್ಥಿತಿಯ ಲಾಭ ವೆಂದರೆ ನಾಟಿ ಅಥವಾ ಹಳ್ಳಿಕೋಳಿಗಳಿಗೆ ಬೇಡಿಕೆ ಹೆಚ್ಚಿದೆ. ನಾಟಿಕೋಳಿ ಸಾಕುವವರಿಗೆ ಈ ಶತಮಾನದಲ್ಲಿ ಮೊದಲ ಬಾರಿಗೆ ಮಹತ್ವ, ಪ್ರಾಮುಖ್ಯತೆ ಬಂದಿದ್ದು ನಾಟಿಕೋಳಿ ಸಾಕಾಣಿಕೆದಾರರು ಕಳೆದ ತಿಂಗಳ ದರದ ಮೂರುಪಟ್ಟು ಬೆಲೆಗೆ ಕೋಳಿಗಳನ್ನು ಮಾರಾಟ ಮಾಡುತಿದ್ದಾರೆ.

ಸಿದ್ಧಾಪುರದಲ್ಲಿ ಮೀನು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚಿಸಿರುವ ಸ್ಥಳಿಯ ಆಡಳಿತ ಮಾಂಸಾಹಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಈ ಬಗ್ಗೆ ಸಮಾಜಮುಖಿಗೆ ಪ್ರತಿಕ್ರೀಯಿಸಿದ ತಹಸಿಲ್ದಾರ ಮಂಜುಳಾ ಭಜಂತ್ರಿ ಜಿಲ್ಲಾಡಳಿತವನ್ನು ಕೇಳಿ ಈ ಬೇಡಿಕೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೆಲವು ಮೀನು, ಮಾಂಸದ ವ್ಯಾಪಾರಿಗಳು ಸಾಗಾಟದ ತೊಂದರೆಯಿಂದ ಮೀನು-ಮಾಂಸ ತರುವುದೇ ಕಷ್ಟವಾಗಿದೆ ಎಂದಿದ್ದಾರೆ ಎಂದರು.

ಸಿದ್ಧಾಪುರ ಸೇರಿದಂತೆ ರಾಜ್ಯ ದೇಶದಲ್ಲಿ ಮಾಂಸಾಹಾರಿಗಳ ಸಂಖ್ಯೆ ಪ್ರತಿಶತ 75 ಆದರೆ ಅಲ್ಫಸಂಖ್ಯೆಯ ಸಸ್ಯಾಹಾರಿಗಳಿಗೆ ಅಗತ್ಯಗಳನ್ನು ಪೂರೈಸುತ್ತಿರುವ ದೇಶದ ಆಡಳಿತ ಯಂತ್ರ ಆಹಾರ, ಆಚಾರ, ವಿಚಾರ ಸೇರಿದಂತೆ ಎಲ್ಲದರಲ್ಲೂ ಬಹುಸಂಖ್ಯಾತ 70% ಜನರಿಗೆ ವಿರುದ್ಧವಾಗಿ ವರ್ತಿಸುತ್ತಿರುವುದು ಈ ಶತಮಾನದ ಅವ್ಯವಸ್ಥೆ, ವೈದಿಕ ವೈಭೋಗಕ್ಕೆ ಸಾಕ್ಷಿ ಎನ್ನುವಂತಿದೆ.

(ಸಿದ್ದಾಪುರ,ಏ,06)
ಎಲ್ಲೆಲ್ಲಿ ಹಾಲಿನಿಂದ ಬಡಕೂಲಿ ಕಾರ್ಮಿಕರು ವಂಚಿತರಾಗಿದ್ದಾರೊ ಅವರನ್ನು ಗುರುತಿಸಿ ಕೆಎಂಎಫ್ ಹಾಲನ್ನು ಉಚಿತವಾಗಿ ವಿತರಿಸುತ್ತಿದ್ದು ಸಿದ್ದಾಪುರದಲ್ಲಿ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಪಟ್ಟಣದ ಬಡಕೂಲಿಕಕಾರ್ಮಿಕರ ಕುಟುಂಬಕ್ಕೆ ಭಾನುವಾರ ಹಾಲು ವಿತರಿಸಿದರು.
ತಹಸೀಲ್ದಾರ ಮಂಜುಳಾ ಎಸ್.ಭಜಂತ್ರಿ, ಪಪಂ ಮುಖ್ಯಾಧಿಕಾರಿ ಕುಮಾರ ನಾಯ್ಕ, ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಮಾರ್ಗದ ವಿಸ್ತರಣಾಧಿಕಾರಿ ಪ್ರಕಾಶ ಇದ್ದರು.

ಪ್ರಭುತ್ವ, ಜನಪ್ರತಿನಿಧಿಗಳ ಕಪಟನಾಟಕ, ರೈತರಿಗೆ ಸಂಕಷ್ಟ
ಕರೋನಾ ಲಾಕ್‍ಔಟ್ ನಿಂದ ಮಲೆನಾಡಿನ ರೈತರು ಹಾನಿ ಅನುಭವಿಸುವಂತಾಗಿದ್ದು,ಅವರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾರದೆ ತೊಂದರೆಗೆ ಒಳಗಾಗಿದ್ದಾರೆ. ಕರಾವಳಿ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದ ರೈತರು ತೊಂದರೆಗೆ ಒಳಗಾಗಿದ್ದಾರೆ. ಬನವಾಸಿ, ಸಾಗರ, ಸೊರಬ ಪ್ರದೇಶಗಳಲ್ಲಿ ಅನಾನಸ್, ಪಪ್ಪಾಯಿ ಬೆಳೆ ಹಣ್ಣಾಗಿ ಹಾಳಾಗುತ್ತಿದೆ. ಸಿದ್ದಾಪುರ ಮತ್ತು ಗೋಕರ್ಣ ಭಾಗಗಳಲ್ಲಿ ತರಕಾರಿ ಬೆಳೆದ ರೈತರು ಹಾನಿಯಿಂದ ಕಂಗಾಲಾಗುವಂತಾಗಿದೆ. cont..reading visit-samajamukhi.net

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *