

ಸಿದ್ಧಾಪುರ ತಾಲೂಕಿನಲ್ಲಿ ಏ.10 ರ ಶುಕ್ರವಾರ ಬಿದ್ದ ಮಳೆ ಮತ್ತು ಗಾಳಿಗೆ ಅಪಾರ ಹಾನಿಯಾಗಿದೆ. ಗ್ರಾಮೀಣ ಭಾಗದಲ್ಲಿ ಕೆಲವು ಮನೆಗಳಿಗೆ ಹಾನಿಯಾಗಿದ್ದರೆ 36 ವಿದ್ಯುತ್ ಕಂಬಗಳು ಧರೆಗುರುಳಿ ಹಾನಿಯಾಗಿದೆ. ತಾಲೂಕಿನ ಪೂರ್ವಭಾಗದಲ್ಲಿ ಮಳೆಯಾಗದೆ, ಪಶ್ಚಿಮಭಾಗದಲ್ಲಿ ಗಾಳಿಯೊಂದಿಗೆ ಮಳೆ ಸುರಿದು ಹಾನಿ ಮಾಡಿದೆ. ಹೆಸ್ಕಾಂ ಸಿಬ್ಬಂದಿಗಳು ಈ ತೊಂದರೆ ಸರಿಪಡಿಸಲು ದಿನವಿಡೀ ಶ್ರಮಿಸಿದರು.



ನೂರು ದಿವಸದಲ್ಲಿ ಲಕ್ಷ ಜನರನ್ನು ಬಲಿ ಪಡೆದ ಕರೋನಾ, ನಾನೇನೂ ಕಡಮೆ ಇಲ್ಲ ಅನ್ತು ಕ್ಯಾಸನೂರು ಅರಣ್ಯ ಕಾಯಿಲೆ!
ವಿಶ್ವದಲ್ಲಿ ಅಜಮಾಸು 1 ಲಕ್ಷ ಜನರನ್ನು ಬಲಿ ತೆಗೆದುಕೊಂಡ ಕರೋನಾ ಇಂದಿಗೆ ನೂರು ದಿವಸಗಳನ್ನು ಪೂರೈಸಿದೆ. ಈ ಕೋವಿಡ್19 ದುಷ್ಪರಿಣಾಮಗಳಿಂದಾಗಿ ರಾಜ್ಯದಲ್ಲಿ ಲಾಕ್ಡೌನ್ ಅವಧಿ ಏ.30 ರ ವರೆಗೆ ವಿಸ್ತರಣೆಯಾಗಿದೆ. ರಾಜ್ಯದಲ್ಲಿ ಈ ವರೆಗೆ 219 ಜನರು ಕರೋನಾ ಸೋಂಕು ಪೀಡಿತರಾಗಿದ್ದರೆ, 39 ಜನರು ಗುಣಮುಖರಾಗಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






