ಗಡಿಬಂದ್, ಆಸ್ಫತ್ರೆ ಇಲ್ಲ ಕರೋನಾ, ಮಂಗನಕಾಯಿಲೆ ಭೀತಿ, ಜನಪ್ರತಿನಿಧಿಗಳು ನಾಪತ್ತೆಯಾಗಿದ್ದಾರೆ!

ಉತ್ತರಕನ್ನಡ,ಶಿವಮೊಗ್ಗ ಜಿಲ್ಲೆಗಳು ಮೀನಿಗಾಗಿ, ಆಸ್ಫತ್ರೆಗಳಿಗಾಗಿ ಹಾಗೂ ಇನ್ನೂ ಅನೇಕ ಅನಿವಾರ್ಯತೆಗಳಿಗಾಗಿ ಕರಾವಳಿಯನ್ನು ಅದರಲ್ಲೂ ಉಡುಪಿ, ಮಂಗಳೂರುಗಳನ್ನು ಅವಲಂಬಿಸಿವೆ.
ಮೀನು ಮತ್ತಿತರೆ ಅಗತ್ಯಗಳು ತೀರಾ ಅನಿವಾರ್ಯವೇನಲ್ಲ ಆದರೆ ಆಸ್ಫತ್ರೆಗಳಿವೆಯಲ್ಲ ಅವು ಶಿವಮೊಗ್ಗ,ಉತ್ತರಕನ್ನಡ ಜಿಲ್ಲೆಯವರಿಗೆ ಅನಿವಾರ್ಯ.
ಈಗ ಕರೋನಾ ಭಯ, ಭೀತಿ ಪ್ರಾರಂಭವಾಗಿದೆ. ಮಂಗನಕಾಯಿಲೆ ಮಲೆನಾಡಿನ ಜನರನ್ನು ಹೆದರಿಸತೊಡಗಿದೆ. ಈ ಸ್ಥಿತಿಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳ ಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಅಂತರ್ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕರೋನಾ ಹಿನ್ನೆಲೆಯಲ್ಲಿ ಉಡುಪಿ,ಮಂಗಳೂರು ಜಿಲ್ಲೆಗಳನ್ನು ಹೊರಜಿಲ್ಲೆಗಳಿಂದ ಸಂಪರ್ಕನಿರ್ಬಂಧಿಸಿರುವುದರಿಂದ ಉತ್ತರಕನ್ನಡ, ಶಿವಮೊಗ್ಗದ ಜನರಿಗೆ ತೀವೃ ತೊಂದರೆಯಾಗಿದೆ.
ಅದೃಷ್ಟದಿಂದ ಈ ವರೆಗೆ ಘಟ್ಟದ ಮೇಲಿನ ಪ್ರದೇಶಗಳಲ್ಲಿ ಕರೋನಾ ಕಾಣಿಸಿಕೊಂಡಿಲ್ಲ ಆದರೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಂಗನ ಕಾಯಿಲೆ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಸಂಪರ್ಕ ತೊಂದರೆ ಉದ್ಭವಿಸಿದೆ. ಇದೇ ವಾರ ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಒಟ್ಟೂ 7 ಜನರಲ್ಲಿ ಮಂಗನಕಾಯಿಲೆ ಸೋಂಕು ಪತ್ತೆಯಾಗಿದೆ ಆದರೆ ಈ ರೋಗಿಗಳ ಚಿಕಿತ್ಸೆಗೆ ಮಂಗಳೂರಿಗೆ ಹೋಗುವಂತಿಲ್ಲ.
ಕರೋನಾ, ಕುಡಿಯುವ ನೀರು ಎಂದು ನಾಮಕಾವಸ್ಥೆ ಸಭೆ ನಡೆಸಿದ ರಾಜ್ಯ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ 2019-20 ರಲ್ಲಿ ಮಂಗನಕಾಯಿಲೆಯಿಂದ ಮೃತರಾದ ಕುಟುಂಬಗಳಿಗೆ ತಲಾ 2ಲಕ್ಷ ವಿತರಿಸಲಾಗಿದೆ ಎಂದಿದ್ದಾರೆ.
ವಾಸ್ತವದಲ್ಲಿ ಈ ಮೃತರ ಕುಟುಂಬಗಳಿಗೆ ಪರಿಹಾರ ದೊರೆತಿಲ್ಲ.
ಮಂಗನಕಾಯಿಲೆ ವಿಚಾರದಲ್ಲಿ ಕಳೆದ ತಿಂಗಳು ಸಾಗರ ಶಾಸಕ ಹಾಲಪ್ಪ ವಿಧಾನಸಭೆಯಲ್ಲಿ ತಮ್ಮ ಅಸಮಾಧಾನ ಸ್ಫೋಟಿಸಿದ್ದರು. ಆದರೆ ಈ ಮಂಗನಕಾಯಿಲೆ ವಿಚಾರ ಸೇರಿದಂತೆ ಅನೇಕ ವಿಚಾರಗಳಲ್ಲಿ ರಾಜ್ಯದ ಮುಖ್ಯಮಂತ್ರಿ- ವಿಧಾನಸಭೆಯ ಅಧ್ಯಕ್ಷರ ಜಿಲ್ಲೆಗಳಲ್ಲೇ ಅವಶ್ಯ ಕೆಲಸಗಳಾಗಿಲ್ಲ. ಈ ವಿದ್ಯಮಾನಗಳ ನಡುವೆ ಮಂಗಳೂರು, ಉಡುಪಿ ಜಿಲ್ಲೆಗಳ ಆಸ್ಫತ್ರೆ, ಇತರ ಅನುಕೂಲಗಳಿಗೆ ಸಂಪರ್ಕ ಸೇತುವೆಗಳಾಗಿದ್ದ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಈ ತೊಂದರೆ ಬಗ್ಗೆ ಈ ಭಾಗದ ಜನಪ್ರತಿನಿಧಿಗಳ್ಯಾರೂ ಧ್ವನಿ ಎತ್ತಿದ ಉದಾಹರಣೆಗಳಿಲ್ಲ. ಚುನಾವಣೆ, ಇತರ ಅನಾವಶ್ಯಕ ವಿಚಾರಗಳಲ್ಲಿ ಮೂಗು ತೂರಿಸುವ ಶಿವಮೊಗ್ಗ, ಉತ್ತರಕನ್ನಡ, ಮಂಗಳೂರುಗಳ ಸಂಸದರು ಈ ಬಗ್ಗೆ ಮಾತನಾಡಬಹುದೆಂದು ನಿರೀಕ್ಷಿಸುವುದೂ ತಪ್ಪು.
ಈ ರಗಳೆಗಳ ನಡುವೆ ಭಟ್ಕಳ ಶಾಸಕ ಸುನಿಲ್ ನಾಯ್ಕ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‍ ರ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಪತ್ರ ಪಡೆದವರು ಅನಿವಾರ್ಯತೆಯಲ್ಲಿ ಉಡುಪಿ, ಮಂಗಳೂರು ಪ್ರವೇಶಿಸಲು ಅವಕಾಶ ಮಾಡಿದ್ದಾರೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಫತ್ರೆ,ಆರೋಗ್ಯ ವ್ಯವಸ್ಥೆ ಮಾಡದ ಇಲ್ಲಿಯ ಕಾಲುಶತಮಾನದ ಜನಪ್ರತಿನಿಧಿಗಳು ಮಾತ್ರ ಈಗಲೂ ಮಾಡೋಣ, ನೋಡೋಣ ಎನ್ನುತಿದ್ದಾರೆ.

ನಾಳೆಯಿಂದಲೇ ಮೀನುಗಾರಿಕೆ ಪ್ರಾರಂಭ, ಊರೂರಿಗೆ ಬರಲಿದೆ ಮೀನು!
ಬುಧವಾರದಿಂದಲೇ ಕರಾವಳಿಯಲ್ಲಿ ಮೀನುಗಾರಿಕೆ ಪ್ರಾರಂಭವಾಗಲಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲಾಕ್ ಡೌನ್ ನಿಯಮ, ಸಾಮಾಜಿ ಅಂತರದ ನಿಬಂಧನೆಗಳ ನಡುವೆ ಮೀನುಗಾರರ ಹಿತಾಸಕ್ತಿ, ಮೀನುಪ್ರೀಯರ ಅವಶ್ಯಕತೆ ಅನುಲಕ್ಷಿಸಿ ರಾಜ್ಯದ ಕರಾವಳಿಯಲ್ಲಿ ನಾಳೆಯಿಂದಲೇ ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *