ಕರೋನಾ ಸಿನೇಮಾ- ಭಯವೆಂಬ ಮಾರಿಯ ಮುಷ್ಟಿಯಲ್ಲಿ ಇನ್ನೊಂದು ಥ್ರಿಲ್ಲರ್‌ “ಕಂಟೇಜಿಯನ್’

ನಾಳೆ ಆಕ್ಸ್‌ಫರ್ಡ್‌ನಲ್ಲಿ ಕೊರೊನಾ ವಿರುದ್ಧ (ವಿಶ್ವದ) ಮೊದಲ ವ್ಯಾಕ್ಸೀನ್ ಪ್ರಯೋಗ ಆರಂಭವಾಗಲಿದೆ. ಹತ್ತಿಪ್ಪತ್ತು ತಿಂಗಳ ಬದಲು ಕೇವಲ ಮೂರು ತಿಂಗಳಲ್ಲೇ ಸೃಷ್ಟಿಯಾದ ಈ ಲಸಿಕೆ ‘ಯಶಸ್ವಿ’ ಎಂಬುದು ಸಾಬೀತಾದರೆ ಇಷ್ಟೊಂದು ಜನರಿಗೆ ಅದನ್ನು ಹೇಗೆ ವಿತರಿಸುತ್ತಾರೆ? ಆಗ ಎಂತೆಂಥ ತರಲೆ ಡ್ರಾಮಾಗಳು ನಡೆಯಬಹುದು? 2011ರಲ್ಲಿ ತಯಾರಾದ ‘ಕಂಟೇಜಿಯನ್’ (ಸಾಂಕ್ರಾಮಿಕ) ಹೆಸರಿನ ಹಾಲಿವುಡ್ ಸಿನೆಮಾದ ಕಥೆಯೂ ಕೊರೊನಾ ಮಾದರಿಯಲ್ಲೇ ಸಾಗುತ್ತದೆ.

ಭಯದ ಮುಷ್ಟಿಗೆ ಸಿಕ್ಕ ಜನ ನಾಳೆ ಏನೇನು ಮಾಡಬಹುದು ಎಂಬುದರ ಮುನ್ನೋಟವೂ ಇದರಲ್ಲಿದೆ. ಕಥಾ ಸಾರಾಂಶ ಹೀಗಿದೆ: ಚೀನಾದ ಮಳೆಕಾಡಿನಲ್ಲಿ ತಂತಾನೆ ಬೆಳೆದಿದ್ದ ಕಾಡುಬಾಳೆಯ ಮರವನ್ನು ಬುಲ್ಡೋಝರ್ ಬಂದು ನೆಲಸಮ ಮಾಡುತ್ತದೆ. ಅದರಲ್ಲಿ ಅವಿತಿದ್ದ ಬಾವಲಿಯೊಂದು ತನ್ನ ಬಾಯಲ್ಲಿದ್ದ ಬಾಳೆಹಣ್ಣಿನ ತುಣುಕಿನ ಸಮೇತ ಹಾರಿ ಹೋಗುತ್ತದೆ. ಹೋಗಿ ಅದು ಕಾಡಂಚಿನಲ್ಲಿದ್ದ ಹಂದಿಸಾಕಣೆ ಕೇಂದ್ರದ ಸೂರಿಗೆ ಜೋತುಬೀಳುತ್ತದೆ. ಅದರ ಬಾಯಿಯಿಂದ ಕೆಳಕ್ಕೆ ಬಿದ್ದ ಬಾಳೆಹಣ್ಣನ್ನು ಹಂದಿಯೊಂದು ತಿನ್ನುತ್ತದೆ.ಬಾವಲಿಯಲ್ಲಿದ್ದ ವೈರಸ್ ಈಗ ಹಂದಿಯ ದೇಹಕ್ಕೆ ಬರುತ್ತದೆ. ಜ್ವರಪೀಡಿತ ಹಂದಿಯ ಮಾಂಸ ಹಾಂಗ್‌ಕಾಂಗ್‌ನ ಒಂದು ಹೊಟೆಲ್ಲಿನ ಅಡುಗೆ ಮನೆಗೆ ಬರುತ್ತದೆ. ಅಲ್ಲಿನ ಊಟವನ್ನು ಮೆಚ್ಚಿದ ಅಮೆರಿಕದ ಅತಿಥಿ ಬೆಥ್‌ ಎಂಬಾತ ಅಡುಗೆಹುಡುಗಿಗೆ ಶೇಕ್ ಹ್ಯಾಂಡ್ ಮಾಡಿದಾಗ ವೈರಸ್ ಅವನಿಗೂ ತಗಲುತ್ತದೆ. ಸ್ವದೇಶಕ್ಕೆ ಹಿಂದಿರುಗಿದ ಬೆಥ್ ತನ್ನ ಮಾಜಿ ಪತ್ನಿಯೊಂದಿಗೆ ಸರಸವಾಡುತ್ತಾನೆ. ಮರುದಿನ ಅವಳು ಮೈನಡುಕ ಹತ್ತಿ, ಮೂರ್ಛೆ ಬಿದ್ದು ಸಾಯುತ್ತಾಳೆ. ಅವಳ ಮಗನೂ ಸಾಯುತ್ತಾನೆ. ತನಿಖೆಗೆ ಬಂದ ವೈದ್ಯ ಸಂಶೋಧಕಿಯೂ ಸಾಯುತ್ತಾಳೆ.ವೈರಸ್‌ ಅನೇಕ ನಗರಗಳಿಗೆ ವಿಸ್ತರಿಸುತ್ತ ವೈರಲ್‌ ಆಗುತ್ತದೆ. ಲಾಕ್‌ಡೌನ್‌, ಕ್ವಾರಂಟೈನ್‌, ಲೂಟಿ, ದೊಂಬಿ ಎಲ್ಲ ಶುರುವಾಗುತ್ತದೆ.

ವಿಜ್ಞಾನಿಗಳು ವೈರಸ್ಸಿನ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ತಿಣುಕುತ್ತಿದ್ದಾಗ, ಪ್ರಭಾವೀ ಗಣ್ಯನೊಬ್ಬ “ಇದು ಚೀನೀಯರ ಜೀವಾಣು ಅಸ್ತ್ರವೇ ಹೌದು“ ಎಂದು ಟಿವಿಯಲ್ಲಿ ವಾದಿಸುತ್ತಾನೆ. ತಾನೂ ಕಾಯಿಲೆ ಬಿದ್ದಿದ್ದೆನೆಂದೂ ಹೋಮಿಯೋಪಥಿ ಔಷಧವೊಂದರಿಂದ ಚೇತರಿಸಿಕೊಂಡೆನೆಂದೂ ಟಿವಿ ಚಾನೆಲ್‌ಗಳಲ್ಲಿ ಪ್ರಸಿದ್ಧಿ ಪಡೆಯುತ್ತಾನೆ. ಆ ಬೋಗಸ್‌ ಔಷಧ ಪಡೆಯಲು ಎಲ್ಲೆಡೆ ಪೈಪೋಟಿ ನಡೆಯುತ್ತದೆ. ಅತ್ತ ಅಟ್ಲಾಂಟಾದ ರೋಗಪತ್ತೆ ಕೇಂದ್ರದ ವಿಜ್ಞಾನಿಯೊಬ್ಬಳು ಅಹೋರಾತ್ರಿ ಶ್ರಮಿಸಿ ಲಸಿಕೆ (ವ್ಯಾಕ್ಸಿನ್) ತಯಾರಿಸುತ್ತಾಳೆ. ಅದನ್ನು ಸಾರ್ವಜನಿಕರ ಮೇಲೆ ಪ್ರಯೋಗಿಸಿ ಪರೀಕ್ಷಿಸಲು ಹೋದರೆ ತುಂಬಾ ಸಮಯ ಬೇಕಾಗುತ್ತದೆಂದು ತನ್ನ ಮೇಲೆಯೇ ಪ್ರಯೋಗಿಸಿ, ನಂತರ ತಾನೇ ವೈರಸ್ಸನ್ನು ಅಂಟಿಸಿಕೊಳ್ಳುತ್ತಾಳೆ. ಅವಳಿಗೆ ರೋಗ ತಗಲುವುದಿಲ್ಲ. ಲಸಿಕೆ ಯಶಸ್ವಿ ಎಂದು ಗೊತ್ತಾದಾಗ ಅದನ್ನು ಪಡೆಯಲು ಪ್ರಭಾವಿಗಳ ನೂಕುನುಗ್ಗಲು ನಡೆಯುತ್ತದೆ. ನಂತರ ಲಾಟರಿ ಮೂಲಕ (ಅವರವರ ಜನ್ಮದಿನಾಂಕದ ಪ್ರಕಾರ) ಲಸಿಕೆ ವಿತರಣೆ ಆರಂಭವಾಗುತ್ತದೆ. ಅಷ್ಟರಲ್ಲೇ ಅಮೆರಿಕದಲ್ಲಿ 25ಲಕ್ಷ ಜನ ಹಾಗೂ ಇತರ ದೇಶಗಳಲ್ಲಿ 26 ಲಕ್ಷ ಜನ ಸತ್ತಿರುತ್ತಾರೆ.ರೋಗದ ಮೂಲ ಯಾವುದೆಂದು ಶೋಧಿಸಲು ಚೀನಾಕ್ಕೆ ಹೋದ ವಿಜ್ಞಾನಿ ಲಿಯೊನಾರಾಳನ್ನು ಸ್ಥಳೀಯರು ಹಿಡಿದು ಅಡಗಿಸುತ್ತಾರೆ. ತಮಗೂ ವ್ಯಾಕ್ಸಿನ್‌ ಕೊಟ್ಟರೆ ಮಾತ್ರ ಅವಳನ್ನು ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ.

ವಿಸ್ವಾಸಂ ಅಧಿಕಾರಿಗಳು ವ್ಯಾಕ್ಸಿನ್ ತಂದು ವಿತರಣೆ ಆರಂಭಿಸಿದ ಮೇಲೆ ಅವಳ ಬಿಡುಗಡೆಯಾಗುತ್ತದೆ. ಆದರೆ ಅಲ್ಲಿ ವಿತರಿಸಿದ್ದು ವ್ಯಾಕ್ಸಿನ್‌ ಅಲ್ಲ, ಸುಳ್ಳೌಷಧ ಎಂದು ಗೊತ್ತಾಗಿ ಲಿಯೊನಾರಾ ಹೇಗಾದರೂ ಅಲ್ಲಿನ ಮುಗ್ಧರನ್ನು ಬಚಾವು ಮಾಡಲೆಂದು…ಹೋರಾಡುವಲ್ಲಿ ಕಥೆ ಕ್ಲೈಮ್ಯಾಕ್ಸಿಗೆ ಬರುತ್ತದೆ.

[ಇದು ವೈಜ್ಞಾನಿಕವಾಗಿಯೂ ಸರ್ವಸಂಪನ್ನ ಚಿತ್ರವೆಂದು ತಜ್ಞರಿಂದ ಪ್ರಶಂಸೆ ಪಡೆದ ಚಿತ್ರ. ಈಗಿನ ಕೊರೊನಾ ಮಾರಿಯಿಂದಾಗಿ ಈ ಹಳೇ ಸಿನೆಮಾಕ್ಕೆ ಈಗ ಭಾರಿ ಡಿಮಾಂಡ್ ಬಂದಿದೆ. ಸತತ ಎರಡು ವಾರಗಳಿಂದ ಅದು ಅತಿ ಹೆಚ್ಚು ಡೌನ್ಲೋಡ್ ಮಾಡಿಸಿಕೊಂಡ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ].

by- ನಾಗೇಶ್ ಹೆಗಡೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *