ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಅಗಲಿಕೆ

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *