ಅಮ್ಮಿನಮಟ್ಟು ಬರೆದ ಹೃದಯದ ಮಾತು

ನಮ್ಮೆಲ್ಲರ ಗೆಳೆಯ ಮಹೇಂದ್ರ ಕುಮಾರ್ ಸಾವಿಗೆ ನಿಜವಾದ ಕಾರಣ ನನಗೆ ಗೊತ್ತು, ಹೃದಯಾಘಾತ ಎನ್ನುವುದು ವೈದ್ಯರು ಹೇಳುವ ಕಾರಣ. ನಿಜವಾದ ಕಾರಣ ಅವರು ಬುದ್ದಿಯ ಮಾತು ಕೇಳದೆ ಹೃದಯದ ಮಾತಿಗೆ ಕಿವಿಕೊಟ್ಟದ್ದು ಅಂದರೆ ಅವರ ಒಳ್ಳೆಯತನ.ಒಳ್ಳೆಯವರಾಗಿರುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಒಳ್ಳೆಯವರಾಗಿದ್ದರೆ ಒಂದೋ ಕೆಟ್ಟವರು ನಿಮ್ಮನ್ನು ಕೊಲ್ಲುತ್ತಾರೆ, ಇಲ್ಲದೆ ಇದ್ದರೆ ನಿಮ್ಮ ಆರೋಗ್ಯ ಕೊಲ್ಲುತ್ತೆ. ಒಳ್ಳೆಯತನ ಎಂದರೆ ಏನು? ನಿಮ್ಮ ಸುತ್ತಲು ನಡೆಯುತ್ತಿರುವ ಅನ್ಯಾಯ, ಮೋಸ, ಹಿಂಸೆ, ಶೋಷಣೆ, ಹಿಪಾಕ್ರಸಿಗಳನ್ನು ಕಂಡಾಗ ನಿಮ್ಮ ಮನಸ್ಸು ಸಿಡಿಯುತ್ತದೆ, ಮರುಗುತ್ತದೆ. ಅದು ನಿಮ್ಮನ್ನು ಕುಟುಕುತ್ತಾ ಇರುತ್ತದೆ, ನಿಮ್ಮನ್ನು ಒಳಗೊಳಗೆ ಬೇಯುವಂತೆ ಮಾಡುತ್ತದೆ. ನಿಮ್ಮನ್ನು ವಿರೋಧಿಸಲು, ಬೀದಿಗಿಳಿದು ಪ್ರತಿಭಟಿಸಲು, ಜನರ ನಡುವೆ ಹೋಗಿ ಜಾಗೃತಿಗೊಳಿಸಲು ಪ್ರಚೋದಿಸುತ್ತಾ ಇರುತ್ತದೆ.ಆಗ ಮಧ್ಯೆ ಪ್ರವೇಶಿಸುವ ನಿಮ್ಮ ಬುದ್ದಿ ‘’ನಿನಗ್ಯಾಕಯ್ಯಾ ಊರ ಉಸಾಬರಿ, ನಿನ್ನ ಬದುಕು ನೋಡ್ಕೊ. ಮನೆಯಲ್ಲಿ ಹೆಂಡತಿ ಮಕ್ಕಳಿದ್ದಾರೆ, ಅವರ ಬಗ್ಗೆ ಯೋಚನೆ ಮಾಡು. ಜನರ ಬದುಕಿನ ಬಗ್ಗೆ ಅವರಿಗೇ ಇಲ್ಲದ ಕಾಳಜಿ ನಿನಗ್ಯಾಕಯ್ಯಾ? ತಮ್ಮ ಅನ್ನದ ಬಟ್ಟಲಿಗೆ ವಿಷ ಹಾಕುವವರಿಗೆ, ತಮ್ಮ ಬದುಕು ಕಿತ್ತುಕೊಳ್ಳುವವರಿಗೆ ಅವರು ಜೈಕಾರ ಹಾಕುತ್ತಿದ್ದಾರೆ. ಅವರು ಹಾಗೆಯೇ ಇರ್ಲಿ ಬಿಡಿ, ಅವರ ಪರವಾಗಿ ನೀನ್ಯಾಕೆ ತಲೆ ಜಜ್ಜಿಕೊಳ್ತಿ’’ ಎಂದು ತಲೆಗೆ ಮೊಟಕುತ್ತಾ ಇರುತ್ತದೆ.ಇದು ಮನುಷ್ಯರೆಲ್ಲರ ಮನಸ್ಸಿನೊಳಗೆ ನಡೆಯುವ ಬುದ್ದಿ ಮತ್ತು ಹೃದಯದ ನಡುವಿನ ಭೀಕರ ಯುದ್ಧ. ಸೋನಿಯಾಗಾಂಧಿಯೇನು ಮಹೇಂದ್ರಕುಮಾರ್ ಅಕ್ಕನೋ,ತಂಗಿಯೋ? ಆಕೆಯ ಪಕ್ಷದವರೇ ಹಾಯಾಗಿರುವಾಗ ಮಹೇಂದ್ರ ಕುಮಾರ್ ಯಾಕೆ ಸೋನಿಯಾಗಾಂಧಿಗೆ ಯಾವನೋ ತಲೆಕೆಟ್ಟ ಪತ್ರಕರ್ತ ಬೈದರೆ ಡಿಸ್ಟರ್ಬ್ ಆಗ್ಬೇಕು? ಗೆಳೆಯ ಸುಧೀರ್ ಕುಮಾರ್ ಮುರೊಳ್ಳಿಗೆ ಪೋನ್ ಮಾಡಿ ಸೋನಿಯಾ ಗಾಂಧಿ ಬಗ್ಗೆ ಒಂದು ವಿಡಿಯೋ ಮಾಡಯ್ಯಾ? ನಾನು ಅದನ್ನು ‘ನಮ್ಮ ಧ್ವನಿ’ಯಲ್ಲಿ ಹಾಕ್ತೇನೆ ಎಂದು ಯಾಕೆ ಕಾಡಬೇಕು?ಮಂಗಳೂರಿನಲ್ಲಿ ಸಂಜೆಯಿಂದ ರಾತ್ರಿ ಎರಡು ಗಂಟೆ ವರೆಗೆ 76 ವರ್ಷದ ಹಿರಿಯ ಜೀವದ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಊರೆಲ್ಲಾ ಹೊತ್ತು ತಿರುಗಾಡುವಂತಹ ಪರಿಸ್ಥಿತಿಯನ್ನು ಕಂಡಾಗ ಮಹೇಂದ್ರಕುಮಾರ್ ಯಾಕೆ ಸಿಡಿಯಬೇಕು? ಆ ಮಹಿಳೆಯೇನು ಅವರ ಅಮ್ಮನೋ? ಅತ್ತೆಯೋ?ತಪ್ಪು ಮಹೇಂದ್ರ ಕುಮಾರ್ ಅವರದ್ದು. ಅವರು ಬುದ್ದಿಯ ಮಾತು ಕೇಳಬೇಕಿತ್ತು, ಕೇಳಿದ್ದರೆ ಅಲ್ಲಿಯೇ ಅವರು ಆ ‘ಪರಿವಾರ’ದಲ್ಲಿಯೇ ಹಾಯಾಗಿ ಇರಬಹುದಿತ್ತು. ಈಗ ಗೂಟದ ಕಾರಲ್ಲಿ ಸೀಟಿ ಹಾಕಿಕೊಂಡು ತಿರುಗಾಡಬಹುದಿತ್ತು. ಹೃದಯದ ಮಾತು ಕೇಳಿ ಅವರು ತಪ್ಪು ಮಾಡಿದರು,. ಹೃದಯ ಬಹಳ ಸೂಕ್ಷ್ಮ ದುರ್ಬಲ, ಅದು ಬಹಳ ಬೇಗ ಕೈಚೆಲ್ಲಿ ಬಿಡುತ್ತೆ, ಕುಸಿದುಬಿಡುತ್ತೆ. ಪ್ರೀತಿಯ ಮಹೇಂದ್ರಕುಮಾರ್, ಬರೆಯುವುದು ಬಹಳಷ್ಟಿದೆ, ನೀವು ಬದುಕಿದ್ದರೆ ನಮ್ಮ ನಿಮ್ಮ ನಡುವಿನ ಸಹಮತ-ಭಿನ್ನಮತಗಳ ಬಗ್ಗೆಯೂ ಮಾತನಾಡುವುದಿತ್ತು, ಜಗಳ ಮಾಡುವುದಿತ್ತು. ಈಗ ಅದನ್ನು ಕಟ್ಟಿಕೊಂಡು ಏನು ಮಾಡಲಿ?ಆಸ್ಪತ್ರೆಯ ಮೋರ್ಚರಿಯಲ್ಲಿ ಮಲಗಿದ್ದ ನಿಮ್ಮ ಮುಖ ಶಾಂತವಾಗಿತ್ತು, ನಿಮ್ಮ ಕಣ್ಣಲ್ಲಿ ಕಣ್ಣೀರು ಇರಲಿಲ್ಲ. ನೀವು ಕಣ್ಣೀರು ಹಾಕಿದ್ದನ್ನು ನಾನೆಂದೂ ನೋಡಿರಲಿಲ್ಲ. ಆದರೆ ದೂರದಲ್ಲಿ ನಿಂತು ಮೌನವಾಗಿ ಬಿಕ್ಕುತ್ತಿದ್ದ ನಿಮ್ಮ ಪತ್ನಿಯ ಕಣ್ಣಲ್ಲಿ, ಹತ್ತಿರ ಬಂದು ನಿಮ್ಮನ್ನು ನೋಡಿ ಬಿಕ್ಕಿಬಿಕ್ಕಿ ಅಳುತ್ತಿದ್ದ ನಿಮ್ಮೆರಡು ಮಕ್ಕಳ ಕಣ್ಣಲ್ಲಿ ಕಣ್ಣೀರು ಇತ್ತು. ಅದನ್ನು ನಾನು ನೋಡಬಾರದಿತ್ತು. ನಿಮ್ಮ ಶಾಂತ ಮುಖಚರ್ಯೆಗಿಂತಲೂ ಆ ಕಣ್ಣೀರಿನ ಮುಖಗಳು ನನ್ನನ್ನು ಕಾಡುತ್ತಿವೆ, ಬಹುಷ: ನಾನು ಬದುಕಿರುವಷ್ಟು ದಿನವೂ ಅದು ನಮ್ಮೆಲ್ಲರನ್ನು ಕಾಡುತ್ತಲೇ ಇರಬಹುದು. ನೀವು ಹೀಗೆ ಮಾಡಬಾರದಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

  1. ದಿನೇಶ್ ರ, ಹೃದಯದ ಮಾತಿಗೆ ಬುದ್ಧಿ ಪ್ರೇರೇಪಣೆ ಮಾಡಿದಂತಿದೆ. ಮಹೇಂದ್ರ ಕುಮಾರ್ ಬಜರಂಗದಳದಿಂದ ಹೊರಬಂದು ಜೀವಪರ ನಿಲುವು ಪಡೆಯಲು ಹೃದಯ ಹೇಳಿತೆ ಅಥವಾ, ಬುದ್ಧಿಯೆ? ಅವರು ಅಲ್ಲಿಯೇ ಇದ್ದು ಮಾಡಬಹುದಾಗಿದ್ದ/ ಪಡೆಯಬಹುದಾಗಿದ್ದ ಹಣ, ಅಧಿಕಾರ, ಸ್ಥಾನಮಾನಗಳ ಮೇಲೂ, ‘ಹಕ್ಕಿ ಹಾರು’ವುದಿಲ್ಲವೆ?

    ಮಹೇಂದ್ರ ಕುಮಾರ್ ಅವರ ಮನೆಯವರಿಗೆ ಈ ನೋವು ತಾಳಿಕೊಳ್ಳುವ ಶಕ್ತಿ ಬರಲಿ ಎಂದು ಆಶಿಸುತ್ತೇನೆ.

Leave a Reply

Your email address will not be published. Required fields are marked *