ಕೊರೋನಾ ವೈರಸ್ ಹರಡಲು ಮುಸ್ಲಿಮರು ಕಾರಣ ಎಂದು ಇಡೀ ಸಮುದಾಯವನ್ನು ದೂಷಿಸಬೇಡಿ:ಮೋಹನ್ ಭಾಗವತ್

ಕೆಲವರು ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನು ದೂಷಿಸುವುದು ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

Mohan Bhagavat(File photo)

Source : Online Desk

ಮುಂಬೈ: ಕೆಲವರು ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನು ದೂಷಿಸುವುದು ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಭಾರತದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಾರಕ ಕೊರೋನಾ ವೈರಸ್ ಹರಡಲು ದೆಹಲಿಯಲ್ಲಿ ಕಳೆದ ತಿಂಗಳ ಆರಂಭದಲ್ಲಿ ತಬ್ಲಿಘಿ ಜಮಾತ್ ಸಮಾವೇಶ ಆಯೋಜಿಸಿದ್ದೇ ಕಾರಣ. ಇಲ್ಲಿ ಪ್ರಪಂಚದ ಹಲವು ದೇಶಗಳಿಂದ ಬಂದಿದ್ದ ಮುಸಲ್ಮಾನರ ಜೊತೆಗೆ ಭಾಗವಹಿಸಿದ್ದ ನಮ್ಮದೇಶದ ವಿವಿಧ ರಾಜ್ಯಗಳ ಮುಸ್ಲಿಮರ ಮೂಲಕ ಇಡೀ ದೇಶಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಕೊರೋನಾ ಹರಡಿತು ಎಂಬ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಅದರ ಬಗ್ಗೆ ಮಾತನಾಡಿದ್ದಾರೆ.

ತಬ್ಲಿಘಿ ಸಮಾವೇಶದಲ್ಲಿ ಪಾಲ್ಗೊಂಡವರಿಂದ ಕೊರೋನಾ ಹರಡಿತು ಎಂದು ಕೆಲವರು ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯದವರು ಸರಿಯಿಲ್ಲ ಎಂದು ಹೇಳುವುದು ಸರಿಯಲ್ಲ.  ಈ ಸಂದರ್ಭದಲ್ಲಿ ಜಾತಿ, ಧರ್ಮ,ಬೇಧಭಾವ ತೋರಿಸದೆ ಕೊರೋನಾ ಸೋಂಕಿತರಿಗೆ ಎಲ್ಲರೂ ಸಹಾಯ ಮಾಡುವುದು ಅಗತ್ಯ ಎಂದರು.

ಅಕ್ಷಯ ತೃತೀಯ ಅಂಗವಾಗಿ ಲಾಕ್ ಡೌನ್ ಮಧ್ಯೆ ನಾಗ್ಪುರದಿಂದ ಆನ್ ಲೈನ್ ಮೂಲಕ ಮಾತನಾಡಿದ ಅವರು, ಭಾರತದ ಎಲ್ಲಾ 130 ಕೋಟಿ ಜನರು ನಮ್ಮ ಕುಟುಂಬ. ಭಾರತೀಯರಾದ ನಾವೆಲ್ಲರೂ ಒಂದೇ. ಕೆಲವರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ಬೈಯುವುದು ಸರಿಯಲ್ಲ. ಎರಡೂ ಸಮುದಾಯಗಳ ಪ್ರಬುದ್ಧ ಜನರು ಮುಂದೆ ಬಂದು ಮಾತುಕತೆ ನಡೆಸಿ ಜನರ ಮನಸ್ಸಿನಲ್ಲಿರುವ ಪೂರ್ವಾಗ್ರಹ ಪೀಡಿತ ಮನೋಭಾವನೆಯನ್ನು ಹೋಗಲಾಡಿಸಬೇಕು ಎಂದರು.

ಮಹಾರಾಷ್ಟ್ರದ ಪಲ್ಗಾರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಬ್ಬರು ಸಾಧುಗಳ ಸಾಮೂಹಿಕ ಹತ್ಯೆಗೆ ಪೊಲೀಸರು ಕಾರಣ ಎಂದು ಪರೋಕ್ಷವಾಗಿ ಆರೋಪಿಸಿದರು. ದಾಳಿಕೋರರ ಮೇಲೆ ಆರೋಪ ಮಾಡಿದ ಅವರು, ಗ್ರಾಮಸ್ಥರು ಕಾನೂನನ್ನು ತಮ್ಮ ಕೈಗೆತ್ತಿಕೊಳ್ಳಬಾರದಿತ್ತು. ಇಬ್ಬರು ಸಾಧುಗಳು ಮುಗ್ಧರಾಗಿದ್ದರು.ಬೇರೆ ಬೇರೆಯವರು ಹೇಳುವ ಮಾತುಗಳನ್ನು ಪಕ್ಕಕ್ಕಿಟ್ಟು ನೋಡಿ, ಮುಗ್ಧ ಜನರನ್ನು ಕೊಲ್ಲುವುದು ಸರಿಯೇ ಎಂದು ಕೇಳಿದರು.

ಈ ಕೊರೋನಾ ಸಂಕಷ್ಟದಲ್ಲಿ ಆರ್ ಎಸ್ಎಸ್ ದೇಶಾದ್ಯಂತ ಸಹಾಯ ಮಾಡುತ್ತಿದ್ದು 3 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ದೇಶದ 55 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ 33 ಲಕ್ಷ ಕಿಟ್ ಗಳನ್ನು ವಿತರಿಸಿದ್ದು ಏಪ್ರಿಲ್ 24ರವರೆಗೆ 2 ಕೋಟಿ ಆಹಾರ ಪೊಟ್ಟಣಗಳನ್ನು ವಿತರಿಸಿದ್ದೇವೆ. ಇಲ್ಲಿ ಮಾಡಿರುವ ಕೆಲಸದ ಬಗ್ಗೆ ಹೇಳಿಕೊಳ್ಳದೆ ಇನ್ನೊಬ್ಬರಿಗೆ ಸಹಾಯ ಮಾಡುವುದು ಮುಖ್ಯ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *