ಲಾಕ್ ಡೌನ್ ವಿಸ್ತರಣೆಯಾದರೆ ಹಸಿವಿನಿಂದಲೇ ಹೆಚ್ಚು ಜನರ ಸಾವು: ನಾರಾಯಣಮೂರ್ತಿ

ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕೊರೋನಾ ವೈರಸ್ ಗಿಂತ ಹಸಿವಿಗೇ ಹೆಚ್ಚಿನ ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

NR Narayana Murthy

Source : UNI

ಬೆಂಗಳೂರು: ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕೊರೋನಾ ವೈರಸ್ ಗಿಂತ ಹಸಿವಿಗೇ ಹೆಚ್ಚಿನ ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ನಾರಾಯಣ ಮೂರ್ತಿ ಅವರು, ದೇಶದಲ್ಲಿ ಲಾಕ್ ಡೌನ್ ವಿಸ್ತರಣೆಯಾಗುತ್ತಾ ಮುಂದೆ, ಮುಂದೆ ಹೋದರೆ ಕೊರೋನಕ್ಕಿಂತಲೂ ಹೆಚ್ಚು ಜನರು ಹಸಿವಿನಿಂದಲೇ ಸಾಯಬಹುದು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರಯಾಗಲಿದೆ  ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ತುಂಬಾ ದಿನ ಮುಂದವರಿಯಲು ಸಾಧ್ಯವಿಲ್ಲ ಎನ್ನುವ ಸತ್ಯವನ್ನು ನಾವು ಮೊದಲು ಅರಿತುಕೊಳ್ಳಬೇಕು. ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾವಿನ ಪ್ರಮಾಣ ಶೇ.0.25ರಿಂದ 0.5 ರಷ್ಟು ಮತ್ತು ಪಾಸಿಟೀವ್ ಪ್ರಕರಣಗಳು ಬಹಳ, ತೀರಾ ಕಡಿಮೆ  ಇದೆ. ಪ್ರಮುಖವಾಗಿ ಮಾಲಿನ್ಯದ ಕಾರಣದಿಂದ ಹಾಗೂ ಇತರೆ ಕಾರಣದಿಂದ ದೇಶದಲ್ಲಿ ಸರಾಸರಿ ಒಂಬತ್ತು ಮಿಲಿಯನ್ ಜನರು ಸಾವನ್ನಪ್ಪುತ್ತಿದ್ದಾರೆ. ಇದು ದೊಡ್ಡ ಅಪತ್ತು. ಆದರೂ ಕಳೆದ ಎರಡು ತಿಂಗಳ ಅವಧಿಯಲ್ಲಿ ಕೊರೊನಾ ಸೋಂಕಿನ ಹಾವಳಿಯಯಿಂದ ದೇಶದಲ್ಲಿ ಸುಮಾರು  ಒಂದು ಸಾವಿರ ಜನ ಸಾವನ್ನಪ್ಪಿದ್ದರೂ, ದೇಶದ ಒಟ್ಟಾರೆ ಕೊರೋನ, ಮತ್ತು ಸಾವಿನ ಪ್ರಮಾಣ ಬಹಳ ಕಳವಳ, ಮತ್ತು ಆತಂಕಾರಿಯಾಗಿಲ್ಲ ಎಂದೂ ನಾರಾಯಣ ಮೂರ್ತಿ ಹೇಳಿದ್ದಾರೆ.

ದೇಶದಲ್ಲಿ 1.9 ಕೋಟಿಯಷ್ಟು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೆ ಕೆಲವರು ಸ್ವಯಂ ಉದ್ಯೋಗಿಗಳಾಗಿದ್ದಾರೆ. ಇಷ್ಟು ಬೃಹತ್‌ ಸಂಖ್ಯೆಯ ಉದ್ಯೋಗಿಗಳು ಲಾಕ್‌ಡೌನ್‌ ನಿಂದಾಗಿ ತಮ್ಮ ಜೀವನೋಪಾಯವನ್ನೇ ಕಳೆದುಕೊಂಡು ಕೂತಿದ್ದಾರೆ. ಲಾಕ್‌ಡೌನ್‌  ದೀರ್ಘಕಾಲದವರೆಗೆ ಮುಂದುವರಿದರೆ” ಒಂದು ಹೊತ್ತಿನ ಊಟಕ್ಕೂ ನೆಲೆ ಇಲ್ಲದಂತಾಗಿ ಕೂರುವಂತಾಗುತ್ತದೆ. ದೇಶದಲ್ಲಿ ಪ್ರತಿವರ್ಷ ಸರಾಸರಿ 90 ಲಕ್ಷ ಜನ ಸಾಯುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಕೊರೊನಾ ವೈರಸ್‌ನಿಂದಾಗಿ 1,000 ಜನ ಬಲಿಯಾಗಿದ್ದಾರೆ. ಸಹಜ  ಸಾವುಗಳಿಗೂ, ಕೊರೊನಾ ಸಾವುಗಳಿಗೂ ತಾಳೆ ಹಾಕಿದರೆ ಕೊರೊನಾ ಸಾವುಗಳು ಅತಿ ಕಡಿಮೆ ಎಂದೇ ಹೇಳಬಹುದು. ಹೀಗಾಗಿ ಕೊರೊನಾ ಸೋಂಕು ನಾವು ಅಂದುಕೊಂಡಿರುವಷ್ಟು ಭೀಕರವಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ಯುವಕರಲ್ಲಿ ಈ ಸೋಂಕು ಇದ್ದರೂ ಕೂಡ ಯಾವುದೇ ಲಕ್ಷಣಗಳು ಗೋಚರಿಸುವುದಿಲ್ಲ. ಭಾರತೀಯರ ಆನುವಂಶೀಯತೆ, ಇಲ್ಲಿನ ಬೆಚ್ಚನೆಯ ಹವಾಮಾನ ಅಥವಾ ವ್ಯಾಪಕವಾದ ಬಿಸಿಜಿ ವ್ಯಾಕ್ಸಿನೇಷನ್ ಕಾರಣದಿಂದಾಗಿ ಭಾರತದಲ್ಲಿ ಮರಣ ಪ್ರಮಾಣ ಕಡಿಮೆಯಾಗಿದೆ ಎಂದು  ನಾರಾಯಣ ಮೂರ್ತಿ ಅವರು ಹಲವು ಅಂಶಗಳತ್ತ ಗಮನಸೆಳೆದಿದ್ದಾರೆ. ಈ ಕುರಿತು ಸಂಶೋಧನೆಗೂ ಕರೆ ನೀಡಿದ್ದಾರೆ. ಹಿರಿಯರು ಮತ್ತು ಆರೋಗ್ಯ ಸಮಸ್ಯೆಗಳಿರುವವರು ಸಾಮಾಜಿಕ ಅಂತರ ಅನುಸರಿಸಲು ಮತ್ತು ಸುರಕ್ಷತಾ ಕ್ರಮ ಕೈಗೊಳ್ಳಲು ಸಹಾಯ ಮಾಡಬೇಕು. ಸಾಫ್ಟ್‌ವೇರ್‌  ಕಂಪನಿಗಳಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವಂತೆ ಹೇಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಕುರಿತೂ ಗಮನಸೆಳೆದಿದ್ದಾರೆ. “ಒಂದು ಶಿಫ್ಟ್‌ನಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನೇ ಮೂರು ಶಿಫ್ಟ್‌ಗಳಾಗಿ ವಿಂಗಡಿಸಬಹುದು. ಇದರಿಂದ ಸಾಮಾಜಿಕ ಅಂತರ  ಅನುಸರಿಸಬಹುದು ಎಂದು ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *