ಲಾಕ್ ಡೌನ್ ವಿಸ್ತರಣೆಯಾದರೆ ಹಸಿವಿನಿಂದಲೇ ಹೆಚ್ಚು ಜನರ ಸಾವು: ನಾರಾಯಣಮೂರ್ತಿ

ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕೊರೋನಾ ವೈರಸ್ ಗಿಂತ ಹಸಿವಿಗೇ ಹೆಚ್ಚಿನ ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

NR Narayana Murthy

Source : UNI

ಬೆಂಗಳೂರು: ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕೊರೋನಾ ವೈರಸ್ ಗಿಂತ ಹಸಿವಿಗೇ ಹೆಚ್ಚಿನ ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ನಾರಾಯಣ ಮೂರ್ತಿ ಅವರು, ದೇಶದಲ್ಲಿ ಲಾಕ್ ಡೌನ್ ವಿಸ್ತರಣೆಯಾಗುತ್ತಾ ಮುಂದೆ, ಮುಂದೆ ಹೋದರೆ ಕೊರೋನಕ್ಕಿಂತಲೂ ಹೆಚ್ಚು ಜನರು ಹಸಿವಿನಿಂದಲೇ ಸಾಯಬಹುದು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರಯಾಗಲಿದೆ  ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ತುಂಬಾ ದಿನ ಮುಂದವರಿಯಲು ಸಾಧ್ಯವಿಲ್ಲ ಎನ್ನುವ ಸತ್ಯವನ್ನು ನಾವು ಮೊದಲು ಅರಿತುಕೊಳ್ಳಬೇಕು. ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾವಿನ ಪ್ರಮಾಣ ಶೇ.0.25ರಿಂದ 0.5 ರಷ್ಟು ಮತ್ತು ಪಾಸಿಟೀವ್ ಪ್ರಕರಣಗಳು ಬಹಳ, ತೀರಾ ಕಡಿಮೆ  ಇದೆ. ಪ್ರಮುಖವಾಗಿ ಮಾಲಿನ್ಯದ ಕಾರಣದಿಂದ ಹಾಗೂ ಇತರೆ ಕಾರಣದಿಂದ ದೇಶದಲ್ಲಿ ಸರಾಸರಿ ಒಂಬತ್ತು ಮಿಲಿಯನ್ ಜನರು ಸಾವನ್ನಪ್ಪುತ್ತಿದ್ದಾರೆ. ಇದು ದೊಡ್ಡ ಅಪತ್ತು. ಆದರೂ ಕಳೆದ ಎರಡು ತಿಂಗಳ ಅವಧಿಯಲ್ಲಿ ಕೊರೊನಾ ಸೋಂಕಿನ ಹಾವಳಿಯಯಿಂದ ದೇಶದಲ್ಲಿ ಸುಮಾರು  ಒಂದು ಸಾವಿರ ಜನ ಸಾವನ್ನಪ್ಪಿದ್ದರೂ, ದೇಶದ ಒಟ್ಟಾರೆ ಕೊರೋನ, ಮತ್ತು ಸಾವಿನ ಪ್ರಮಾಣ ಬಹಳ ಕಳವಳ, ಮತ್ತು ಆತಂಕಾರಿಯಾಗಿಲ್ಲ ಎಂದೂ ನಾರಾಯಣ ಮೂರ್ತಿ ಹೇಳಿದ್ದಾರೆ.

ದೇಶದಲ್ಲಿ 1.9 ಕೋಟಿಯಷ್ಟು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೆ ಕೆಲವರು ಸ್ವಯಂ ಉದ್ಯೋಗಿಗಳಾಗಿದ್ದಾರೆ. ಇಷ್ಟು ಬೃಹತ್‌ ಸಂಖ್ಯೆಯ ಉದ್ಯೋಗಿಗಳು ಲಾಕ್‌ಡೌನ್‌ ನಿಂದಾಗಿ ತಮ್ಮ ಜೀವನೋಪಾಯವನ್ನೇ ಕಳೆದುಕೊಂಡು ಕೂತಿದ್ದಾರೆ. ಲಾಕ್‌ಡೌನ್‌  ದೀರ್ಘಕಾಲದವರೆಗೆ ಮುಂದುವರಿದರೆ” ಒಂದು ಹೊತ್ತಿನ ಊಟಕ್ಕೂ ನೆಲೆ ಇಲ್ಲದಂತಾಗಿ ಕೂರುವಂತಾಗುತ್ತದೆ. ದೇಶದಲ್ಲಿ ಪ್ರತಿವರ್ಷ ಸರಾಸರಿ 90 ಲಕ್ಷ ಜನ ಸಾಯುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಕೊರೊನಾ ವೈರಸ್‌ನಿಂದಾಗಿ 1,000 ಜನ ಬಲಿಯಾಗಿದ್ದಾರೆ. ಸಹಜ  ಸಾವುಗಳಿಗೂ, ಕೊರೊನಾ ಸಾವುಗಳಿಗೂ ತಾಳೆ ಹಾಕಿದರೆ ಕೊರೊನಾ ಸಾವುಗಳು ಅತಿ ಕಡಿಮೆ ಎಂದೇ ಹೇಳಬಹುದು. ಹೀಗಾಗಿ ಕೊರೊನಾ ಸೋಂಕು ನಾವು ಅಂದುಕೊಂಡಿರುವಷ್ಟು ಭೀಕರವಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ಯುವಕರಲ್ಲಿ ಈ ಸೋಂಕು ಇದ್ದರೂ ಕೂಡ ಯಾವುದೇ ಲಕ್ಷಣಗಳು ಗೋಚರಿಸುವುದಿಲ್ಲ. ಭಾರತೀಯರ ಆನುವಂಶೀಯತೆ, ಇಲ್ಲಿನ ಬೆಚ್ಚನೆಯ ಹವಾಮಾನ ಅಥವಾ ವ್ಯಾಪಕವಾದ ಬಿಸಿಜಿ ವ್ಯಾಕ್ಸಿನೇಷನ್ ಕಾರಣದಿಂದಾಗಿ ಭಾರತದಲ್ಲಿ ಮರಣ ಪ್ರಮಾಣ ಕಡಿಮೆಯಾಗಿದೆ ಎಂದು  ನಾರಾಯಣ ಮೂರ್ತಿ ಅವರು ಹಲವು ಅಂಶಗಳತ್ತ ಗಮನಸೆಳೆದಿದ್ದಾರೆ. ಈ ಕುರಿತು ಸಂಶೋಧನೆಗೂ ಕರೆ ನೀಡಿದ್ದಾರೆ. ಹಿರಿಯರು ಮತ್ತು ಆರೋಗ್ಯ ಸಮಸ್ಯೆಗಳಿರುವವರು ಸಾಮಾಜಿಕ ಅಂತರ ಅನುಸರಿಸಲು ಮತ್ತು ಸುರಕ್ಷತಾ ಕ್ರಮ ಕೈಗೊಳ್ಳಲು ಸಹಾಯ ಮಾಡಬೇಕು. ಸಾಫ್ಟ್‌ವೇರ್‌  ಕಂಪನಿಗಳಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವಂತೆ ಹೇಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಕುರಿತೂ ಗಮನಸೆಳೆದಿದ್ದಾರೆ. “ಒಂದು ಶಿಫ್ಟ್‌ನಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನೇ ಮೂರು ಶಿಫ್ಟ್‌ಗಳಾಗಿ ವಿಂಗಡಿಸಬಹುದು. ಇದರಿಂದ ಸಾಮಾಜಿಕ ಅಂತರ  ಅನುಸರಿಸಬಹುದು ಎಂದು ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *