ಸುಹಾಸ್ ಮಾಳ್ಕೋಡಗೆ ” ಕಲಾಭೂಷಣ” ಪುರಸ್ಕಾರ

ಕಲೆಯಲ್ಲಿ ಪ್ರತಿಭೆ ಇದೆ. ಹಾಗಾಗಿ ಕಲಾಭೂಷಣ. ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲಾ ಸ್ಪರ್ಧೆಯಲ್ಲಿ ವಿಜೇತರ ಚಿತ್ರ ಗಳಿಗಿಂತ ವಿಭಿನ್ನತೆಯಿಂದ ಕೂಡಿದ ಚಿತ್ರ ರಚಿಸಿದ ಮಕ್ಕಳನ್ನು “ಕಲಾಭೂಷಣ” ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಸುಮಾರು 1800 ಮಕ್ಕಳಲ್ಲಿ ಒಂದೊಂದು ಅದ್ಭುತ ಪ್ರತಿಭೆಗಳಿದ್ದವು. ಮಕ್ಕಳ ಪ್ರತಿಭೆಗೆ ಒಂದು ವೇದಿಕೆ ಕೊಡೋಣ ಎಂದು ನಮ್ಮ ತಂಡ ಈ ಪುರಸ್ಕಾರವನ್ನು ನೀಡಲು ತಿರ್ಮಾನಿಸಿತು.

:-ನಾಮದೇವ ಕಾಗದಗಾರ, ಸಂಘಟಕರು.

ಸಿದ್ಧಾಪುರ:ತಾಲ್ಲೂಕಿನ ಕೋಲಶಿರ್ಸಿಯ ಕು.ಸುಹಾಸ್ ಎನ್. ನಾಯ್ಕ ಮಾಳ್ಕೋಡ ರಾಜ್ಯ ಮಟ್ಟದ “ಕಲಾಭೂಷಣ” ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾನೆ. ರಾಣಿಬೆನ್ನೂರಿನ ಕಾಗದ ಸಾಂಗತ್ಯ ವೇದಿಕೆ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲಾ ಸ್ಪರ್ಧೆ-2020ರಲ್ಲಿ ವಿಭಿನ್ನತೆಯಿಂದ ಕೂಡಿದ ಚಿತ್ರ ರಚಿಸಿದ 10ವಿದ್ಯಾರ್ಥಿಗಳನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ. ಈತ ಪಟ್ಟಣದ ಸಿದ್ಧಿವಿನಾಯಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ. ಸ್ಪರ್ಧೆಯಲ್ಲಿ ರಾಜ್ಯಾದ್ಯಂತ 1868 ಮಕ್ಕಳು ಚಿತ್ರ ರಚಿಸಿ ಭಾಗವಹಿಸಿದ್ದರು.
ಕೊರೊನಾ ವೈರಸ್ ನ ಭೀತಿಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ರಾಣಿಬೆನ್ನೂರಿನ ಕಾಗದ ಸಾಂಗತ್ಯ ವೇದಿಕೆ ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲಾ ಸ್ಪರ್ಧೆಯನ್ನು ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 1868 ಮಕ್ಕಳು ಮೂರು ವಿಭಾಗಗಳಲ್ಲಿ ‘ಪರಿಸರ ಜಾಗೃತಿ ‘ ಚಿತ್ರ ರಚಿಸಿ ಭಾಗವಹಿಸಿದ್ದರು.

ಮಕ್ಕಳ ಚಿತ್ರವನ್ನು ವಾಟ್ಸಪ್ ಮತ್ತು ಇ-ಮೇಲ್ ಮೂಲಕ ತರಿಸಿಕೊಂಡ ವೇದಿಕೆ ಮಕ್ಕಳಲ್ಲಿಯ ಕ್ರಿಯಾಶೀಲತೆಗೆ ಅನುಗುಣವಾಗಿ ಆಯ್ಕೆಯ ಮಾನದಂಡವನ್ನು ಇಟ್ಟುಕೊಂಡು ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರ ಚಿತ್ರಗಳಿಗಿಂತ ವಿಭಿನ್ನತೆಯಿಂದ ಕೂಡಿದ ಚಿತ್ರ ರಚಿಸಿದ ಮಕ್ಕಳಿಗೆ “ಕಲಾಭೂಷಣ” ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆಯುತ್ತಿರುವ ಕು. ಸುಹಾಸ್ ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ವಿವಿಧ ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ “ಕಲಾಶ್ರೀ” ಸ್ಪರ್ಧೆಗೆ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಈತನ ಈ ಸಾಧನೆಗೆ ಪಾಲಕರು ಹಾಗೂ ಶಾಲಾ ಶಿಕ್ಷಕರು ಅಭಿನಂದಿಸಿದ್ದಾರೆ.
ಕಲಾಭೂಷಣ ಪುರಸ್ಕಾರ:

ಸುಹಾಸ್ ನೊಂದಿಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ 8ನೇ ತರಗತಿಯ ರೆಹಾನ್ ಅಹ್ಮದ್, ಶಿವಮೊಗ್ಗದ 10ನೇ ತರಗತಿಯ ಸ್ನೇಹಶ್ರೀ ಎಸ್ ಜಿ., ಧಾರವಾಡದ 8ನೇ ತರಗತಿಯ ಮೋಹಿತ್ ಎಸ್ ಮತ್ತೋಡು, ಉಡುಪಿಯ 9ನೇ ತರಗತಿಯ ಬಿ. ಪಿ. ಪ್ರಾಥನಾ ಹೆಬ್ಬಾರ, 6ನೇ ತರಗತಿಯ ಆಸ್ಮಿ ಪ್ರಭು, ಚಿಕ್ಕಬಳ್ಳಾಪುರದ 9ನೇ ತರಗತಿಯ ಕಾವ್ಯಾಶ್ರೀ ವಿ., ಮಂಡ್ಯದ 7ನೇ ತರಗತಿಯ ಸೌಂದರ್ಯ ಎನ್., ಹೂವಿನಹಡಗಲಿಯ 9ನೇ ತರಗತಿಯ ಮರಿಯಪ್ಪ ಬಾವಿಮನಿ, ಹಾವೇರಿಯ 4ನೇ ತರಗತಿಯ ವಿ. ಆರ್. ಗೌತಮಿ ಇವರುಗಳನ್ನು ಆಯ್ಕೆ ಮಾಡಲಾಗಿದೆ.
———‐————-

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

1 Comment

  1. ಖುಷಿ. ಸುಹಾಸನಿಗೆ ಶುಭಾಶಯಗಳು

Leave a Reply

Your email address will not be published. Required fields are marked *