‘ಪತ್ರಕರ್ತ’ರು ಎಂದು ಕರೆಸಿಕೊಳ್ಳುವ ಯೋಗ್ಯತೆ ಇದೆಯೇ?

ಕನ್ನಡ ಸುದ್ದಿ ಚಾನೆಲ್ ಗಳ ಎಲ್ಲ ಮುಖ್ಯಸ್ಥರಿಗೆ ನನ್ನ ನಮಸ್ಕಾರಗಳು. ಇದು ನಾನು ನಿಮಗೆಲ್ಲ ಬರೆಯುತ್ತಿರುವ ಬಹಿರಂಗ ಪತ್ರ. ಈ ವಿಷಯದ ಕುರಿತು ನಿಮ್ಮಲ್ಲಿ ಯಾರೇ ಯಾವ ವೇದಿಕೆಯಲ್ಲಿ ಬಹಿರಂಗ ಚರ್ಚೆ ಮಾಡಲು ಕರೆದರೂ ನಾನು ಬರಲು ಸಿದ್ಧ.

ಈವತ್ತು ಒಮ್ಮೆ ನಿಮ್ಮ ಮನೆ ಅಥವಾ ಕಚೇರಿಯಲ್ಲಿನ ಕನ್ನಡಿಯ ಮುಂದೆ ಹೋಗಿ ನಿಲ್ಲಿ. ಒಂದೈದು ನಿಮಿಷ ಕನ್ನಡಿಯ ಮುಂದೆ ನಿಂತು ’ಪತ್ರಕರ್ತ’ ಎಂದು ಕರೆಸಿಕೊಳ್ಳುವ ಯೋಗ್ಯತೆ ನಿಮಗಿದೆಯೇ ಎನ್ನುವುದನ್ನು ಯೋಚಿಸಿ. ಅದೇ ರೀತಿ ನಿಮ್ಮ ಮನೆಯಲ್ಲಿರುವ ಪತ್ನಿ, ಮಕ್ಕಳು, ತಂದೆ-ತಾಯಿಯ ಎದುರು ನಿಂತು ಅದೇ ಪ್ರಶ್ನೆಯನ್ನು ಕೇಳಿ. ಕನಿಷ್ಠ ಅವರು ನಿಮ್ಮ ನಿಲುವನ್ನು ಸಮರ್ಥಿಸುತ್ತಾರಾ ಎಂದು ಅರಿತುಕೊಳ್ಳಿ.

ಇದುವರೆಗೆ ನಿಮ್ಮಗಳ ಕುರಿತು ಒಬ್ಬ ಪತ್ರಕರ್ತನಾಗಿ ನಾನು ಈ ರೀತಿಯ ಬಹಿರಂಗ ಹೇಳಿಕೆ ನೀಡಿಲ್ಲ. ಈವತ್ತು ನೀಡುತ್ತಿದ್ದೇನೆ ಏಕೆಂದರೆ, ನೀವೆಲ್ಲ ನಿಮ್ಮ ನಿಮ್ಮ ಸುದ್ದಿ ವಾಹಿನಿಗಳಲ್ಲಿ ಮದ್ಯದಂಗಡಿಗಳ ತೆರೆಯುವಿಕೆಯ ಕುರಿತು ಸಂಭ್ರಮಿಸುತ್ತಿರುವ ರೀತಿ. ಇದ್ಯಾವ ಪತ್ರಿಕಾ ವ್ಯವಸಾಯ? ಯಾವ ರೀತಿಯ ವರದಿಗಾರಿಕೆ?

ನಿಮಗೆಲ್ಲ ಒಂದಿಷ್ಟು ಅಂತಃಸಾಕ್ಷಿಯಿದ್ದಿದ್ದರೆ, ಈ ಸಮಾಜದ ಬಗ್ಗೆ ಕಳಕಳಿ ಇದ್ದಿದ್ದರೆ ಈ ಅವಕಾಶವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಸಂಪೂರ್ಣ ಮದ್ಯ ನಿಷೇಧದ ಬಗ್ಗೆ ಲಾಬಿ ಮಾಡಬೇಕಿತ್ತು. ಸದಾ ಮದ್ಯ ನಿಷೇಧದ ಬಗ್ಗೆ ಕನಸು ಕಾಣುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗಡೆ, ಹೆಗ್ಗೋಡಿನ ರಂಗಕರ್ಮಿ ಪ್ರಸನ್ನ… ಮುಂತಾದ ಗಣ್ಯರನ್ನು ನೀವು ಉಪಯೋಗಿಸಿಕೊಂಡು ಸರ್ಕಾರವನ್ನು ಮತ್ತು ಮದ್ಯದ ಲಾಬಿಯನ್ನು ಮಣಿಸಬೇಕಿತ್ತು.

ಅಬಕಾರಿ ಆದಾಯವೇ ಬಹಳ ದೊಡ್ಡದು ಎಂಬ ಸರ್ಕಾರದ ಮಾತನ್ನು ನೀವು ನಂಬಿದರೆ ನಿಮಗಿಂತ ದೊಡ್ಡ ಮೂರ್ಖರಿಲ್ಲ. ಮೇಲ್ನೋಟಕ್ಕೆ ಅಬಕಾರಿ ಆದಾಯ ಸರ್ಕಾರದ ಒಂದಿಷ್ಟು ಬೊಕ್ಕಸ ತುಂಬಿಸುತ್ತಿರಬಹುದು. ಆದರೆ, ಪರೋಕ್ಷವಾಗಿ ಜನರ ಆರೋಗ್ಯದ ಮೇಲೆ ಆಗುತ್ತಿರುವ ಪರಿಣಾಮ ಮತ್ತು ಅದರ ನಿರ್ವಹಣೆಗೆ ಸರ್ಕಾರ ಖರ್ಚು ಮಾಡುತ್ತಿರುವ ಹಣದ ಪ್ರಮಾಣ ಬರುತ್ತಿರುವ ಆದಾಯಕ್ಕಿಂತ ನಾಲ್ಕು ಪಟ್ಟು.

ಈ ವಿಷಯವನ್ನು ರಾಜಕಾರಣಿಗಳಿಗೆ, ನಮ್ಮನ್ನು ಆಳುತ್ತಿರುವವರಿಗೆ ಮನನ ಮಾಡಿಕೊಡಲು ಸಿಕ್ಕಿದ್ದ ಬಹಳ ದೊಡ್ಡ ಅವಕಾಶವನ್ನು ನೀವೆಲ್ಲ ಕಳೆದುಕೊಂಡಿರಿ. ಹಾಗೆ ಮಾಡುವುದನ್ನು ಬಿಟ್ಟು ನೀವಿಂದು ಸಂಭ್ರಮಿಸುತ್ತಿರುವ ರೀತಿಯನ್ನು ಕಂಡರೆ ನೀವು ಮದ್ಯದ ಲಾಬಿಯ ಪರವಾಗಿ ಲಾಬಿ ಮಾಡುತ್ತಿದ್ದೀರಿ ಎನ್ನುವುದು ಸ್ಪಷ್ಟವಾಗುತ್ತದೆ.

ನೀವು ನೈತಿಕವಾಗಿ ಎಷ್ಟು ಅಧಃಪತನಕ್ಕೆ ಇಳಿದಿದ್ದೀರಿ ಎನ್ನುವುದಕ್ಕೆ ಈವತ್ತು ಬೆಳಿಗ್ಗೆಯಿಂದ ನಿಮ್ಮ-ನಿಮ್ಮ ಸುದ್ದಿ ವಾಹಿನಿಗಳಲ್ಲಿ ಕ್ಯಾಮರಾ ಮುಂದೆ ಕೂತಿರುವ ಆಂಕರ್‍ ಗಳು ಮತ್ತು ನಿಮ್ಮ ವರದಿಗಾರರು ಮದ್ಯದಂಗಡಿಗಳ ತೆರವಿನ ಬಗ್ಗೆ ಸಂಭ್ರಮಿಸುತ್ತಿರುವ ರೀತಿಯೇ ಸಾಕ್ಷಿ. ಇನ್ನು ಇಂತಹ ಒಂದು ಸುದ್ದಿಯನ್ನು ವೈಭವೀಕರಿಸುತ್ತಿರುವ ರೀತಿ.

ಕೇವಲ ಒಂದೇ ಒಂದು ಸುದ್ದಿಯ ತುಣುಕಾಗಿ ಸರಿದು ಹೋಗಬೇಕಾಗಿದ್ದ ಮದ್ಯದಂಗಡಿ ತೆರವು ಎಂಬ ಸುದ್ದಿ ಇಂದು ರಾರಾಜಿಸುತ್ತಿದ್ದರೆ, ಅದಕ್ಕೆ ಕಾರಣ ನೈತಿಕವಾಗಿ ನೀವೆಷ್ಟು ಅಧಃಪತನಗೊಂಡಿರುವುದು. ಟಿ ಆರ್ ಪಿ ಮತ್ತು ರೆವಿನ್ಯೂ ಅಗತ್ಯ ಎಷ್ಟು ಎನ್ನುವುದು ನನಗೆ ಸರಿಯಾಗಿ ಗೊತ್ತು. ಆದರೆ, ಅದಕ್ಕಾಗಿ ಅಂತಃಸಾಕ್ಷಿಯನ್ನು ಮಾರುವ ಅಗತ್ಯವಿಲ್ಲ.

ನಿಮಗೆಲ್ಲ ಸಮಾಜದ ಪರ, ಸಮಾಜದ ಸ್ವಾಸ್ಥ್ಯದ ಪರ ನಿಲ್ಲುವ ಒಂದು ಅಮೋಘ ಅವಕಾಶ ಇತ್ತು. ಕಳೆದ ನಲವತ್ತು ದಿನಗಳಿಂದ ಈ ರಾಜ್ಯ (ದೇಶ)ದ ಜನರು ಮದ್ಯವಿಲ್ಲದೇ ಬದುಕಿ ಉಳಿದಿದ್ದರು. ಇನ್ನು ಮುಂದೆ ಕೂಡ ಬದುಕಲಿದ್ದರು.

ಇದೇ ಅವಕಾಶವನ್ನು ಉಪಯೋಗಿಸಿಕೊಂಡು ಸುದ್ದಿ ಚಾನೆಲ್ ಗಳೆಲ್ಲವೂ ಒಂದಾಗಿ ಮದ್ಯ ನಿಷೇಧದ ಒಂದು ಚಳವಳಿ ಆರಂಭಿಸಬಹುದಿತ್ತು. ಆ ಚಳವಳಿಯ ಮೂಲಕ ಜನಾಭಿಪ್ರಾಯ ಮೂಡಿಸಿ, ಮದ್ಯ ನಿಷೇಧ ಜಾರಿಗೆ ತರುವಂತೆ ಮಾಡಬಹುದಿತ್ತು. ಅದನ್ನು ಬಿಟ್ಟು… ನೀವಿಂದು ಮೂರೂ ಬಿಟ್ಟು ರಾಜ್ಯದ ಜನರೆದುರು ಬೆತ್ತಲಾಗಿ ನಿಂತಿದ್ದೀರಿ. ಪತ್ರಕರ್ತರಾಗಿ ಸತ್ತು ಹೋಗಿದ್ದೀರಿ. ನಿಮ್ಮನ್ನು ಕಂಡರೆ ಅಯ್ಯೋ ಎನಿಸುತ್ತಿದೆ. ಅಷ್ಟೆ. -ಸತೀಶ್ ಚಪ್ಪರಿಕೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *