ಉ.ಕ. ದಿಂದ ಮುಖ್ಯಮಂತ್ರಿಗಳಿಗೆ ಮನವಿ- ಪಂಚಾಯಿತಿಗಳಿಗೆ ಆಡಳಿತ ಸಮಿತಿ, ಸಂವಿಧಾನ ಆಶಯಕ್ಕೆ ಕೊಡಲಿಪೆಟ್ಟು: ಮಲ್ಲಿಕಾರ್ಜುನ ಖರ್ಗೆ

ಗ್ರಾಮ ಪಂಚಾಯತಿಗಳ ಆಡಳಿತಾವಧಿಯನ್ನು ಮುಂದಿನ ಆರು ತಿಂಗಳುಗಳ ವರೆಗೆ ವಿಸ್ತರಿಸಲು ಬೇಡಿಕೆ ಹೆಚ್ಚಿದೆ.

ಮುಂದಿನ ತಿಂಗಳು ಮುಗಿಯಲಿರುವ ಗ್ರಾ.ಪಂ. ಆಡಳಿತ ಸಮೀತಿಗಳ ಅಧಿಕಾರದ ಅವಧಿ
ಹಿನ್ನೆಲೆಯಲ್ಲಿ ಇದೇ ತಿಂಗಳು ಗ್ರಾ.ಪಂ. ಚುನಾವಣೆ ನಡೆಯಬೇಕಿತ್ತು.ಆದರೆ ಕರೋನಾ ಹಿನ್ನೆಲೆಯಲ್ಲಿ ನಡೆಯದ ಗ್ರಾ.ಪಂ. ಚುನಾವಣೆಯಿಂದಾಗಿ ಅವಧಿ ಪೂರೈಸುವ ಗ್ರಾ.ಪಂ. ಸದಸ್ಯರ ಆಡಳಿತಾವಧಿಯನ್ನು ವಿಸ್ತರಿಸುವ ಬೇಡಿಕೆ ವ್ಯಕ್ತವಾಗಿದೆ.
ರಾಜ್ಯದಾದ್ಯಂತ ಗ್ರಾ.ಪಂ. ಆಡಳಿತಾವಧಿ ವಿಸ್ತರಣೆ ಬೇಡಿಕೆ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲೂ ಗ್ರಾ.ಪಂ.ಅಧ್ಯಕ್ಷ,ಉಪಾಧ್ಯಕ್ಷರು ಹಾಗೂ ಸದಸ್ಯರ ಒಕ್ಕೂಟಗಳು ಈ ಅವಧಿ ವಿಸ್ತರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿವೆ.

ಇಂದು ಸಿದ್ಧಾಪುರದಲ್ಲಿ ತಹಸಿಲ್ಧಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಒಕ್ಕೂಟದ
ಪದಾಧಿಕಾರಿಗಳು ಕರೋನಾ, ಮಳೆಗಾಲಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಚುನಾಯಿತ ಸದಸ್ಯರು,ಆಡಳಿತ ಸಮೀತಿಗಳ ಅಧಿಕಾರಾವಧಿಯನ್ನು ಆರು ತಿಂಗಳು ವಿಸ್ತರಿಸಬೇಕು, ಗೌರವಧನವಿಲ್ಲದೆ ಕೂಡಾ ಈ ಅವಧಿಯಲ್ಲಿ ಸೇವೆ ಸಲ್ಲಿಸಲು ಸಿದ್ಧ ಎಂದು ಸ್ಪಸ್ಟಪಡಿಸಿದರು.

ಪಂಚಾಯಿತಿಗಳಿಗೆ ಆಡಳಿತ ಸಮಿತಿ, ಸಂವಿಧಾನ ಆಶಯಕ್ಕೆ ಕೊಡಲಿಪೆಟ್ಟು: ಮಲ್ಲಿಕಾರ್ಜುನ ಖರ್ಗೆ

(ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿರುವ ಪಂಚಾಯತ್‌ಗಳಿಗೆ ಆಡಳಿತ ಸಮಿತಿಗಳನ್ನು ನೇಮಿಸುವ ರಾಜ್ಯ ಸರ್ಕಾರದ ನಿರ್ಧಾರ ಸಂವಿಧಾನ, ಪಂಚಾಯತ್ ಸಂಸ್ಥೆಗಳ ಆಶಯಕ್ಕೆ ಮರಣ ಗಂಟೆ, ಕೊಡಲಿಪೆಟ್ಟು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಬಲವಾಗಿ ಖಂಡಿದ್ದಾರೆ.)

ಬೆಂಗಳೂರು: ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿರುವ ಪಂಚಾಯತ್‌ಗಳಿಗೆ ಆಡಳಿತ ಸಮಿತಿಗಳನ್ನು ನೇಮಿಸುವ ರಾಜ್ಯ ಸರ್ಕಾರದ ನಿರ್ಧಾರ ಸಂವಿಧಾನ, ಪಂಚಾಯತ್ ಸಂಸ್ಥೆಗಳ ಆಶಯಕ್ಕೆ ಮರಣ ಗಂಟೆ, ಕೊಡಲಿಪೆಟ್ಟು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಬಲವಾಗಿ ಖಂಡಿದ್ದಾರೆ.

ಈ ತೀರ್ಮಾನ ಸಂವಿಧಾನ ಮತ್ತು ಪಂಚಾಯತ್ ರಾಜ್ ಆಶಯಗಳಿಗೆ ಕೊಡಲಿಪೆಟ್ಟು ನೀಡಿದಂತಾಗಲಿದ್ದು ಇದನ್ನು ಕೂಡ ಲೇ ಕೈಬಿಡಬೇಕು ಎಂದೂ ಒತ್ತಾಯ ಮಾಡಿದ್ದಾರೆ.

ಯುಎನ್‌ಐ ಜೊತೆ ಮಾತನಾಡಿದ ಅವರು, ಆಡಳಿತ ಸಮಿತಿಗಳನ್ನು ನೇಮಿಸುವ ಮೂಲಕ ಪಕ್ಷಾತೀತವಾಗಿ ಚುನಾಯಿತರಾದ ಪಂಚಾಯತ್ ಸಂಸ್ಥೆಗಳ ಕತ್ತು ಹಿಸಲು ಸರ್ಕರ ಹೊರಟಿರುವುದು ಈ ಸಂಸ್ಥೆಗಳ ಮೂಲ ಉದ್ದೇಶ ಆಶಯಗಳಿಗೆ ಕೊಡಲಿಪೆಟ್ಟು ನೀಡಿದೆ ಎಂದು ಅವರು ಅಸಮಾಧಾನ ಹೊರಹಾಕಿದರು.

ಆಡಳಿತ ಸಮಿತಿಗಳನ್ನು ನೇಮಿಸುವ ನಿರ್ಧಾರದಿಂದ ಸರ್ಕಾರ ದೂರವಿರಬೇಕು ಎಂಉ ಒತ್ತಾಯ ಮಾಡಿದ ಅವರು, ಪಂಚಾಯತ್‌ಗಳ ಚುನಾಯಿತ ಸಂಸ್ಥೆಗಳ ಅವಧಿಯನ್ನು ಆರು ತಿಂಗಳವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.

“ಪಂಚಾಯಿತಿಗಳ ಚುನಾಯಿತ ಸಂಸ್ಥೆಗಳ ಅವಧಿಯನ್ನು ವಿಸ್ತರಣೆ ಮಾಡಿದ ಹಲವು ನಿದರ್ಶನಗಳಿವೆ ಎಂದು ಅವರು ತಿರುಗೇಟು ನೀಡಿದರು.

ರಾಜಕೀಯೇತರ ಆಧಾರದ ಮೇಲೆ ಮತ್ತು ರಾಜಕೀಯೇತರ ಪಕ್ಷದ ಚಿಹ್ನೆಗಳ ಮೇಲೆ 2015 ರಲ್ಲಿ ಪಂಚಾಯತ್ ಸಂಸ್ಥೆಗಳಿಗೆ ಚುನಾವಣೆ ನಡೆದಿರುವುದನ್ನು ನೆನಪು ಮಾಡಿಕೊಟ್ಟ ಅವರು ಆಡಳಿತ ಸಮಿತಿಗಳನ್ನು ನೇಮಿಸುವ ಮೂಲಕ, ಬಿಜೆಪಿ ಸರ್ಕಾರವು ತಮ್ಮ ಪಕ್ಷದ ಸದಸ್ಯರನ್ನು ಸೇರಿಸಿಕೊಳ್ಳುವ ಮೂಲಕ ರಾಜಕೀಯ ಬಣ್ಣ ನೀಡಲು ಹೊರಟಿದೆ ಎಂದು ದೂರಿದರು.

“ರಾಜ್ಯಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತುಗಳ ಖಾಲಿ ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುತ್ತಿರುವ ರಾಜ್ಯ ಸರ್ಕಾರವು ಇನ್ನೊಂದು ಕಡೆ ಪಂಚಾಯತ್‌ಗಳ ಚುನಾವಣೆಯನ್ನು ಮುಂದೂಡಲು ಹೊರಟಿರುವುದು ನಿಜಕ್ಕೂ ಹಾಸ್ಯಸ್ಪದ, ಇಬ್ಬಂದಿ ದೋರಣೆಯಾಗಿದೆ ಎಂದರು.

ಆಡಳಿತ ಸಮಿತಿಗಳ ನೇಮಕಕ್ಕೆ ಸಂಬಂಧಿಸಿದ ನಿರ್ಧಾರದ ಹಿಂದೆ ರಾಜ್ಯ ಬಿಜೆಪಿ ಸರ್ಕಾರದ ಹುನ್ನಾರ, ಒಳಸಂಚು ಇದೆ ಈ ಕ್ರಮವನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದರು.

ಆಡಳಿತ ಸಮಿತಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ರಾಜ್ಯ ಸರ್ಕಾರವು ರೋಸ್ಟರ್ ವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವಿಲ್ಲ , “ತುಳಿತಕ್ಕೊಳಗಾದ ಸಮುದಾಯಗಳಿಗೆ ಸೇರಿದ ಮಹಿಳೆಯರು ಮತ್ತು ವ್ಯಕ್ತಿಗಳು ಸ್ಥಾನಗಳಿಂದ ಆಯ್ಕೆಯಾದ ಹಲವು ಉದಾಹರಣೆಗಳಿವೆ, ಇವುಗಳನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ಅನ್ಯಾಯ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

“ರಾಜ್ಯ ಸರ್ಕಾರದ ನಿರ್ಧಾರ ಮಹಿಳಾ ವಿರೋಧಿ ಮತ್ತು ತುಳಿತಕ್ಕೊಳಗಾದ ಸಮುದಾಯದ ವಿರೋಧಿ ನೀತಿಯಾಗಿದೆ. ಅವಧಿ ಮುಗಿಯುತ್ತಿರುವ ಪಂಚಾಯತ್ ಗಳಿಗೆ ಆಡಳಿತ ಸಮಿತಿಗಳನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸದ್ಯ , 6000 ಕ್ಕೂ ಹೆಚ್ಚು ಪಂಚಾಯತ್ ಗಳ ಐದು ವರ್ಷಗಳ ಅವಧಿ ಶೀಘ್ರದಲ್ಲೇ ಕೊನೆಗೊಳ್ಳಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *