ಅವರು ನಾಗರಿಕ ಟೆರರಿಸ್ಟ್‌ಗಳು, ಅವರನ್ನು ಬಂಧಿಸಿ: ಸೊಗಡು ಶಿವಣ್ಣ ವಿವಾದ

ಕಾಂಗ್ರೆಸ್ ನಾಯಕರಾದ ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ, ಇವರು ನಾಗರೀಕ ಟೆರರಿಸ್ಟುಗಳು, ಅವರನ್ನು ಬಂಧಿಸಿ.

ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದು ಪತ್ರ ಬರೆದಿರುವ ಕಾಂಗ್ರೆಸ್ ಮುಖಂಡರಾದ ಸಿ.ಎಂ.ಇಬ್ರಾಹಿಂ, ಜಮೀರ್ ಅಹಮದ್ ಮತ್ತು ಹ್ಯಾರೀಸ್ ಅವರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಬಂಧಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೊಗಡು ಶಿವಣ್ಣ, “ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ. ಇಂಥವರು ದೇಶಕ್ಕೆ ಅಪಾಯ ತಂದೊಡ್ಡುತ್ತಿದ್ದಾರೆ. ಇವರು ನಾಗರಿಕ ಟೆರರಿಸ್ಟ್‌ಗಳು, ದೇಶದ್ರೋಹಿಗಳು. 70 ವರ್ಷಗಳಿಂದ ನಮ್ಮ ಸರ್ಕಾರಗಳು ನೀಡಿದ ಸವಲತ್ತುಗಳನ್ನು ದುರ್ಬಳಕೆ ಮಾಡಿಕೊಂಡು ದೇಶಕ್ಕೆ ಕಂಟಕವಾಗಿದ್ದಾರೆ” ಎಂದು ನಾಲಗೆ ಹರಿಯಬಿಟ್ಟಿದ್ದಾರೆ.

ಈ ತಬ್ಲಿಘಿಗಳು ಕೆಟ್ಟ ಸಂತಾನ. ಇವರನ್ನು ದೇಶದಿಂದ ಹೊರಹಾಕಬೇಕು. ಕೊರೊನ ಸಂದರ್ಭದಲ್ಲಿ ದೇವರ ಪ್ರಾರ್ಥನೆ ಸಲ್ಲಿಸುವುದಕ್ಕಲ್ಲ. ರೋಗ ಹರಡುವುದಕ್ಕೂ ಇವರು ಯೋಜಿಸಿದ್ದಾರೆ ಎಂದು ಶಿವಣ್ಣ ವಾಗ್ದಾಳಿ ನಡೆಸಿದರು.

ದೇಶ ವಿಭಜನೆಯ ಸಂದರ್ಭದಲ್ಲಿ ಕೇವಲ 3 ಕೋಟಿ ಮುಸ್ಲೀಮರು ಇದ್ದರು. ಇಷ್ಟು ವರ್ಷಗಳಿಂದ ಅವರನ್ನು ಸೌಹಾರ್ದಯುತವಾಗಿ ನಡೆಸಿಕೊಂಡು ಬಂದಿದ್ದೇವೆ. ಆದರೆ ದೇಶ ವಿಭಜನೆಯ ಸಂದರ್ಭದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ತೆರಳಿದ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಅವರನ್ನು ಮತಾಂತರ ಮಾಡಲಾಗುತ್ತಿದೆ. ಹಿಂಸೆ ನೀಡಲಾಗುತ್ತಿದೆ. ಹಿಂದೂಗಳೇ ಇಲ್ಲದಂತೆ ಮಾಡಲಾಗುತ್ತಿದೆ ಎಂದು ದೂರಿದರು.

ರಂಜಾನ್ ಹಬ್ಬ ಆಚರಣೆಯ ಹೆಸರಿನಲ್ಲಿ ಕೊರೊನ ಹರಡುವ ಹುನ್ನಾರ ನಡೆಯುತ್ತಿದೆ. ಈ ಮೂವರು ಮುಖಂಡರು ತಬ್ಲಿಘಿಗಳು. ಕೇಂದ್ರವಾಗಲಿ, ರಾಜ್ಯ ಸರ್ಕಾರವಾಗಲೀ ಇವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಮಾಧ್ಯಮಗೋಷ್ಠಿಯ ನಡುವೆ ಅವಾಚ್ಯ ಶಬ್ದಗಳು ಶಿವಣ್ಣ ಅವರಿಂದ ಹೊರಬಂದವು. ನನಗೆ ಇಷ್ಟು ವಯಸ್ಸಾಗಿದೆ ನನ್ನ ಮೈ ಉರಿಯುತ್ತಿದೆ. ದೇಶ ರಕ್ಷಣೆ ನಮ್ಮ ಜವಾಬ್ದಾರಿ. ಹಾಗಾಗಿ ಕೆಟ್ಟಭಾಷೆಯಲ್ಲಿ ಮಾತನಾಡಿದ್ದೇನೆ. ಅವುಗಳನ್ನು ಹೊಡೆದು ಹಾಕಿ. ಬದಲಿಗೆ ಕೆಟ್ಟ ಸಂತಾನ ಎಂತ ಬೇಕಾದರೆ ಬರೆಯಿರಿ ಎಂದು ಉಚಿತ ಸಲಹೆಯನ್ನು ನೀಡಿದರು.

ನಾಲ್ಕು ಬಾರಿ ಶಾಸಕರಾಗಿರುವ ಮತ್ತು ಎರಡು ಬಾರಿ ಸಚಿವರಾಗಿ ಕೆಲಸ ಮಾಡಿರುವ ಸೊಗಡು ಶಿವಣ್ಣ ಮಾಗಿಲ್ಲ ಎಂಬುದು ಅವರು ನಡೆಸುವ ಪ್ರತಿಯೊಂದು ಪತ್ರಿಕಾಗೋಷ್ಠಿಗಳಿಂದ ತಿಳಿದುಬರುತ್ತದೆ. ಕೊರೊನ ನಿಯಂತ್ರಣಕ್ಕೆ ಬೇಕಾದ ಸಲಹೆ ಕೊಡುವುದು ಬಿಟ್ಟು ಒಂದು ಸಮುದಾಯವನ್ನು ದೂರುವುದು ಸರಿಯಲ್ಲ ಎಂಬುದು ಅವರಿಗೆ ಹೊಳೆಯಲಿಲ್ಲವೇ ಎಂಬ ಮಾತುಗಳು ಪತ್ರಕರ್ತರ ನಡುವೆ ಕೇಳಿ ಬಂದಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *