ಕಾರಂಟೈನ್ ನಲ್ಲಿರುವ ಅನೇಕರಲ್ಲಿ ಕೋವಿಡ್ ಶಂಕೆ, ಉತ್ತರಕನ್ನಡ-ಶಿವಮೊಗ್ಗ ಗಳಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳು

ಉತ್ತರಕನ್ನಡ ಜಿಲ್ಲೆಯ 6 ಸಾವಿರ ಜನರು ಸೇರಿ ಕರ್ನಾಟಕದೆಲ್ಲೆಡೆ ಕಾರಂಟೈನ್ ಆಗಿರುವ ಲಕ್ಷಾಂತರ ಜನರಲ್ಲಿ ಸಾವಿರಾರು ಜನರು ಕರೋನಾ ಕ್ಕೆ ತುತ್ತಾಗಿರುವ ಬಗ್ಗೆ ಈಗ ಶಂಕೆ ವ್ಯಕ್ತವಾಗಿದೆ.

ಮೊದಮೊದಲು ಉತ್ತರ ಕನ್ನಡ ಜಿಲ್ಲೆಗೆ ಬಂದ ಹೊರದೇಶಗಳ ಉದ್ಯೋಗಿಗಳು ಕೋವಿಡ್ ಪ್ರಾರಂಭಕ್ಕೆ ಕಾರಣವಾದರು. ನಂತರ ತಬ್ಲಿಘಿಗಳ ಓಡಾಟ,ಒಡನಾಟದಿಂದ ಕರೋನಾ ದೇಶ ಸುತ್ತತೊಡಗಿತ್ತು.
ಈಗ ಮಹಾರಾಷ್ಟ್ರ,ಗುಜರಾತ್, ಚಿನ್ನೈಗಳಿಂದ ಬಂದ ಜನರು ಉತ್ತರಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕರೋನಾ ಹಬ್ಬಿಸುತಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ದೃಢಪಟ್ಟ ಎರಡು ಕರೋನಾ ಪಾಸಿಟಿವ್ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದ ವ್ಯಕ್ತಿಗಳ ಪ್ರಕರಣಗಳು.

ಮಹಾರಾಷ್ಟ್ರದಿಂದ
ಶಿವಮೊಗ್ಗ ಜಿಲ್ಲೆ ಸೊರಬಾ ಕ್ಕೆ ಹೊರಟಿದ್ದ ಈ ಕುಟುಂಬವನ್ನು ಪೊಲೀಸರು ಯಲ್ಲಾಪುರದಲ್ಲಿ ತಡೆದು ಕಾರಂಟೈನ್ ಮಾಡಿದ್ದರು. ಈ ಎರಡೂ ಪ್ರಕರಣಗಳಂತೆ ಉತ್ತರಕನ್ನಡದ 6 ಸಾವಿರ ಕಾರಂಟೈನ್ ಆದ ಜನರು ಹಾಗೂ ರಾಜ್ಯದ ಲಕ್ಷಾಂತರ ಜನರಲ್ಲಿ ಕರೋನಾ ಕಾಣಿಸಿಕೊಳ್ಳುವ ಅಪಾಯದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ.
ಬಸ್ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವುದು, ಹೊರ ರಾಜ್ಯಗಳಿಂದ ಬಂದ ಜನರ ತಪಾಸಣೆ, ಕಾರಂಟೈನ್ ಕ್ರಮಗಳ ನಡುವೆ ನುಸುಳುಕೋರರು ಸುದ್ದಿಮಾಡದೆ ಗ್ರಾಮ, ನಗರ ಸೇರಿಕೊಂಡಿರುವ ಅನೇಕ ಉದಾಹರಣೆಗಳೂ ಇವೆ.

ಈ ವಿಶೇಶ ಪ್ರಕರಣಗಳ ಹಿನ್ನೆಲೆಯಲ್ಲಿ ಒಬ್ಬೊಬ್ಬ ವ್ಯಕ್ತಿ ನೂರಾರು ಜನರಿಗೆ ಕರೋನಾ ವಿಸ್ತರಿಸುವ ಅಪಾಯವಿರುವುದರಿಂದ ಸಾರ್ವಜನಿಕರು ಓಡಾಟ, ವಹಿವಾಟು ನಿಲ್ಲಿಸಿ ಮನೆಯಲ್ಲೇ ಉಳಿಯುವುದು ಮತ್ತು ಕರೋನಾ ನಿರ್ಬಂಧದ ಉಪಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಂಕಷ್ಟದಿಂದ ಪಾರಾಗಬೇಕಿದೆ.

ಶಿವಮೊಗ್ಗ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕಾರಂಟೈನ್ ಶಿಕ್ಷೆ!

ಗ್ರೀನ್ ಜೋನ್ ಆಗಿದ್ದ ಶಿವಮೊಗ್ಗ ಜಿಲ್ಲೆ ಕರೋನಾ ಕಿತ್ತಳೆ ವಲಯವಾಗಿರುವುದು ಹಳೆಯ ಸುದ್ದಿ ಈಗಿನ ಹೊಸ ವರ್ತಮಾನವೆಂದರೆ…
ಶಿವಮೊಗ್ಗದ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳು ಕಾರಂಟೈನ್ ಆಗುವ ಅಪಾಯಕ್ಕೆ ಸಿಕ್ಕಿಕೊಂಡಿದ್ದಾರೆ.
ಎರಡು ದಿವಸಗಳ ಹಿಂದೆ ಕೋವಿಡ್ ದೃಢಪಟ್ಟ 15 ವರ್ಷದ ಬಾಲಕಿ ಪೋಸ್ಕೋ ಪ್ರಕರಣವೊಂದರ ಸಂತೃಸ್ತೆಯಾಗಿದ್ದಾರೆ. ಈ ಬಾಲಕಿಯನ್ನು ತನಿಖೆ ಕಾರಣಕ್ಕೆ ವಿಚಾರಣೆ ನಡೆಸಿದ ಶಿಕಾರಿಪುರದ ಇನ್ಪೆಕ್ಟರ್,ಶಿವಮೊಗ್ಗ ಎ.ಎಸ್.ಪಿ. ಹಾಗೂ ಎಸ್.ಪಿ. ಸೇರಿ ಮೂವರು ಅಧಿಕಾರಿಗಳು ಈ ಸಂತೃಸ್ತೆಯ ಸಂಪರ್ಕಕ್ಕೆ ಒಳಪಟ್ಟಿದ್ದರು.

ಈ ಸಂತೃಸ್ತೆಗೆ ಅವಳ ಹಿಂದಿನ ಟ್ರಾವೆಲ್ ಹಿಸ್ಟರಿ ಸಂಗ್ರಹಿಸಿದ್ದಾಗ ಶಿಕಾರಿಪುರದಿಂದ ಶಿವಮೊಗ್ಗ ವರೆಗೆ ಮೂವರು ಅಧಿಕಾರಿಗಳು ಈ ಸಂತೃಸ್ತೆಯ ಸಂಪರ್ಕಕ್ಕೆ ಬಂದಿದ್ದು ಇವರೆಲ್ಲರೂ ಈಗ ಕಾರಂಟೈನ್ ಆಗುವ ಶಿಕ್ಷೆಗೆ ಗುರಿಯಾದಂತಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *