1,st corona case of siddapur ಸಿದ್ಧಾಪುರಕಕ್ಕೂ ಬಂದ ಕರೋನಾ

ಕಳೆದ 2 ತಿಂಗಳುಗಳಿಂದ ಬಚಾವಾಗಿದ್ದ ಸಿದ್ಧಾಪುರ ತಾಲೂಕಿನಲ್ಲಿ ಇಂದು ಮೊದಲ ಕೋವಿಡ್ 19 ಪ್ರಕರಣ ದೃಢಪಡುವ ಮೂಲಕ ಕರೋನಾ ಪೀಡಿತ ತಾಲೂಕುಗಳ ಪಟ್ಟಿಗೆ ಸಿದ್ಧಾಪುರ ಸೇರ್ಪಡೆಯಾದಂತಾಗಿದೆ.
ಇದೇ ತಿಂಗಳ 19 ರಿಂದ ಕಾವಂಚೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಾರಂಟೈನ್ ಆಗಿದ್ದ ಒಂದು ಕುಟುಂಬದ ಒಬ್ಬ ವ್ಯಕ್ತಿಯಲ್ಲಿ ಕರೋನಾ ದೃಢವಾಗುವ ಮೂಲಕ ಈ ಪ್ರಕರಣ ತಾಲೂಕಿನ ಮೊಟ್ಟ ಮೊದಲ ಕೋವಿಡ್ ಪ್ರಕರಣವಾದಂತಾಗಿದೆ.

ಇಲ್ಲಿಯ ಇಟಗಿ ಮೂಲದ ಮುಂಬೈ ಠಾಣಾದಿಂದ ಬಂದಿದ್ದ ಈ ಕುಟುಂಬವನ್ನು ಕಾರಂಟೈನ್ ಮಾಡಲಾಗಿತ್ತು. ಈ ಕೋವಿಡ್ ರೋಗಿಯನ್ನಿ ಇಂದು ಸಿದ್ಧಾಪುರದಿಂದ ಕಾರವಾರಕ್ಕೆ ಸ್ಥಳಾಂತರಿಸಲಾಗುತ್ತಿದೆ.

(ಬೇರೆ ಸುದ್ದಿ-)
ಪ್ರಾಮಾಣಿಕತೆ, ನಿಷ್ಠೆಗೆ ಬದ್ಧರಾದ ಮಧುಕೇಶ್ವರ ಹೆಗಡೆ – ಆರ್.ಎಂ. ಹೆಗಡೆ

ಪ್ರಾಮಾಣಿಕತೆ ನಿಷ್ಠೆಗೆ ಮಾನವೀಯ ಮೌಲ್ಯಗಳಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಿದವರು ಮಧುಕೇಶ್ವರ ಹೆಗಡೆ ಹೂಡ್ಲಮನೆ ಅವರ ಆದರ್ಶಗಳನ್ನು ಅನುಸರಿಸುವುದರಿಂದ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಅವರು ಜನಪರ ವ್ಯಕ್ತಿತ್ವವನ್ನು ರೂಢಿಸಿಕೊಂಡವರಾಗಿದ್ದರು. ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚು ಗಮನ ಹರಿಸಿ ಕೆಲಸ ಮಾಡಿದ ವ್ಯಕ್ತಿಯಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ದುಡಿದವರಾಗಿದ್ದರು. ನಾಣಿಕಟ್ಟಾ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎ.ಪಿ.ಎಂ.ಸಿ. ನಿರ್ದೇಶಕರಾಗಿ, ಸಿದ್ದಾಪುರ ಟಿ.ಎಂ.ಎಸ್. ನಿರ್ದೇಶಕರಾಗಿ ಕೆಲಸ ಮಾಡಿ ಉತ್ತಮ ಸಹಕಾರಿಗಳೆಂದು ಗುರುತಿಸಲ್ಪಟ್ಟವರಾಗಿದ್ದರು ಎಂದು ಸಿದ್ದಾಪುರ ಟಿ.ಎಂ.ಎಸ್. ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ವಕೀಲರು ಹೇಳಿದರು.
ಅವರು ಶೇಲೂರು ಹೂಡ್ಲಮನೆಯಲ್ಲಿ ನಡೆದ ಮಧುಕೇಶ್ವರ ಹೆಗಡೆ ಹೂಡ್ಲಮನೆ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮಧುಕೇಶ್ವರ ಹೆಗಡೆ ಅವರ ಸಹೋದರ ನಿವೃತ್ತ ಜಿಲ್ಲಾ ನ್ಯಾಯಾಧೀಶ ಜಿ.ವಿ. ಹೆಗಡೆರವರು ಮಾತನಾಡಿ, ತಮ್ಮ ಸಹೋದರ ಮಧುಕೇಶ್ವರ ಹೆಗಡೆಯವರು ಬದುಕಿನಲ್ಲಿ ಆದರ್ಶವನ್ನು ರೂಢಿಸಿಕೊಂಡವರು, ಅಧ್ಯಾತ್ಮದಲ್ಲಿ ಸಹ ಆಸಕ್ತಿಯನ್ನು ಹೊಂದಿದವರು. ಕೃಷಿಯನ್ನು ಗೌರವದಿಂದ ನಡೆಸಿಕೊಂಡು ಬಂದ ವ್ಯಕ್ತಿ. ಅವರ ಬದುಕಿನ ಸರಳತೆ ಸಂಸ್ಕøತಿ ಪರಂಪರೆಯನ್ನು ಗೌರವಿಸಿಕೊಂಡು ಬರುವ ರೀತಿ ತಮ್ಮೆಲ್ಲರಿಗೂ ಹೆಮ್ಮೆ ತರುವಂತಹದ್ದು ಎಂದು ಹೇಳಿದರು.
ಟಿ.ಎಂ.ಎಸ್. ನಿರ್ದೇಶಕರುಗಳಾದ ಎಂ.ಆರ್. ಹೆಗಡೆ ನೈಗಾರ, ಜಿ.ಎಂ. ಭಟ್ಟ ಕಾಜಿನ್ಮನೆ, ಎಂ.ಆರ್. ಭಟ್ಟ ತಟ್ಟಿಕೈ, ಶಿರಸಿಯ ಟಿ.ಆರ್.ಸಿ. ನಿರ್ದೇಶಕ ಎಸ್.ಎನ್. ಹೆಗಡೆ ಹಾವಳಿಮನೆ, ಸಾಮಾಜಿಕ ಕಾರ್ಯಕರ್ತರಾದ ವೆಂಕಟೇಶ ಹೊಸಬಾಳೆ, ಎಸ್.ಎನ್. ಭಟ್ಟ ಭಾಗ್ವತ್ ಗಿರಗಡ್ಡೆ, ಜಿ.ಆರ್. ಹೆಗಡೆ ಹಳದೋಟ, ಉದ್ಯಮಿ ರಾಘವೇಂದ್ರ ಪಿ. ಶಾಸ್ತ್ರಿ ಬಿಳಗಿ, ಲಕ್ಷ್ಮೀನಾರಾಯಣ ಹೆಗಡೆ ಹೂಡ್ಲಮನೆ, ಅನಸೂಯಾ ಮಧುಕೇಶ್ವರ ಹೆಗಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅನುಷಾ ಹೆಗಡೆ ಸಾಲ್ಕಣಿ ಪ್ರಾರ್ಥಿಸಿದರು, ಜಿ.ಜಿ. ಹೆಗಡೆ ಬಾಳಗೋಡ ಸ್ವಾಗತಿಸಿ ನಿರೂಪಿಸಿದರು. ಲಕ್ಷ್ಮೀನಾರಾಯಣ ಮಧುಕೇಶ್ವರ ಹೆಗಡೆ ಹೂಡ್ಲಮನೆ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *