1,st corona case of siddapur ಸಿದ್ಧಾಪುರಕಕ್ಕೂ ಬಂದ ಕರೋನಾ

ಕಳೆದ 2 ತಿಂಗಳುಗಳಿಂದ ಬಚಾವಾಗಿದ್ದ ಸಿದ್ಧಾಪುರ ತಾಲೂಕಿನಲ್ಲಿ ಇಂದು ಮೊದಲ ಕೋವಿಡ್ 19 ಪ್ರಕರಣ ದೃಢಪಡುವ ಮೂಲಕ ಕರೋನಾ ಪೀಡಿತ ತಾಲೂಕುಗಳ ಪಟ್ಟಿಗೆ ಸಿದ್ಧಾಪುರ ಸೇರ್ಪಡೆಯಾದಂತಾಗಿದೆ.
ಇದೇ ತಿಂಗಳ 19 ರಿಂದ ಕಾವಂಚೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಾರಂಟೈನ್ ಆಗಿದ್ದ ಒಂದು ಕುಟುಂಬದ ಒಬ್ಬ ವ್ಯಕ್ತಿಯಲ್ಲಿ ಕರೋನಾ ದೃಢವಾಗುವ ಮೂಲಕ ಈ ಪ್ರಕರಣ ತಾಲೂಕಿನ ಮೊಟ್ಟ ಮೊದಲ ಕೋವಿಡ್ ಪ್ರಕರಣವಾದಂತಾಗಿದೆ.

ಇಲ್ಲಿಯ ಇಟಗಿ ಮೂಲದ ಮುಂಬೈ ಠಾಣಾದಿಂದ ಬಂದಿದ್ದ ಈ ಕುಟುಂಬವನ್ನು ಕಾರಂಟೈನ್ ಮಾಡಲಾಗಿತ್ತು. ಈ ಕೋವಿಡ್ ರೋಗಿಯನ್ನಿ ಇಂದು ಸಿದ್ಧಾಪುರದಿಂದ ಕಾರವಾರಕ್ಕೆ ಸ್ಥಳಾಂತರಿಸಲಾಗುತ್ತಿದೆ.

(ಬೇರೆ ಸುದ್ದಿ-)
ಪ್ರಾಮಾಣಿಕತೆ, ನಿಷ್ಠೆಗೆ ಬದ್ಧರಾದ ಮಧುಕೇಶ್ವರ ಹೆಗಡೆ – ಆರ್.ಎಂ. ಹೆಗಡೆ

ಪ್ರಾಮಾಣಿಕತೆ ನಿಷ್ಠೆಗೆ ಮಾನವೀಯ ಮೌಲ್ಯಗಳಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಿದವರು ಮಧುಕೇಶ್ವರ ಹೆಗಡೆ ಹೂಡ್ಲಮನೆ ಅವರ ಆದರ್ಶಗಳನ್ನು ಅನುಸರಿಸುವುದರಿಂದ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಅವರು ಜನಪರ ವ್ಯಕ್ತಿತ್ವವನ್ನು ರೂಢಿಸಿಕೊಂಡವರಾಗಿದ್ದರು. ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚು ಗಮನ ಹರಿಸಿ ಕೆಲಸ ಮಾಡಿದ ವ್ಯಕ್ತಿಯಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ದುಡಿದವರಾಗಿದ್ದರು. ನಾಣಿಕಟ್ಟಾ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎ.ಪಿ.ಎಂ.ಸಿ. ನಿರ್ದೇಶಕರಾಗಿ, ಸಿದ್ದಾಪುರ ಟಿ.ಎಂ.ಎಸ್. ನಿರ್ದೇಶಕರಾಗಿ ಕೆಲಸ ಮಾಡಿ ಉತ್ತಮ ಸಹಕಾರಿಗಳೆಂದು ಗುರುತಿಸಲ್ಪಟ್ಟವರಾಗಿದ್ದರು ಎಂದು ಸಿದ್ದಾಪುರ ಟಿ.ಎಂ.ಎಸ್. ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ವಕೀಲರು ಹೇಳಿದರು.
ಅವರು ಶೇಲೂರು ಹೂಡ್ಲಮನೆಯಲ್ಲಿ ನಡೆದ ಮಧುಕೇಶ್ವರ ಹೆಗಡೆ ಹೂಡ್ಲಮನೆ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮಧುಕೇಶ್ವರ ಹೆಗಡೆ ಅವರ ಸಹೋದರ ನಿವೃತ್ತ ಜಿಲ್ಲಾ ನ್ಯಾಯಾಧೀಶ ಜಿ.ವಿ. ಹೆಗಡೆರವರು ಮಾತನಾಡಿ, ತಮ್ಮ ಸಹೋದರ ಮಧುಕೇಶ್ವರ ಹೆಗಡೆಯವರು ಬದುಕಿನಲ್ಲಿ ಆದರ್ಶವನ್ನು ರೂಢಿಸಿಕೊಂಡವರು, ಅಧ್ಯಾತ್ಮದಲ್ಲಿ ಸಹ ಆಸಕ್ತಿಯನ್ನು ಹೊಂದಿದವರು. ಕೃಷಿಯನ್ನು ಗೌರವದಿಂದ ನಡೆಸಿಕೊಂಡು ಬಂದ ವ್ಯಕ್ತಿ. ಅವರ ಬದುಕಿನ ಸರಳತೆ ಸಂಸ್ಕøತಿ ಪರಂಪರೆಯನ್ನು ಗೌರವಿಸಿಕೊಂಡು ಬರುವ ರೀತಿ ತಮ್ಮೆಲ್ಲರಿಗೂ ಹೆಮ್ಮೆ ತರುವಂತಹದ್ದು ಎಂದು ಹೇಳಿದರು.
ಟಿ.ಎಂ.ಎಸ್. ನಿರ್ದೇಶಕರುಗಳಾದ ಎಂ.ಆರ್. ಹೆಗಡೆ ನೈಗಾರ, ಜಿ.ಎಂ. ಭಟ್ಟ ಕಾಜಿನ್ಮನೆ, ಎಂ.ಆರ್. ಭಟ್ಟ ತಟ್ಟಿಕೈ, ಶಿರಸಿಯ ಟಿ.ಆರ್.ಸಿ. ನಿರ್ದೇಶಕ ಎಸ್.ಎನ್. ಹೆಗಡೆ ಹಾವಳಿಮನೆ, ಸಾಮಾಜಿಕ ಕಾರ್ಯಕರ್ತರಾದ ವೆಂಕಟೇಶ ಹೊಸಬಾಳೆ, ಎಸ್.ಎನ್. ಭಟ್ಟ ಭಾಗ್ವತ್ ಗಿರಗಡ್ಡೆ, ಜಿ.ಆರ್. ಹೆಗಡೆ ಹಳದೋಟ, ಉದ್ಯಮಿ ರಾಘವೇಂದ್ರ ಪಿ. ಶಾಸ್ತ್ರಿ ಬಿಳಗಿ, ಲಕ್ಷ್ಮೀನಾರಾಯಣ ಹೆಗಡೆ ಹೂಡ್ಲಮನೆ, ಅನಸೂಯಾ ಮಧುಕೇಶ್ವರ ಹೆಗಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅನುಷಾ ಹೆಗಡೆ ಸಾಲ್ಕಣಿ ಪ್ರಾರ್ಥಿಸಿದರು, ಜಿ.ಜಿ. ಹೆಗಡೆ ಬಾಳಗೋಡ ಸ್ವಾಗತಿಸಿ ನಿರೂಪಿಸಿದರು. ಲಕ್ಷ್ಮೀನಾರಾಯಣ ಮಧುಕೇಶ್ವರ ಹೆಗಡೆ ಹೂಡ್ಲಮನೆ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *