ಸಿದ್ಧಾಪುರದ ಮೊದಲ ಕರೋನಾ ಪ್ರಕರಣದ ಪ್ರವಾಸಕತೆ

ಇಂದು ಮತ್ತೆ ನಾಲ್ಕು ಹೊಸ ಕರೋನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸಂಖ್ಯೆ ಏರಿದೆ. ಜಿಲ್ಲೆಯ ಸಿದ್ಧಾಪುರ ಮತ್ತು ಅಂಕೋಲಾಗಳಲ್ಲಿ ಪತ್ತೆಯಾಗದ ಕರೋನಾ ಪ್ರಕರಣಗಳ ಮಧ್ಯೆ ಇಂದು ಸಿದ್ಧಾಪುರದ ಒಬ್ಬ ವ್ಯಕ್ತಿಯಲ್ಲಿ ಕರೋನಾ ದೃಢ ಪಡುವ ಮೂಲಕ ಸಿದ್ಧಾಪುರ ಕರೋನಾ ಮುಕ್ತ ತಾಲೂಕೆಂಬ ಹೆಗ್ಗಳಿಕೆಯಿಂದ ದೂರಾದಂತಾಗಿದೆ.
ಸಿದ್ಧಾಪುರ ಮೂಲದ ಮಹಾರಾಷ್ಟ್ರ ಠಾಣಾದಲ್ಲಿರುತ್ತಿದ್ದ ಕುಟುಂಬವೊಂದು ಮೇ 17 ರಂದು ಠಾಣಾದಿಂದ ಹೊರಟು 18 ರಂದು ಶಿರಸಿಯ ನೀಲೇಕಣಿ ತಪಾಸಣಾ ಗೇಟ್ ಬಳಿ ಜಿಲ್ಲಾಡಳಿತದ ವಶಕ್ಕೆ ಸಿಕ್ಕಿದ್ದರು.

ಈ ಕುಟುಂಬ ಮೇ 19 ರಂದು ಕಾವಂಚೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಾರಂಟೈನ್ ಆಗಿತ್ತು. ಮೂರು ಮಕ್ಕಳ ಜೊತೆಗಿನ ಈ ಕುಟುಂಬ ಕಿ.ರಾ.ಚೆ. ವಸತಿ ಶಾಲೆಯ ಒಂದೇ ಕೋಣೆಯಲ್ಲಿ ಕಾರಂಟೈನ್ ಆಗಿತ್ತು. ಇವರ ಗಂಟಲು ದೃವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಕೋವಿಡ್ ಸೋಂಕು ದೃಢವಾದ ಈ ವ್ಯಕ್ತಿ ತನ್ನ ಕುಟುಂಬದೊಂದಿಗೆ ಮಹಾರಾಷ್ಟ್ರದಿಂದ ಬಾಡಿಗೆ ಕಾರಿನಲ್ಲಿ ಹುಟ್ಟೂರು ಪ್ರವೇಶಿಸಿತ್ತು.
ಇವರನ್ನು ಸಿದ್ಧಾಪುರಕ್ಕೆ ತಲುಪಿಸಿದ ಕಾರಿನ ಚಾಲಕ ಮರಳಿ ಠಾಣಾ ತಲುಪಿದ್ದಾನೆ. ಈ ಕುಟುಂಬದ 5 ಜನರ ಗಂಟಲುದೃವದ ಮಾದರಿಗಳಲ್ಲಿ ಕುಟುಂಬದ ಮುಖ್ಯಸ್ಥರ ಮಾದರಿಯಲ್ಲಿ ಕರೋನಾ ಸೋಕು ದೃಢಪಟ್ಟಿದ್ದು ಉಳಿದ ನಾಲ್ವರ ವರದಿಗೆ ಕಾಯಲಾಗುತ್ತಿದೆ. ಸಿದ್ಧಾಪುರದ ಗ್ರಾಮೀಣ ಪ್ರದೇಶದ ಈ ಕುಟುಂಬ ಮಹಾರಾಷ್ಟ್ರದಿಂದ ಮರಳಿ ಮನೆ ತಲುಪುವ ಮಾರ್ಗ ಮಧ್ಯದಲ್ಲಿ ಜಿಲ್ಲಾಡಳಿತದ ಕೈ ಗೆ ಸಿಕ್ಕು ಸಂಭಾವ್ಯ ಅಪಾಯವನ್ನು ತಪ್ಪಿಸಿದಂತಾಗಿದೆ.

ಕಾರಂಟೈನ್ ನಲ್ಲಿರುವ ಅನೇಕರಲ್ಲಿ ಕೋವಿಡ್ ಶಂಕೆ, ಉತ್ತರಕನ್ನಡ-ಶಿವಮೊಗ್ಗ ಗಳಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳು
ಉತ್ತರಕನ್ನಡ ಜಿಲ್ಲೆಯ 6 ಸಾವಿರ ಜನರು ಸೇರಿ ಕರ್ನಾಟಕದೆಲ್ಲೆಡೆ ಕಾರಂಟೈನ್ ಆಗಿರುವ ಲಕ್ಷಾಂತರ ಜನರಲ್ಲಿ ಸಾವಿರಾರು ಜನರು ಕರೋನಾ ಕ್ಕೆ ತುತ್ತಾಗಿರುವ ಬಗ್ಗೆ ಈಗ ಶಂಕೆ ವ್ಯಕ್ತವಾಗಿದೆ.
ಮೊದಮೊದಲು ಉತ್ತರ ಕನ್ನಡ ಜಿಲ್ಲೆಗೆ ಬಂದ ಹೊರದೇಶಗಳ ಉದ್ಯೋಗಿಗಳು ಕೋವಿಡ್ ಪ್ರಾರಂಭಕ್ಕೆ ಕಾರಣವಾದರು. ನಂತರ ತಬ್ಲಿಘಿಗಳ ಓಡಾಟ,ಒಡನಾಟದಿಂದ ಕರೋನಾ ದೇಶ ಸುತ್ತತೊಡಗಿತ್ತು.
ಈಗ ಮಹಾರಾಷ್ಟ್ರ,ಗುಜರಾತ್, ಚಿನ್ನೈಗಳಿಂದ ಬಂದ ಜನರು ಉತ್ತರಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕರೋನಾ ಹಬ್ಬಿಸುತಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ದೃಢಪಟ್ಟ ಎರಡು ಕರೋನಾ ಪಾಸಿಟಿವ್ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದ ವ್ಯಕ್ತಿಗಳ ಪ್ರಕರಣಗಳು. ಮಹಾರಾಷ್ಟ್ರದಿಂದ
ಶಿವಮೊಗ್ಗ ಜಿಲ್ಲೆ ಸೊರಬಾ ಕ್ಕೆ ಹೊರಟಿದ್ದ ಈ ಕುಟುಂಬವನ್ನು ಪೊಲೀಸರು ಯಲ್ಲಾಪುರದಲ್ಲಿ ತಡೆದು ಕಾರಂಟೈನ್ ಮಾಡಿದ್ದರು. ಈ ಎರಡೂ ಪ್ರಕರಣಗಳಂತೆ ಉತ್ತರಕನ್ನಡದ 6 ಸಾವಿರ ಕಾರಂಟೈನ್ ಆದ ಜನರು ಹಾಗೂ ರಾಜ್ಯದ ಲಕ್ಷಾಂತರ ಜನರಲ್ಲಿ ಕರೋನಾ ಕಾಣಿಸಿಕೊಳ್ಳುವ ಅಪಾಯದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ.
ಬಸ್ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವುದು, ಹೊರ ರಾಜ್ಯಗಳಿಂದ ಬಂದ ಜನರ ತಪಾಸಣೆ, ಕಾರಂಟೈನ್ ಕ್ರಮಗಳ ನಡುವೆ ನುಸುಳುಕೋರರು ಸುದ್ದಿಮಾಡದೆ ಗ್ರಾಮ, ನಗರ ಸೇರಿಕೊಂಡಿರುವ ಅನೇಕ ಉದಾಹರಣೆಗಳೂ ಇವೆ.
ಈ ವಿಶೇಶ ಪ್ರಕರಣಗಳ ಹಿನ್ನೆಲೆಯಲ್ಲಿ ಒಬ್ಬೊಬ್ಬ ವ್ಯಕ್ತಿ ನೂರಾರು ಜನರಿಗೆ ಕರೋನಾ ವಿಸ್ತರಿಸುವ ಅಪಾಯವಿರುವುದರಿಂದ ಸಾರ್ವಜನಿಕರು ಓಡಾಟ, ವಹಿವಾಟು ನಿಲ್ಲಿಸಿ ಮನೆಯಲ್ಲೇ ಉಳಿಯುವುದು ಮತ್ತು ಕರೋನಾ ನಿರ್ಬಂಧದ ಉಪಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಂಕಷ್ಟದಿಂದ ಪಾರಾಗಬೇಕಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *