ಎಸ್.ಎಸ್.ಎಲ್.ಸಿ. ಪರೀಕ್ಷೆ ಬಗ್ಗೆ ದಿನೇಶ್ ಅಮ್ಮಿನಮಟ್ಟು ಅಭಿಪ್ರಾಯ

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ವಿಷಯ ವಿದ್ಯಾರ್ಥಿಗಳು ಮತ್ತು ಅವರ ಪಾಲಕರ ಪಾಲಿಗೆ ಜೀವನ್ಮರಣದ ಪ್ರಶ್ನೆಯಾದರೆ, ರಾಜ್ಯದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪ್ರತಿಷ್ಠೆಯ ಪ್ರಶ್ನೆ.

ದನದ ಕೊಟ್ಟಿಗೆಯಲ್ಲಿ ಮಲಗುವ, ರಸ್ತೆ ಗುಡಿಸುವ ಮೂಲಕ ತಾನೊಬ್ಬ ನೆಲದ ದನಿಗೆ ಕಿವಿಯೊಡ್ಡುವವ ಎಂಬ ಸಂದೇಶವನ್ನು ಸದಾ ರವಾನಿಸುತ್ತಿರುವ ಸಚಿವರು ಎಸ್ ಎಸ್ ಎಲ್ ಸಿ ಪರೀಕ್ಷೆಯ ವಿಚಾರದಲ್ಲಿ ಮಾತ್ರ ಸಂಪೂರ್ಣವಾಗಿ ಜನರ ದನಿಗೆ ಕುರುಡ-ಕಿವುಡರಾಗಿದ್ದಾರೆ.

ಇವರ ಪ್ರತಿಷ್ಠೆಗೆ ರಾಜ್ಯದ ಎಂಟುವರೆ ಲಕ್ಷ ವಿದ್ಯಾರ್ಥಿಗಳು ಮಾತ್ರವಲ್ಲ, ಅವರ ಕುಟುಂಬದ ಸದಸ್ಯರು ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿ (ಒಂದು ಅಂದಾಜಿನ ಪ್ರಕಾರ ಸುಮಾರು 25 ಲಕ್ಷ ಮಂದಿ) ಅಪಾಯಕ್ಕೆ ಸಿಲುಕುವ ಹೊಸ್ತಿಲಲ್ಲಿದ್ದಾರೆ.ಲಾಕ್ ಡೌನ್ ಹಿಂತೆಗೆದ ನಂತರ ಕೊರೊನಾ ಮಾರಿ ಲಂಗುಲಗಾಮಿಲ್ಲದೆ ದಾಳಿ ಇಡತೊಡಗಿದೆ, ಕ್ಯಾಂಡಲ್ ಹಚ್ಚುವ, ಜಾಗಟೆ ಬಾರಿಸುವ ಬಾಲಲೀಲೆಯ ನಂತರ ಸರ್ಕಾರ ಕೈಚೆಲ್ಲಿ ಕೊರೊನಾ ಜೊತೆ ಬದುಕುವ ಅಲ್ಲ, ಸಾಯುವ ನಿರ್ಧಾರಕ್ಕೆ ಬಂದಂತಿದೆ.

ಖಾಸಗಿ ಶಾಲೆಗಳ ಶ್ರೀಮಂತರ ಮಕ್ಕಳ ಪಾಲಕರು ಎಲ್ಲ ಸುರಕ್ಷಿತಾ ಕ್ರಮಗಳನ್ನು ಕೈಗೊಂಡು ಮಕ್ಕಳನ್ನು ಸುರಕ್ಷಿತವಾಗಿ ಪರೀಕ್ಷೆ ಬರೆಯುವಂತೆ ಮಾಡಬಹುದು. ಆದರೆ ಬಹುಸಂಖ್ಯಾತ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಬಡ ಕುಟುಂಬ ಮತ್ತು ಗ್ರಾಮೀಣ ಪ್ರದೇಶದಿಂದ ಬಂದವರು. ಲಾಕ್ ಡೌನ್ ಹಿಂದೆಗೆದ ನಂತರ ಊರಿಗೆ ಮರಳುವವರ ಸಂಖ್ಯೆ ಹೆಚ್ಚಾಗಿ ಹಳ್ಳಿಗಳು ಮುಚ್ಚಿಕೊಂಡ ಜ್ವಾಲಾಮುಖಿ ಮೇಲೆ ನಿಂತಂತಿವೆ. ಈ ಹಳ್ಳಿ ವಿದ್ಯಾರ್ಥಿಗಳ ಗತಿ ಏನು?

ಇದೊಂದು ಸರಳ ವಿಷಯ: ಶಿಕ್ಷಣ ಪಡೆಯುವುದು ಪರೀಕ್ಷೆ ಪಾಸು ಮಾಡಲಿಕ್ಕಾಗಿಯೇ ಇಲ್ಲವೇ ಜ್ಞಾನ ಸಂಪಾದನೆಗಾಗಿಯೇ? ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಪರೀಕ್ಷೆಗಳು ಅನಿವಾರ್ಯ ನಿಜ, ಆದರೆ ಯಾವ ಬೆಲೆತೆತ್ತು? ಜೀವದ ಬೆಲೆ ತೆತ್ತೇ? ವಿದ್ಯಾರ್ಥಿಗಳು ಪರೀಕ್ಷೆಗಾಗಿ ಓದಿದ್ದಾರೆ, ಪರೀಕ್ಷೆ ಬರೆಯದೆ ಇದ್ದರೆ ಅವರು ಓದಿದ್ದೆಲ್ಲ ಮೆದುಳಿನಿಂದ ಡಿಲೀಟ್ ಆಗುತ್ತದೆಯೇ? ಆದ್ದರಿಂದ ಪರೀಕ್ಷೆ ರದ್ದತಿಯಿಂದ ಬೌದ್ದಿಕವಾಗಿ ಮಕ್ಕಳಿಗೆ ದೊಡ್ಡ ನಷ್ಟ ಇಲ್ಲ.ನಷ್ಟ ಆಗಲಿರುವುದು ಎರಡು ವರ್ಗಕ್ಕೆ.

ಮೊದಲನೆಯ ವರ್ಗದಲ್ಲಿ ಕೆಲವು ವಿದ್ಯಾರ್ಥಿಗಳ ಪಾಲಕರಿದ್ದಾರೆ. ಪರೀಕ್ಷೆ ರದ್ದು ಮಾಡಿದರೆ ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ನಷ್ಟ ಇಲ್ಲ. ಪರೀಕ್ಷೆ ನಡೆಸದೆ ಎಲ್ಲರನ್ನು ಉತ್ತೀರ್ಣಗೊಳಿಸಿ ಎನ್ನುತ್ತಾರೆ ಪರೀಕ್ಷೆಯನ್ನು ವಿರೋಧಿಸುತ್ತಿರುವ ಶಿಕ್ಷಣ ತಜ್ಞರು ಮತ್ತು ಪಾಲಕರು. ಆದರೆ Rankಗಾಗಿ, ಪ್ರಥಮದರ್ಜೆಗಾಗಿ, ಶಾಲೆಯಲ್ಲಿ ಮೊದಲ ಸ್ಥಾನ ಬರಲಿಕ್ಕಾಗಿ ಓದಿದವರಿಗೆ ನಷ್ಟ.

ಇಲ್ಲಿಯೂ ವಿದ್ಯಾರ್ಥಿಗಳಿಗಿಂತ ಮಕ್ಕಳ Rank, ಕ್ಲಾಸ್ ಗಳನ್ನು ಕಿರೀಟ ಮಾಡಲು ಹೊರಟ ಪಾಲಕರಿಗೆ ಹೆಚ್ಚಿನ ನಷ್ಟ.ಎರಡನೇ ವರ್ಗದಲ್ಲಿ ಆರ್ಥಿಕವಾಗಿ ನಷ್ಟ ಅನುಭವಿಸಬಹುದೆಂಬ ಭೀತಿಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿವೆ. ಅಂಕಗಳ ಆಧಾರದಲ್ಲಿ ಡೊನೇಷನ್, ಶಾಲಾ ಶುಲ್ಕ ನಿರ್ಧರಿಸುವ ಈ ಪ್ರತಿಷ್ಠಿತ, ಪ್ರಖ್ಯಾತ ಖಾಸಗಿ ಶಿಕ್ಷಣ ಸಂಸ್ಥೆಗಳು ಚೌಕಾಶಿ ಮಾಡುವ ಅವಕಾಶವೇ ಇಲ್ಲದಂತಾಗಿ ಆದಾಯ ಖೋತಾ ಆಗಬಹುದು ಎಂಬ ಭಯ ಅವರಿಗೆ.

ಈ ಕಾರಣಗಳಿಂದಾಗಿ ಸಚಿವ ಸುರೇಶ್ ಕುಮಾರ್ ಅವರು ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಿ ಎಂಬ ಪ್ರಾಯೋಗಿಕ ಸಲಹೆಯನ್ನು ತಿರಸ್ಕರಿಸಿ ತಾನು ಹೋದದ್ದೇ ದಾರಿ ಎನ್ನುವಂತೆ ಮುನ್ನುಗ್ಗುತಿದ್ದಾರೆ. ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ರಾಜಕಾರಣಿಗಳ ನಂಟು ಇರುವುದರಿಂದ ಸುರೇಶ್ ಕುಮಾರ್ ಹಾದಿ ಸುಲಭವಾಗಬಹುದು. ಆದರೆ ನಂತರ ಕಾದಿದೆ ಗಂಡಾಂತರ! -ದಿನೇಶ್ ಅಮ್ಮಿನಮಟ್ಟು

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *