ಸರ್ಕಾರದ ಕ್ರಮಕ್ಕೆ ವಿರೋಧ- ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಡಿತ ಸಲ್ಲದು

(ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಡಿತ ಸಲ್ಲದು-
ಚಿಂತನ ಉತ್ತರ ಕನ್ನಡ, ಸಹಯಾನ)

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಪ್ರತಿವರ್ಷ ಹೊರನಾಡಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ, ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ರಾಜ್ಯದ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಧನ ಸಹಾಯ ಮಾಡುವ ಕನ್ನಡದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರಿಗೆ ಗೌರವ ನೀಡುವ … ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿತ್ತು. ಆದರೆ ಪ್ರಾಧಿಕಾರವು ಅನುದಾನದ ಕೊರತೆಯಿಂದ ಇಂತಹ ಎಲ್ಲಾ ಪ್ರೋತ್ಸಾಹಕ ಕಾರ್ಯಕ್ರಮಗಳನ್ನೂ ಕೈಬಿಡುವ ತೀರ್ಮಾನ ತೆಗೆದುಕೊಂಡಿರುವುದು ದುರಾದೃಷ್ಟಕರ.
ಅದರಲ್ಲೂ ಕನ್ನಡ ಸಾಹಿತ್ಯ- ಸಂಸ್ಕೃತಿ- ಭಾಷೆಯ ಅಭಿವೃದ್ಧಿಗೆ ಅಗತ್ಯವಿರುವ ಧನ ಸಹಾಯವನ್ನು ಸರ್ಕಾರ ಕಡಿತ ಮಾಡಿದ್ದನ್ನೂ ಕೂಡ ಮರುಪರಿಶೀಲಿಸುವಂತೆ ಚಿಂತನ ಉತ್ತರ ಕನ್ನಡ ಮತ್ತು ಸಹಯಾನ, ಕೆರೆಕೋಣ ಒತ್ತಾಯಿಸುತ್ತವೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದೇ ಕನ್ನಡ ಭಾಷೆ ಸಾಹಿತ್ಯ ಕಲೆ ಸಂಸ್ಕೃತಿಯನ್ನೂ ಒಳಗೊಂಡಂತೆ ನಾಡು ನುಡಿಯ ಹಿತಾಸಕ್ತಿಯ ರಕ್ಷಣೆಗಾಗಿ. ಹಾಗೆಯೇ ಅಧಿಕಾರಕ್ಕೆ ಬರುವ ಎಲ್ಲಾ ಸರ್ಕಾರಗಳೂ ಕನ್ನಡ ಅಭಿವೃದ್ಧಿಯ ಕೆಲಸಕ್ಕೆ ಬದ್ಧವಾಗಿರುವುದಾಗಿಯೂ, ಕನ್ನಡದ ಕೆಲಸಕ್ಕೆ ಹಣಕಾಸಿನ ಕೊರತೆ ಎಂದೂ ಆಗದೆಂದು ಭರವಸೆ ನೀಡಿದ್ದನ್ನು ಮರೆತಿರುವುದು ಖಂಡನಾರ್ಹ.
ಈಗಾಗಲೇ ದೇಶದ ಹಲವು ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಪೀಠಗಳಿವೆ, ಅಧ್ಯಯನ ಕೇಂದ್ರಗಳಿವೆ, ಅಲ್ಲಿ ಕನ್ನಡ ಕಲಿಕೆ ಮತ್ತು ಸಂಶೋಧನೆಯ ಕೆಲಸ ನಡೆಯುತ್ತಿದೆ. ಇದು ಕನ್ನಡ ನುಡಿಯ ವಿಸ್ತರಣೆಯ ದೃಷ್ಟಿಯಿಂದ ತೀರಾ ಮಹತ್ವದ ಕೆಲಸ. ಹೊರ ರಾಜ್ಯದಲ್ಲಿ ಓದುವ ವಿದ್ಯಾರ್ಥಿಗಳಿಗೆ ಧನಸಹಾಯವಾಗಿ ವಿದ್ಯಾರ್ಥಿವೇತನ ನೀಡುವುದು ಕೂಡ ಕನ್ನಡದ ಅಭಿವೃದ್ಧಿಯ ಒಂದು ಭಾಗವೇ ಆಗಿದೆ. ಹೀಗೆ ಅಲ್ಪ ಮೊತ್ತದ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವುದರಿಂದ ಅವರ ಕಲಿಕೆ ಮೊಟಕಾಗುತ್ತದೆ. ಅಲ್ಲಿಯ ಕನ್ನಡ ವಿಭಾಗಗಳೇ ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಇದರ ಬದಲು ವಿದ್ಯಾರ್ಥಿ ವೇತನದ ಮೊತ್ತವನ್ನೂ ಈಗಿರುವ ಪ್ರಮಾಣಕ್ಕಿಂತ ಹೆಚ್ಚಿಸಲು ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸುತ್ತೇವೆ.
ಹಾಗೆಯೇ ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತಾಲೂಕಾವಾರು ನೀಡುತ್ತಿರುವ ಪ್ರೋತ್ಸಾಹ ಮತ್ತು ಧನ ಸಹಾಯವೂ ಕೂಡ ಹಲವು ಬಡ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಿದೆ. ಕನ್ನಡ ಕಲಿಕೆಯ ಕುರಿತು ಅವರಲ್ಲಿ ಆಸಕ್ತಿ ಬೆಳೆಸಿದೆ. ಈ ಪ್ರೋತ್ಸಾಹ ಧನವನ್ನು ಇನ್ನಷ್ಟು ವಿಸ್ತರಿಸಬೇಕಾದ ಅಗತ್ಯವಿರುವ ಸಂದರ್ಭದಲ್ಲಿ ಕನ್ನಡ ಅಭಿವದ್ಧಿ ಪ್ರಾಧಿಕಾರವು ಹಣಕಾಸಿನ ಕೊರತೆಯ ನೆಪವೊಡ್ಡಿ ಈ ಕೆಲಸವನ್ನೇ ನಿಲ್ಲಿಸುತ್ತಿರುವುದು ಸರಿಯಾದ ಕ್ರಮವಲ್ಲ. ಪ್ರಾಧಿಕಾರವು ಕನ್ನಡದ ಮನಸ್ಸುಗಳನ್ನು ಒಟ್ಟು ಸೇರಿಸಿ ಸಮಾಲೋಚಿಸಿ ಸರ್ಕಾರಕ್ಕೆ ಮನವರಿಕೆ ಮಾಡಿ, ಒತ್ತಡ ತಂದು ಹಣ ಬಿಡುಗಡೆಯ ಕೆಲಸ ಮಾಡಿಸಬೇಕೇ ಹೊರತೂ ಹಣ ನೀಡಿಲ್ಲವೆಂದು ಕಾರ್ಯಕ್ರಮಗಳನ್ನೇ ಕೈಬಿಡುವುದಲ್ಲ. ಮತ್ತು ಪ್ರಾಧಿಕಾರಕ್ಕೆ ಈಗಿರುವ ಎರಡು ಕೋಟಿಯಿಂದ ಕನಿಷ್ಟ ಹತ್ತು ಕೋಟಿ ರೂಪಾಯಿ ಅನುದಾನವನ್ನು ಹೆಚ್ಚಿಸುವುದು ಸರ್ಕಾರಕ್ಕೆ ದೊಡ್ಡ ಹೊರೆಯೇನೂ ಆಗದು. ಈ ಹಣದಲ್ಲಿ ಪ್ರಾಧಿಕಾರವು ಕನ್ನಡದ ಚಿಂತಕರು ಸಂಘಟಕರು ಮತ್ತು ಕಲಾವಿದರೊಂದಿಗೆ ಸಮಾಲೋಚಿಸಿ ಕನ್ನಡ ಕಟ್ಟುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮುಂದಾಗಬೇಕೆಂದು ಒತ್ತಾಯಿಸುತ್ತೇವೆ.
ವಿಠ್ಠಲ ಭಂಡಾರಿ
ಜಿಲ್ಲಾ ಸಂಚಾಲಕ, ಚಿಂತನ ಉತ್ತರ ಕನ್ನಡ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *