ರವಿವಾರ ಸಂಪೂರ್ಣ ಲಾಕ್ ಡೌನ್ ಇಲ್ಲ ಬಗೆಹರಿದ ಗೊಂದಲ

ರಾಜ್ಯದಲ್ಲಿ ನಾಳೆಯ ರವಿವಾರ 4 ನೇ ಹಂತದ ಲಾಕ್ ಡೌನ್ ಮುಗಿದು 5 ನೇ ಹಂತದ ಲಾಕ್ ಡೌನ್ ಜೂನ್ 15 ರ ವರೆಗೆ ಮುಂದುವರಿಯಲಿದೆ.

ಈ ಹಿಂದಿನ ಘೋಷಣೆಗಳ ಪ್ರಕಾರ ರವಿವಾರ ಲಾಕ್ ಡೌನ್ ಮುಂದುವರಿಯಲಿದೆ ಎನ್ನುವ ಸುದ್ದಿ ಸದ್ದು ಮಾಡಿತ್ತು. ಆದರೆ ಇಂದು ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವಿವಾರ ಅಂದರೆ ಮೇ31 ರಂದು ರಾಜ್ಯಾದ್ಯಂತ ಲಾಕ್ ಡೌನ್ ಇರುವುದಿಲ್ಲ ಎಂದು ಪ್ರಕಟಿಸಿದ್ದಾರೆ.

ಉತ್ತರ ಕನ್ನಡ ವರ್ತಮಾನ- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಟ್ಕಳ ಸೇರಿ ಎಲ್ಲಾ ತಾಲೂಕುಗಳಲ್ಲಿ ಮೇ 31 ರ ರವಿವಾರ ಕೂಡಾ ಲಾಕ್ ಡೌನ್ ಆಗಲಿದೆ ಎನ್ನುವ ಗಾಳಿಸುದ್ದಿ ತೇಲಾಡುತಿತ್ತು. ಆದರೆ ಮುಖ್ಯಮಂತ್ರಿಗಳ ಘೋಷಣೆಯ ನಂತರ ಜಿಲ್ಲಾಧಿಕಾರಿ ಹರೀಶ್ ಕುಮಾರ್ ರವಿವಾರ ಲಾಕ್ ಡೌನ್ ಇರುವುದಿಲ್ಲ ಎಂದು ಸ್ಪಸ್ಟಪಡಿಸಿದ್ದಾರೆ. ಆದರೆ ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳ ಪ್ರಕಟಣೆ ನಂತರ ಕೂಡಾ ಉತ್ತರಕನ್ನಡ ಜಿಲ್ಲೆಯಲ್ಲಿ ರವಿವಾರ ಲಾಕ್ ಡೌನ್ ಇರುವುದಿಲ್ಲ ಎಂದು ಸ್ಥಳಿಯ ಆಡಳಿತಗಳು ಸ್ಪಸ್ಟಪಡಿಸಿರಲಿಲ್ಲ. ಆದರೆ ಈಗಿನ ಮಾಹಿತಿಯೆಂದರೆ ಭಟ್ಳಳದ ಕೆಲವು ಪ್ರದೇಶಗಳ ನಿರ್ಬಂಧಗಳನ್ನು ಹೊರತುಪಡಿಸಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮೇ,31 ರ ರವಿವಾರದ ಲಾಕ್ ಡೌನ್ ಇರುವುದಿಲ್ಲ. ಜಿಲ್ಲೆಯ ಜನರು ಎಂದಿನಂತೆ ರವಿವಾರ ಕೂಡಾ ತಮ್ಮ ಅಗತ್ಯ ಕೆಲಸಗಳನ್ನು ಮಾಡಿಕೊಳ್ಳಬಹುದು.

ಈ ವಿಳಂಬ ಪ್ರಕಟಣೆಯಿಂದ ಮೀನು-ಮಾಂಸ ಮಾರಾಟಗಾರರು ಸೇರಿದಂತೆ ಕೆಲವರಿಗೆ ತೊಂದರೆಯಾಗಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ಪ್ರಾಮಾಣಿಕ ಪ್ರಯತ್ನದ ನಡುವೆ ಕೂಡಾ ಗೊಂದಲಗಳಾಗುತ್ತಿರುವುದಕ್ಕೆ ಇಂದಿನ ವಿದ್ಯಮಾನ ಉದಾಹರಣೆಯಾಗಿದೆ. ಎಂದಿನಂತೆ ಇಂಥ ವಿಚಾರಗಳಲ್ಲಿ ಪ್ರಮುಖ ಜನಪ್ರತಿನಿಧಿಗಳಾದ ಶಾಸಕರು, ಸಂಸದರು ಉಪೇಕ್ಷೆ ಮಾಡುತ್ತಿರುವುದು ಯತಾಪ್ರಕಾರ ಸಾರ್ವಜನಿಕರ ವಿರೋಧಕ್ಕೆ ಕಾರಣವಾಗಿದೆ.

ಇಂದಿನ ಬಂಡಾಯದ ಹಿಂದಿನ ಸಂತೋಷರ ಕಾರ್ಯಾಚರಣೆಯ ಸುತ್ತಮುತ್ತ
ಯಡಿಯೂರಪ್ಪ ವಿರುದ್ಧ ಸಂಘದ ಕಾರ್ಯಾಚರಣೆ
ಪೌರೋಹಿತ್ಯಕ್ಕೆ ಸಿದ್ಧವಾಗಿದೆಯಾ ಹೈಕಮಾಂಡ್?

ಬಿ.ಜೆ.ಪಿ.ಯಲ್ಲಿ ಬಿರುಕು ನಿರೀಕ್ಷಿತವಾದರೂ ಕರೋನಾದ ಸಂಕಟದ ಕಾಲದಲ್ಲಿ ಯಡಿಯೂರಪ್ಪ ಹಾಸಿಕೊಂಡಿದ್ದ ನೆಲಹಾಸನ್ನೇ ಎಳೆದು 77 ರ ಹಿರಿಯ ಯಡಿಯೂರಪ್ಪನವರನ್ನು ಮೇಲೇಳದಂತೆ ಕೆಳಕ್ಕೆ ತಳ್ಳಿಬಿಡಬಹುದೆನ್ನುವ ಕಲ್ಪನೆಯನ್ನು ಸಹಾ ಮಾಡದ ಕಾಲದಲ್ಲಿ ಯಡಿಯೂರಪ್ಪ ವಿರುದ್ಧ ಬಿ.ಜೆ.ಪಿ. ಯಲ್ಲಿ ಸ್ವಜಾತಿಯವರನ್ನೇ ಎತ್ತಿಕಟ್ಟಿ ತಮಾಸೆ ನೋಡಲಾಗುತ್ತಿದೆಯಾ?
ಅಥವಾ ಯಡಿಯೂರಪ್ಪ ಕಟ್ಟಿಕೊಂಡಿದ್ದ ಕೋಟೆಯ ಕಾವಲುಗಾರರನ್ನೇ ಖರೀದಿಸಿ ವೈದಿಕ ಆಟಕ್ಕೆ ಅಖಾಡದ ನೆಲ ಸಿದ್ಧಮಾಡಲಾಗುತ್ತಿದೆಯಾ ಎನ್ನುವ ಅನುಮಾನಗಳಿಗೆ ಎಡೆಯಾಗುವಂತೆ ಇಂದಿನ ವಿದ್ಯಮಾನಗಳು ನಡೆದಿವೆ.

ಗೋಕಾಕ್ ನ ಕತ್ತಿ ಸಹೋದರರು ಶಾಸಕರಿಗೆ ಔತಣಕೂಟ ಎರ್ಪಡಿಸಿ ಹಕ್ಕು ಪ್ರದಿಪಾದನೆ ಮಾಡಿ ಲಾಭ ಪಡೆಯಲು ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ. ಈ ಕೂಟದ ಮುಖ್ಯ ವ್ಯಕ್ತಿ ವಿಜಯಪುರದ ಬಸವರಾಜ್ ಪಾಟೀಲ್ ಯತ್ನಾಳ್ ಮತ್ತು ಉಮೇಶ್ ಕತ್ತಿ ತಮಗೆ ಮಂತ್ರಿಗಳನ್ನಾಗಿಸುವುದು ಸೇರಿದಂತೆ ತಮ್ಮ ಕೆಲವು ಬೇಡಿಕೆಗಳಿಗೆ ಯಡಿಯೂರಪ್ಪ ಸ್ಪಂದಿಸದಿದ್ದರೆ ಬಂಡಾಯ ಏಳುವ ಸೂಚನೆ ಕೊಟ್ಟಿದ್ದಾರೆ.
ಈ ಯೋಜನೆ, ಸೂಚನೆ ಹಿಂದೆ ಬಿ.ಜೆ.ಪಿ. ಹೈಕಮಾಂಡ್ ಕೈವಾಡದ ಶಂಕೆಯಂತೂ ಇದ್ದೇ ಇದೆ. ಆದರೆ ಒಳಗೊಳಗೆ ಯಡಿಯೂರಪ್ಪ ವಿರುದ್ಧ ಕುದಿಯುತ್ತಿರುವ ಕತ್ತಿ ಸಹೋದರರು, ಬಸವನಗೌಡ ಪಾಟೀಲ್ ರಂಥ ಖಾಲಿಡಬ್ಬಗಳ ಶಬ್ಧ ಮಾಡಿಸಿದರೆ ಯಡಿಯೂರಪ್ಪ ಸಹಜವಾಗಿ ಹೆದರುತ್ತಾರೆ ಆಗ ಈ ಕತ್ತಿ, ಯತ್ನಾಳ್ ರಿಗೆ ಸರ್ಕಾರದಲ್ಲಿ ಮಹತ್ವದ ಹುದ್ದೆ ಕೊಟ್ಟು ಅಂತರ್ ಚಿಶಾಚಿಯಂತೆ ಅಲೆಯುತ್ತಿರುವ ಸಂತೋಷರಂಥ ವೈದಿಕರನ್ನು ಕೂಡ್ರಿಸಿದರೆ ಆಗ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆದಂತಾಗುತ್ತದೆ ಎನ್ನುವುದು ಬಿ.ಜೆ.ಪಿ.ಯೊಳಗಿನ ಕಟ್ಟರ್ ಸಂಘಿಗಳ ಆಲೋಚನೆ! ….. visit-samajamukhi.net

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *