corona-bangalore to-sagar-via-kumta- ಬೆಂಗಳೂರಿನ ಪ್ರಕರಣದಿಂದ ಕಂಟೇನ್‍ಮೆಂಟ್ ಆದ ಜೋಗ ಬಳಿಯ ಕುಗ್ರಾಮ ಜಿಡ್ಡಿ -ಇಂತಿದೆ ಇಂದಿನ ಸಿದ್ಧಾಪುರದ ಪ್ರಕರಣಗಳ ಪ್ರವಾಸ ಚರಿತ್ರೆ

ಕಳೆದ ವಾರ ಸಿದ್ಧಾಪುರದ ಮೊದಲಪ್ರಕರಣವಾಗಿ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿಸಿದ ಪ್ರಕರಣದ ನಂತರ ಇಂದು ಒಂದೇ ದಿವಸ ಸಿದ್ಧಾಪುರದಲ್ಲಿ ಎರಡು ಜನರಲ್ಲಿ ಕರೋನಾಸೋಂಕು ದೃಢಪಟ್ಟಿವೆ.
ಸಿದ್ಧಾಪುರದ ಜಿಡ್ಡಿ ಗ್ರಾಮದ 5 ಮನೆಗಳ ಪ್ರದೇಶವನ್ನು ಕಂಟೇನ್ಮೆಂಟ್ ಮಾಡಿದ ಕರೋನಾ ಸೋಂಕಿತ 12 ದಿವಸಗಳ ಹಿಂದೆ ಮಸ್ಕತ್ ನಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿ,

ಬೆಂಗಳೂರಿನಲ್ಲಿ10 ದಿವಸ ಕಾರಂಟೈನ್ ಆಗಿದ್ದ ವ್ಯಕ್ತಿ ಮೇ 29 ರಂದು ಬೆಂಗಳೂರಿನಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು-ಸಾಗರ ಬಸ್ ನಲ್ಲಿ ಸಾಗರಕ್ಕೆ ಬಂದು ಲಗೇಜ್ ರಿಕ್ಷಾದಲ್ಲಿ ಹುಟ್ಟೂರು ಜೋಗದ ಬಳಿಯ ಜಿಡ್ಡಿ ಸೇರಿಕೊಂಡಿದ್ದರು.

ಜಿಡ್ಡಿಯಲ್ಲಿ ಪ್ರತ್ಯೇಕವಾಗಿದ್ದ ಅವರ ಮನೆಯ ಪ್ರತ್ಯೇಕ ಕೋಣೆ, ಶೌಚ, ಸ್ನಾನಗೃಹಗಳನ್ನು ಬಳಸಿದ್ದರು. ಈ ಕೋವಿಡ್ ಸೋಕಿತನ ಸ್ವ್ಯಾಬ್ ಮಾದರಿಯನ್ನು ಬೆಂಗಳೂರಿನಲ್ಲಿ ಸಂಗ್ರಹಿಸಿದ್ದರಿಂದ ಈ ಪ್ರಕರಣ ಉತ್ತರಕನ್ನಡ ಜಿಲ್ಲೆಯ ಕೊರೋನಾ ಸೋಕಿತರ ಪಟ್ಟಿಯಲ್ಲಿಲ್ಲ. ಈ ಸೋಂಕಿತ ಬೆಂಗಳೂರು,ಅಲ್ಲಿಂದ ಸಾಗರ, ಸಾಗರದಿಂದ ಜಿಡ್ಡಿ ಇಲ್ಲೆಲ್ಲೂ ಇತರರ ನೇರ ಸಂಪರ್ಕಕ್ಕೇ ಬಂದಿರಲಿಲ್ಲ ಎನ್ನುವುದು ವಿಶೇಶ.

ಸಿದ್ಧಾಪುರದ ಕಾವಂಚೂರು ಕಾರಂಟೈನ್ ಕೇಂದ್ರದಲ್ಲಿ ಕಾರಂಟೈನ್ ಆಗಿದ್ದ 20 ವರ್ಷದ ಯುವಕನಲ್ಲಿ ಕೋವಿಡ್ ದೃಢಪಟ್ಟಿದ್ದು ಇವರು ರಾಜ್ಯದ 3210 ನೇ ಕರೋನಾ ಸೋಕಿತರಾಗಿದ್ದಾರೆ. ಇವರು ಇವರ ಅಕ್ಕ, ತಂದೆ ಹಾಗೂ ಪಕ್ಕದಮನೆಯ ವ್ಯಕ್ತಿಯೊಬ್ಬರೊಂದಿಗೆ ಮಹಾರಾಷ್ಟ್ರದ ಠಾ ಣಾದಿಂದ ಖಾಸಗಿವಾಹನದಲ್ಲಿ ಬಂದಿದ್ದರು.

24 ರಂದು ಠಾಣಾದಿಂದ ಹೊರಟಿದ್ದ ಈ ತಂಡ25 ಕ್ಕೆ ಸಿದ್ಧಾಪುರ ತಲುಪಿ ಕಾವಂಚೂರ್ ನಲ್ಲಿ ಕಾರಂಟೈನ್ ಆಗಿದ್ದರು. ಇದೇ ಕಾವಂಚೂರು ಕಾರಂಟೈನ್ ಕೇಂದ್ರಕ್ಕೆ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಗಳಲ್ಲಿ ಒಬ್ಬರಲ್ಲಿ ಹಿಂದಿನ ವಾರ ಕರೋನಾ ಸೋಂಕು ದೃಢಪಟ್ಟಿತ್ತು. ಹೀಗೆ ಸಿದ್ಧಾಪುರದಲ್ಲಿ ಮೂರು ಕಡೆ ಕಾರಂಟೈನ್ ಆಗಿರುವ ನೂರಾರು ಜನರಲ್ಲಿ ಅನೇಕರ ಸ್ವ್ಯಾಬ್ ಮಾದರಿಯ ವರದಿ ಬರಬೇಕಿದೆ.

ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ ಸಿದ್ಧಾಪುರದ ಒಂದು ಪ್ರಕರಣ, ಕುಮಟಾದ ನಾಲ್ಕು ಪ್ರಕರಣಗಳು ಸೇರಿ ಒಟ್ಟೂ 5 ವ್ಯಕ್ತಿಗಳಲ್ಲಿ ಹಾಗೂ ಉತ್ತರಕನ್ನಡ ಪಟ್ಟಿಗೆ ಸೇರದ ಸಿದ್ಧಾಪುರ ಜಿಡ್ಡಿಯ ಪ್ರಕರಣ ಸೇರಿ ಒಟ್ಟೂ ಆರು ಜನರಲ್ಲಿ ಕೋವಿಡ್ 19 ದೃಢ ಪಟ್ಟಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *