world environment day spl- ಪರಿಸರ ಪ್ರೀತಿಯ ಎಂ.ಬಿ.ನಾಯ್ಕ ಮತ್ತು ಕಾಡುಬೀಜ ಬಿತ್ತುವ ಗಣಪತಿ ವಡ್ನಗದ್ದೆ

ಪಶ್ಚಿಮಘಟ್ಟದ ಪರಿಸರ ವೈವಿಧ್ಯ ಇಲ್ಲಿಯ ಜನಜೀವನಕ್ಕೆ ವರ. ಈ ವರದ ಕಾರಣ ಅನೇಕರು ಈ ಪರಿಸರದ ಫಲಾನುಭವಿಗಳಾದರೆ ಕೆಲವರು ಈ ಪ್ರಕೃತಿಯ ಸಂರಕ್ಷಣೆ,ಪೋಷಣೆಗೆ ತಮ್ಮದೇ ಅಳಿಲು ಸೇವೆ ಸಲ್ಲಿಸುವ ಮೂಲಕ ಜೀವವೈವಿಧ್ಯ ರಕ್ಷಣೆಗೆ ಕೊಡುಗೆ ನೀಡುತಿದ್ದಾರೆ.ಇಂಥವರಲ್ಲಿ ಗಣಪತಿ ಹೆಗಡೆ ವಡ್ನಗದ್ದೆ ಮತ್ತು ಎಂ.ಬಿ.ನಾಯ್ಕ ಕಡಕೇರಿ ಪ್ರಮುಖರು.
ಎಂ.ಬಿ.ನಾ. ಮತ್ತು ಗಣಪತಿ ಹೆಗಡೆಯವರ ಸಾಮ್ಯತೆಗಳೆಂದರೆ….

ಇಬ್ಬರೂ ಪರಿಸರ ವಿಜ್ಞಾನ, ಬೈಯೋ ಟೆಕ್ನಾಲಜಿ, ಅರಣ್ಯಶಾಸ್ತ್ರ ಗಳನ್ನು ಶಾಸ್ತ್ರೀ ಯವಾಗಿ ಓದಿದವರಲ್ಲ.ಪದವಿಧರರಲ್ಲದ ಇಬ್ಬರೂ ಅರಣ್ಯ,ಸಸ್ಯಲೋಕದ ಬಗ್ಗೆ ಅಪಾರ ಪ್ರೀತಿ-ಕಾಳಜಿ ಹೊಂದಿದವರು.
ಎಂ.ಬಿ.ನಾಯ್ಕ ಕಷಿ ಕಟ್ಟುವ, ಸಸಿಗಳನ್ನು ಬೆಳೆಸುವ, ಸಂಶೋಧಕರಿಗೆ ಮಾರ್ಗದರ್ಶನ ಮಾಡುವ ಮೂಲಕರಾಜ್ಯ ಪರಿಸರ ಪ್ರಶಸ್ತಿ ಪಡೆದ ವಿರಳ ಸಾಧಕರಾದರೆ,

ಗಣಪತಿ ವಡ್ನಗದ್ದೆಯವರಿಗೆ ಕಾಡೇ ಅವರ ಆಸ್ತಿ! ಬೆಟ್ಟ-ಗುಡ್ಡ,ಕಣಿವೆಗಳಲ್ಲಿ ಕಾಡು ಬೀಜಗಳನ್ನು ಸಂಗ್ರಹಿಸಿ ಅವುಗಳನ್ನು ಅವುಗಳ ಅನುಕೂಲಕರ ವಾತಾವರಣದಲ್ಲಿ ಬಿತ್ತುವ ಇವರಿಗೆ ಕಾಡು ನೆಡುವುದೇ ಹವ್ಯಾಸ.
ಸಮಾನ ಆಸಕ್ತರಾದ ಇಬ್ಬರೂ ಸೇರಿ ಕಾರ್ಯಕ್ರಮ ಮಾಡುವುದು, ಕಾರ್ಯಕ್ರಮಗಳಲ್ಲಿ ಕಾಡಿನ ಮಹತ್ವ ಸಾರುವುದು ಸೇರಿದಂತೆ ವರ್ಷವಿಡೀ ಪರಿಸರದ ಕೆಲಸ ಮಾಡುವುದೇ ಇವರ ಪ್ರವೃತ್ತಿ.

ಎಂ.ಬಿ.ನಾಯ್ಕ ಮಲೆನಾಡು ಪಶ್ಚಿಮಘಟ್ಟದ ಸಸ್ಯಪ್ರಭೇದಗಳನ್ನು ರಾಜ್ಯ, ರಾಷ್ಟ್ರದಾದ್ಯಂತ
ಉದ್ಯಾನವನಗಳಲ್ಲಿ ನೆಡಿಸುವ ಮೂಲಕ ಪಶಿಮಘಟ್ಟದ ಸಸ್ಯ ಪ್ರಭೇದಗಳನ್ನು ಬಯಲುನಾಡು, ಸೀಮೆಗಳಿಗೂ ಪರಿಚಯಿಸಿದ್ದಾರೆ. ಕಡಿಮೆ ಮಳೆ, ಒಣ ಹವೆಯಲ್ಲಿ ಮಳೆನಾಡಿನ ಗಿಡಗಳನ್ನು ಬೆಳೆಸುವ ವಿಧಾನವನ್ನು ಪರಿಚಯಿಸುತ್ತಿರುವ ಎಂ.ಬಿ.ನಾಯ್ಕ ನೂರಾರು ಅಳಿವಿನಂಚಿನ ಸಸ್ಯ ಪ್ರಭೇದಗಳನ್ನು ಉಳಿಸಿದ್ದಾರೆ.

ಇಂಥ ಕೆಲಸಗಳಿಗೆ ನೆರವಾಗುವ ಗಣಪತಿ ವಡ್ನಗದ್ದೆ ತಮ್ಮ ಪರಿಸರ, ಮಲೆನಾಡಿನ ಬೆಟ್ಟ-ಗುಡ್ಡಗಳಲ್ಲಿ ಈ ಭಾಗದ ಕಾಡು ಬೀಜಗಳನ್ನು ಬಿತ್ತಿ ನೈಸರ್ಗಿಕ ಕಾಡಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ.ಸಿದ್ಧಾಪುರ ತಾಲೂಕು, ಉತ್ತರ ಕನ್ನಡ ಜಿಲ್ಲೆಯಿಂದ ಪ್ರಾರಂಭಿಸಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ವರೆಗೆ ಪ್ರಕೃತಿ, ಪರಿಸರಕ್ಕಾಗಿ ಪ್ರವಾಸ ಮಾಡುವ ಆಸಕ್ತಿಯ ಈ ಇಬ್ಬರೂ ಕೃಷಿಕರು ಎನ್ನುವುದು ವಿಶೇಶ.

ಅರಣ್ಯ ಇಲಾಖೆ, ಅರಣ್ಯ ಕಾಲೇಜುಗಳಿಗೆ ಸಂನ್ಮೂಲ ವ್ಯಕ್ತಿಗಳಾಗಿರುವ ಇವರು ಜೂನ್ 5 ರಂದು ಮಾತ್ರ ವಿಶ್ವ ಪರಿಸರ ದಿನ ಆಚರಿಸದೆ ಪ್ರತಿದಿನವನ್ನು ಪರಿಸರ ದಿನವನ್ನಾಗಿಸಿಕೊಂಡಿದ್ದಾರೆ. ಈ ಇಬ್ಬರ ಜ್ಞಾನ, ಆಸಕ್ತಿ, ಅಭಿರುಚಿ ಹೊಸ ಪೀಳಿಗೆಗೆ ಪರಿಚಯವಾಗಬೇಕಾಗಿದೆ.

(related-ಈ ಮರ ಸುತ್ತಿ ಬಂಜೆತನದಿಂದ ಮುಕ್ತರಾಗಿ)

(news today )ಶಿರಸಿಯಲ್ಲಿ ಸ್ತ್ರೀ ಪೀಡಕನ ಬಂಧನ,ಅತ್ಯಾಚಾರಿ ಪರಾರಿ
ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಳ್ಳಾರಿ ಮೂಲದ ಸ್ತ್ರೀ ಪೀಡಕನೊಬ್ಬನನ್ನು ಬಂಧಿಸಿ,ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.ಈತ ತನ್ನ ಪರಿಚಯದ ಶಿಕ್ಷಕಿಯೊಬ್ಬರಿಗೆ ಹಣಕ್ಕಾಗಿ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ. ಬಳ್ಳಾರಿ ಬಳಿ ಶಾಲಾ ಶಿಕ್ಷಕಿಯಾಗಿದ್ದ ಮಹಿಳೆಯೊಬ್ಬರ ಜೊತೆಗೆ ಸಲುಗೆಯಂದಿದ್ದುನಂತರ ತನ್ನ ಬಳಿ ಇದ್ದ ಚಿತ್ರಗಳನ್ನು ಬಳಸಿಕೊಂಡು ಹಣಕ್ಕಾಗಿ ಪೀಡಿಸುತಿದ್ದ ಎನ್ನಲಾಗಿದೆ. ಈತ ಶಿವಕುಮಾರ ಮುಳಸಾವಳಗಿ ಎನ್ನುವ ವ್ಯಕ್ತಿಯಾಗಿದ್ದು ಶಿರಸಿಗ್ರಾಮೀಣಭಾಗ ಬನವಾಸಿಹೋಬಳಿಯ ಶಿಕ್ಷಕಿಗೆ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ.
ಅತ್ಯಾಚಾರಿ ಪರಾರಿ-
ಶಿರಸಿ ನಗರಸಭೆಯ ಸದಸ್ಯ ಯಶವಂತ್ ಮರಾಠೆ ಮೇಲೆ ಅಪ್ರಾಪ್ತಬಾಲಕಿಯ ಅತ್ಯಾಚಾರದ ಕೇಳಿಬಂದಿದ್ದು ಶಿರಸಿ ಗ್ರಾಮೀಣಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ಗ್ರಾಮೀಣ ಭಾಗದ 16 ವರ್ಷದ ಬಾಲಕಿಗೆ ಅತ್ಯಾಚಾರವೆಸಗುವ ಉದ್ದೇಶದಿಂದ ನಂಬಿಸಿ,ಅಧಿಕಾರ ಬಳಸಿ ಬಚಾವಾಗಲು ಪ್ರಯತ್ನಿಸಿ ನಂತರ ನಾಪತ್ತೆಯಾಗಿದ್ದಾನೆ. ಅಪ್ರಾಪ್ತಬಾಲಕಿಯನ್ನು ನಂಬಿಸಿ ನಿರಂತರ ಅತ್ಯಾಚಾರ ಎಸಗಿದ ಆರೋಪಕ್ಕೆ ಯಶವಂತ್ ಮರಾಠೆ ಮೇಲೆ ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *