world environment day spl- ಪರಿಸರ ಪ್ರೀತಿಯ ಎಂ.ಬಿ.ನಾಯ್ಕ ಮತ್ತು ಕಾಡುಬೀಜ ಬಿತ್ತುವ ಗಣಪತಿ ವಡ್ನಗದ್ದೆ

ಪಶ್ಚಿಮಘಟ್ಟದ ಪರಿಸರ ವೈವಿಧ್ಯ ಇಲ್ಲಿಯ ಜನಜೀವನಕ್ಕೆ ವರ. ಈ ವರದ ಕಾರಣ ಅನೇಕರು ಈ ಪರಿಸರದ ಫಲಾನುಭವಿಗಳಾದರೆ ಕೆಲವರು ಈ ಪ್ರಕೃತಿಯ ಸಂರಕ್ಷಣೆ,ಪೋಷಣೆಗೆ ತಮ್ಮದೇ ಅಳಿಲು ಸೇವೆ ಸಲ್ಲಿಸುವ ಮೂಲಕ ಜೀವವೈವಿಧ್ಯ ರಕ್ಷಣೆಗೆ ಕೊಡುಗೆ ನೀಡುತಿದ್ದಾರೆ.ಇಂಥವರಲ್ಲಿ ಗಣಪತಿ ಹೆಗಡೆ ವಡ್ನಗದ್ದೆ ಮತ್ತು ಎಂ.ಬಿ.ನಾಯ್ಕ ಕಡಕೇರಿ ಪ್ರಮುಖರು.
ಎಂ.ಬಿ.ನಾ. ಮತ್ತು ಗಣಪತಿ ಹೆಗಡೆಯವರ ಸಾಮ್ಯತೆಗಳೆಂದರೆ….

ಇಬ್ಬರೂ ಪರಿಸರ ವಿಜ್ಞಾನ, ಬೈಯೋ ಟೆಕ್ನಾಲಜಿ, ಅರಣ್ಯಶಾಸ್ತ್ರ ಗಳನ್ನು ಶಾಸ್ತ್ರೀ ಯವಾಗಿ ಓದಿದವರಲ್ಲ.ಪದವಿಧರರಲ್ಲದ ಇಬ್ಬರೂ ಅರಣ್ಯ,ಸಸ್ಯಲೋಕದ ಬಗ್ಗೆ ಅಪಾರ ಪ್ರೀತಿ-ಕಾಳಜಿ ಹೊಂದಿದವರು.
ಎಂ.ಬಿ.ನಾಯ್ಕ ಕಷಿ ಕಟ್ಟುವ, ಸಸಿಗಳನ್ನು ಬೆಳೆಸುವ, ಸಂಶೋಧಕರಿಗೆ ಮಾರ್ಗದರ್ಶನ ಮಾಡುವ ಮೂಲಕರಾಜ್ಯ ಪರಿಸರ ಪ್ರಶಸ್ತಿ ಪಡೆದ ವಿರಳ ಸಾಧಕರಾದರೆ,

ಗಣಪತಿ ವಡ್ನಗದ್ದೆಯವರಿಗೆ ಕಾಡೇ ಅವರ ಆಸ್ತಿ! ಬೆಟ್ಟ-ಗುಡ್ಡ,ಕಣಿವೆಗಳಲ್ಲಿ ಕಾಡು ಬೀಜಗಳನ್ನು ಸಂಗ್ರಹಿಸಿ ಅವುಗಳನ್ನು ಅವುಗಳ ಅನುಕೂಲಕರ ವಾತಾವರಣದಲ್ಲಿ ಬಿತ್ತುವ ಇವರಿಗೆ ಕಾಡು ನೆಡುವುದೇ ಹವ್ಯಾಸ.
ಸಮಾನ ಆಸಕ್ತರಾದ ಇಬ್ಬರೂ ಸೇರಿ ಕಾರ್ಯಕ್ರಮ ಮಾಡುವುದು, ಕಾರ್ಯಕ್ರಮಗಳಲ್ಲಿ ಕಾಡಿನ ಮಹತ್ವ ಸಾರುವುದು ಸೇರಿದಂತೆ ವರ್ಷವಿಡೀ ಪರಿಸರದ ಕೆಲಸ ಮಾಡುವುದೇ ಇವರ ಪ್ರವೃತ್ತಿ.

ಎಂ.ಬಿ.ನಾಯ್ಕ ಮಲೆನಾಡು ಪಶ್ಚಿಮಘಟ್ಟದ ಸಸ್ಯಪ್ರಭೇದಗಳನ್ನು ರಾಜ್ಯ, ರಾಷ್ಟ್ರದಾದ್ಯಂತ
ಉದ್ಯಾನವನಗಳಲ್ಲಿ ನೆಡಿಸುವ ಮೂಲಕ ಪಶಿಮಘಟ್ಟದ ಸಸ್ಯ ಪ್ರಭೇದಗಳನ್ನು ಬಯಲುನಾಡು, ಸೀಮೆಗಳಿಗೂ ಪರಿಚಯಿಸಿದ್ದಾರೆ. ಕಡಿಮೆ ಮಳೆ, ಒಣ ಹವೆಯಲ್ಲಿ ಮಳೆನಾಡಿನ ಗಿಡಗಳನ್ನು ಬೆಳೆಸುವ ವಿಧಾನವನ್ನು ಪರಿಚಯಿಸುತ್ತಿರುವ ಎಂ.ಬಿ.ನಾಯ್ಕ ನೂರಾರು ಅಳಿವಿನಂಚಿನ ಸಸ್ಯ ಪ್ರಭೇದಗಳನ್ನು ಉಳಿಸಿದ್ದಾರೆ.

ಇಂಥ ಕೆಲಸಗಳಿಗೆ ನೆರವಾಗುವ ಗಣಪತಿ ವಡ್ನಗದ್ದೆ ತಮ್ಮ ಪರಿಸರ, ಮಲೆನಾಡಿನ ಬೆಟ್ಟ-ಗುಡ್ಡಗಳಲ್ಲಿ ಈ ಭಾಗದ ಕಾಡು ಬೀಜಗಳನ್ನು ಬಿತ್ತಿ ನೈಸರ್ಗಿಕ ಕಾಡಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ.ಸಿದ್ಧಾಪುರ ತಾಲೂಕು, ಉತ್ತರ ಕನ್ನಡ ಜಿಲ್ಲೆಯಿಂದ ಪ್ರಾರಂಭಿಸಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ವರೆಗೆ ಪ್ರಕೃತಿ, ಪರಿಸರಕ್ಕಾಗಿ ಪ್ರವಾಸ ಮಾಡುವ ಆಸಕ್ತಿಯ ಈ ಇಬ್ಬರೂ ಕೃಷಿಕರು ಎನ್ನುವುದು ವಿಶೇಶ.

ಅರಣ್ಯ ಇಲಾಖೆ, ಅರಣ್ಯ ಕಾಲೇಜುಗಳಿಗೆ ಸಂನ್ಮೂಲ ವ್ಯಕ್ತಿಗಳಾಗಿರುವ ಇವರು ಜೂನ್ 5 ರಂದು ಮಾತ್ರ ವಿಶ್ವ ಪರಿಸರ ದಿನ ಆಚರಿಸದೆ ಪ್ರತಿದಿನವನ್ನು ಪರಿಸರ ದಿನವನ್ನಾಗಿಸಿಕೊಂಡಿದ್ದಾರೆ. ಈ ಇಬ್ಬರ ಜ್ಞಾನ, ಆಸಕ್ತಿ, ಅಭಿರುಚಿ ಹೊಸ ಪೀಳಿಗೆಗೆ ಪರಿಚಯವಾಗಬೇಕಾಗಿದೆ.

(related-ಈ ಮರ ಸುತ್ತಿ ಬಂಜೆತನದಿಂದ ಮುಕ್ತರಾಗಿ)

(news today )ಶಿರಸಿಯಲ್ಲಿ ಸ್ತ್ರೀ ಪೀಡಕನ ಬಂಧನ,ಅತ್ಯಾಚಾರಿ ಪರಾರಿ
ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಳ್ಳಾರಿ ಮೂಲದ ಸ್ತ್ರೀ ಪೀಡಕನೊಬ್ಬನನ್ನು ಬಂಧಿಸಿ,ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.ಈತ ತನ್ನ ಪರಿಚಯದ ಶಿಕ್ಷಕಿಯೊಬ್ಬರಿಗೆ ಹಣಕ್ಕಾಗಿ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ. ಬಳ್ಳಾರಿ ಬಳಿ ಶಾಲಾ ಶಿಕ್ಷಕಿಯಾಗಿದ್ದ ಮಹಿಳೆಯೊಬ್ಬರ ಜೊತೆಗೆ ಸಲುಗೆಯಂದಿದ್ದುನಂತರ ತನ್ನ ಬಳಿ ಇದ್ದ ಚಿತ್ರಗಳನ್ನು ಬಳಸಿಕೊಂಡು ಹಣಕ್ಕಾಗಿ ಪೀಡಿಸುತಿದ್ದ ಎನ್ನಲಾಗಿದೆ. ಈತ ಶಿವಕುಮಾರ ಮುಳಸಾವಳಗಿ ಎನ್ನುವ ವ್ಯಕ್ತಿಯಾಗಿದ್ದು ಶಿರಸಿಗ್ರಾಮೀಣಭಾಗ ಬನವಾಸಿಹೋಬಳಿಯ ಶಿಕ್ಷಕಿಗೆ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ.
ಅತ್ಯಾಚಾರಿ ಪರಾರಿ-
ಶಿರಸಿ ನಗರಸಭೆಯ ಸದಸ್ಯ ಯಶವಂತ್ ಮರಾಠೆ ಮೇಲೆ ಅಪ್ರಾಪ್ತಬಾಲಕಿಯ ಅತ್ಯಾಚಾರದ ಕೇಳಿಬಂದಿದ್ದು ಶಿರಸಿ ಗ್ರಾಮೀಣಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ಗ್ರಾಮೀಣ ಭಾಗದ 16 ವರ್ಷದ ಬಾಲಕಿಗೆ ಅತ್ಯಾಚಾರವೆಸಗುವ ಉದ್ದೇಶದಿಂದ ನಂಬಿಸಿ,ಅಧಿಕಾರ ಬಳಸಿ ಬಚಾವಾಗಲು ಪ್ರಯತ್ನಿಸಿ ನಂತರ ನಾಪತ್ತೆಯಾಗಿದ್ದಾನೆ. ಅಪ್ರಾಪ್ತಬಾಲಕಿಯನ್ನು ನಂಬಿಸಿ ನಿರಂತರ ಅತ್ಯಾಚಾರ ಎಸಗಿದ ಆರೋಪಕ್ಕೆ ಯಶವಂತ್ ಮರಾಠೆ ಮೇಲೆ ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *