ಈ ವರ್ಷ ಎಲ್ಲೂ ಕಾಣದ ನೇರಳೆ ಹಣ್ಣು

ಕಳೆದ ವರ್ಷ ಸಂಗ್ರಹಿಸಬೇಕೆಂದುಕೊಂಡಿದ್ದ ನೇರಳೆ ಹಣ್ಣು ಸಂಗ್ರಹಿಸಲಾಗದೆ ಮಳೆಗಾಲ ಬಂದೇ ಹೋಗಿತ್ತು. ಈ ವರ್ಷ ಹಾಗಾಗಬಾರದೆಂದು ಕಾಡು-ಮೇಡುಗಳನ್ನೆಲ್ಲಾ ಸುತ್ತಿ ನೇರಳೆಹಣ್ಣುಗಳಿಗಾಗಿ ಹುಡುಕಿದ್ದೇ ಹುಡುಕಿದ್ದು. ಆದರೆ ಈ ವರ್ಷ ಕಣ್ಣಿಗೆ ಬೀಳುವ, ಕೈ ಗೆ ಎಟುಕುವಷ್ಟು ನೇರಳೆ ಹಣ್ಣು ಬಿಡಲೇ ಇಲ್ಲ ಎನ್ನುವ ವಾಸ್ತವ ಅರಿವಾಗುವ ಸಮಯಕ್ಕೆ ಮತ್ತೊಂದು ಮಳೆಗಾಲ ಹೊಸ್ತಿಲಿಗೆ ಬಂದು ನಿಂತಿದೆ. ಮಲೆನಾಡಿನ ಗುಡ್ಡ-ಬೆಟ್ಟಗಳಲ್ಲಿ ಯತೇಚ್ಛವಾಗಿ ದೊರೆಯುವ ನೇರಳೆಹಣ್ಣುಗಳಲ್ಲಿ 2 ಡಜನ್ ಗಳಿಗೂ ಹೆಚ್ಚು ವಿಭಿನ್ನ ಪ್ರಭೇದಗಳಿವೆ ಎನ್ನುವ ಸಸ್ಯತಜ್ಞ ಎಂ.ಬಿ.ನಾಯ್ಕ ಕಡಕೇರಿ ಈ ವರ್ಷ ನೇರಳೆ ಫಸಲು ವಿರಳ ಮರಗಳಲ್ಲಿ ಫಸಲಿನ ಸಮೇಕ್ಷೆ ನಡೆಸಿದ ನಮಗೆ ಮರಗಳು ವರ್ಷಬಿಟ್ಟು ವರ್ಷ ಸಮೃದ್ಧ ಫಸಲು ನೀಡಲು ಆ ಮರದ ಹಾರ್ಮೋನು ಉತ್ಪಾದನೆ ಕಾರಣ ಎನ್ನುವ ಶೋಧನೆಯ ಸತ್ಯ ತಿಳಿಸಿದರು. ನೂರರಲ್ಲಿ ಒಂದು ಮರದಂತೆ ಎಲ್ಲೆಂದರಲ್ಲಿ ಮಲೆನಾಡಿನಾದ್ಯಂತ ಕಂಡು ಬರುವ ನೇರಳೆ ಹಣ್ಣು, ಅದರ ತೊಗಟೆ, ಕುಡಿ, ಎಲೆಗಳೆಲ್ಲಾ ಮಧುಮೇಹಕ್ಕೆ ದಿವ್ಯೌಷಧಿಗಳಂತೆ ನಮಗೆ ಈ ನೇರಳೆ ಹಿತ್ತಲಿನ ಗಿಡದಂತಾಗಿ ಅದರ ಮದ್ದಿನ ಮಹತ್ವ ತಿಳಿದಿಲ್ಲ.ವರ್ಷದಲ್ಲಿ ಸಾವಿರಾರು ಟನ್ ಬಿದ್ದು ಹಾಳಾಗುವ ಈ ನೇರಳೆಗೆ ಮಹಾನಗರಗಳಲ್ಲಿ ಪ್ರತಿ ಕಿ.ಲೋ.ಗೆ 500 ರೂ. ಗಿಂತ ಹೆಚ್ಚಿನ ಬೆಲೆ. ಈ ವರ್ಷ ಯಾರಾದರೂ ಒಂದೆರಡು ಕೆ.ಜಿ. ನೇರಳೆ ಹಣ್ಣು ಕೊಯ್ದುಕೊಡಿ ಎಂದವನಿಗೆ ನೇರಳೆಹಣ್ಣು ಸಿಗದೆ ಸಿಕ್ಕಿದ್ದು ನೇರಳೆ ಹಣ್ಣಿನ ಬಗ್ಗೆ ಮಾಹಿತಿ. ಈ ಉಪಯುಕ್ತ ಮಾಹಿತಿ ನಿಮಗೂ ತಿಳಿಯಲಿ ಎನ್ನುವ ಆಸೆಯಿಂದ ನನ್ನ ಮುನ್ನುಡಿಯೊಂದಿಗೆ ಈ ಬರಹ-

ನೀಲಿ ಸುಂದರಿ ನೇರಳೆ ಹಣ್ಣು

ಒಮ್ಮೆ ತಿಂದರೆ ಸಾಕು, ಮತ್ತೊಮ್ಮೆ ಸವಿಯಬೇಕು ಎಂದೆನಿಸುವ ಈ ನೀಲಿ ಸುಂದರಿಯನ್ನುಇಷ್ಟಪಡದವರಾರು ಹೇಳಿ? ವರುಷಕ್ಕೊಮ್ಮೆ ಕಾಣಸಿಗುವ ಈ ಹಣ್ಣು ಎಲ್ಲರಿಗೂ ಪ್ರಿಯ. ರೋಗ ಶಮನ ಮಾಡುವಲ್ಲಿ ಪ್ರಮುಖ ಔಷಧಿಯಾಗಿ ಕಾರ್ಯನಿರ್ವಹಿಸುವ ಈ ನೇರಳೆ ಹಣ್ಣು ಇತ್ತೀಚಿನ ದಿನಗಳಲ್ಲಿ ಕಾಣಸಿಗುವುದೇ ಅಪರೂಪ.

ಕಬ್ಬಿಣ, ಪೊಟಾಶಿಯಂ, ಮೇಗ್ನೇಶಿಯಂ, ಪ್ರೋಸ್ಫರಸ್, ವಿಟಮಿನ್ ಸಿ ಅಂಶಗಳನ್ನು ಹೊಂದಿದ ನೇರಳೆ ಹಣ್ಣು ಬರೀ ಆರೋಗ್ಯಕಾರಕ ಮಾತ್ರವಲ್ಲ, ಸೌಂದರ್ಯವರ್ಧಕವೂ ಹೌದು. ತಿನ್ನಲು ರುಚಿರುಚಿಯಾದ ಈ ಹಣ್ಣು ಹಲವು ರೋಗಗಳಿಗೆ ರಾಮಬಾಣ ಎಂದರೆ ನಂಬಲು ಸಾಧ್ಯವೆ?

ರಕ್ತಹೀನತೆ, ಕಾಮಾಲೆ ರೋಗ, ಹೃದಯ ಸಂಬಂಧ ಕಾಯಿಲೆ, ಹೊಟ್ಟೆ ಹುಣ್ಣು, ಬೇಧಿ, ಆಯಸಿಡಿಟಿಯಂಥ ಹತ್ತು ಹಲವು ಕಾಯಿಲೆಗಳನ್ನು ಹೋಗಲಾಡಿಸುವ ಶಕ್ತಿ ಈ ನೀಲಿ ಸುಂದರಿಗಿದೆ. ಅಷ್ಟೇ ಅಲ್ಲದೇ ಹದೆಹರೆಯದ ಯುವಕ ಯುವತಿಯರ ಪಾಲಿಗೆ ಸಿಂಹಸ್ವಪ್ನವಾಗಿ ಕಾಡುವ ಮೊಡವೆಯನ್ನು ಹೋಗಲಾಡಿಸಿ ತ್ವಚೆಯ ಅಂದ ಹೆಚ್ಚಿಸುವ ಶಕ್ತಿ ಇದಕ್ಕಿದೆ.

ಆಯಂಟಿ ಬ್ಯಾಕ್ಟೀರಿಯಾ ಅಂಶ ಹೊಂದಿದ ಈ ನೇರಳೆ ಹಣ್ಣಿನ ಎಲೆಗಳನ್ನು ಸೇವಿಸುವುದರಿಂದ ಬಾಯಿಯ ದುರ್ವಾಸನೆ ತಡೆಗಟ್ಟಬಹುದು. ಜಾಂಬೋಲಿನ್ ಎಂಬ ಗ್ಲೂಕೋಸ್ ಅಂಶ ಇದರಲ್ಲಿರುವ ಕಾರಣ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಡಯಾಬಿಟಿಸ್ ಇರುವವರು ಕೂಡಾ ಯಾವುದೇ ಆತಂಕವಿಲ್ಲದೆ ಈ ಹಣ್ಣನ್ನು ತಿನ್ನಬಹುದು. ನೇರಳೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಜೀರ್ಣ ಕ್ರಿಯೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ರಕ್ತದಲ್ಲಿನ ಹಿಮೋಗ್ಲೋಬಿನ್ ಅಂಶವನ್ನು ಹೆಚ್ಚಿಸುವ ಇದು ರಕ್ತ ಶುದ್ಧಿ ಮಾಡುವಲ್ಲಿ ಸಹಕಾರಿಯಾಗಿದೆ. ಇನ್ನು ಆಯಿಲ್ ಸ್ಕಿನ್ ನಿಂದ ಕಂಗಲಾಗಿರುವವರಿಗೆ ಇದು ಹೇಳಿ ಮಾಡಿಸಿದ ಮದ್ದು.

ಅಷ್ಟೇ ಅಲ್ಲದೇ ಇದರ ತಿರುಳನ್ನು ಜೆಲ್ಲಿ, ಜ್ಯಾಮ್, ವೈನ್ ಗಳ ತಯಾರಿಕೆ ಬಳಸಲಾಗುತ್ತದೆ. ಅಗಾಧ ಔಷಧಿಯ ಗುಣ ಹೊಂದಿದ ಈ ಹಣ್ಣು ತಿನ್ನಲು ತುಂಬಾ ರುಚಿ. ನೇರಳೆ ಹಣ್ಣು ಸೇವಿಸಿ ಬಾಯಿ ಚಪ್ಪರಿಸಿಕೊಳ್ಳುವುದು ಮಾತ್ರವಲ್ಲ. ಸೌಂದರ್ಯದ ಜೊತೆಗೆ ಆರೋಗ್ಯವನ್ನು ವೃದ್ಧಿಸಿಕೊಳ್ಳಿ. -ಅನಿತಾ ಬನಾರಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *