ಹಳ್ಳಿಗಾಡಿನ ನಿವೃತ್ತ ಶಿಕ್ಷಕಿಗೆ ಪ್ರಶಂಸೆಯ ಸುರಿಮಳೆ ನಿಸ್ವಾರ್ಥ ಸೇವೆಯಿಂದ ವಿಶ್ರಾಂತ ಜೀವನದತ್ತ ಹೆಜ್ಜೆಯಿಟ್ಟ ವನಿತಾ ಮೇಡಮ್

ಎಲ್ಲರಿಗೂ ಸಿಗದ ಅಪರೂಪದ ಹುದ್ದೆ ಶಿಕ್ಷಕ ವೃತ್ತಿ.. ಸಿಕ್ಕರೂ ಅದನ್ನ ಕೇವಲ ವೃತ್ತಿಯಾಗಿ ಸ್ವೀಕರಿಸಿದರೆ ಸಾಲದು ಬೋಧನೆಯಲ್ಲಿ ಸಂಪೂರ್ಣ ನಿವೇದನೆ, ನಿಸ್ವಾರ್ಥ ಸೇವಾ ಮನೋಭಾವ, ನಿರಂತರ ಅಧ್ಯಯನಶೀಲ ಹವ್ಯಾಸಗಳು ಈ ವೃತ್ತಿಯ ಅಗತ್ಯತೆಗಳು. ಅಂತೆಯೇ ಇಲ್ಲೊಬ್ಬ ಶಿಕ್ಷಕಿ ಈ ಎಲ್ಲಾ ಅಗತ್ಯ ಗುಣಗಳ ಜೊತೆಯಲ್ಲಿ ಶಿಕ್ಷಕ ವೃತ್ತಿಯನ್ನೇ ತನ್ನ ಜೀವನದ ಅನನ್ಯ ಭಾಗವಾಗಿ ಸ್ವೀಕರಿಸಿ ಸಹೋದ್ಯೋಗಿಗಳನ್ನು ತನ್ನ ಕುಟುಂಬದ ಸದಸ್ಯರಂತೆ ಕಾಣುತ್ತಾ, ಶಾಲಾ ಮಕ್ಕಳನ್ನು ತನ್ನ ಸ್ವಂತ ಮಕ್ಕಳೋಪಾದಿಯಲ್ಲಿ ಉಪಚರಿಸುತ್ತಾ, ಊರ ಜನರೊಂದಿಗೆ ಉತ್ತಮ ಬಾಧವ್ಯ ಹೊಂದುವ ಮೂಲಕ ಅಜಾತ ಶತ್ರುವಿನ ರೀತಿಯಲ್ಲಿ ತೀರಾ ಗ್ರಾಮೀಣ ಭಾಗದ ಶಾಲೆಯಲ್ಲಿ 21 ವರ್ಷಗಳ ಕಾಲ ಸಾರ್ಥಕ ಸೇವೆಸಲ್ಲಿಸಿದ ಶಿಕ್ಷಕಿ ಸಿದ್ದಾಪುರ ತಾಲ್ಲೂಕಿನ ಹಳ್ಳಿಬೈಲ್ ಪ್ರೌಢಶಾಲೆಯ ವನಿತಾ ಟೀಚರ್.
ಅಂದಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೊಸಬೆಟ್ಟು ಪ್ರೌಢಶಾಲೆಯಲ್ಲಿ 01-10-1986ರಲ್ಲಿ ಸಹಶಿಕ್ಷಕಿಯಾಗಿ ನೇಮಕಗೊಂಡು ತಮ್ಮ ಎಂಟು ವರ್ಷಗಳ ಸೇವೆಯ ನಂತರ ವರ್ಗಾವಣೆಗೊಂಡು ಆಗಮಿಸಿದ್ದು ಸಿದ್ದಾಪುರ ತಾಲ್ಲೂಕಿನ ಹಳ್ಳಿಬೈಲ ಪ್ರೌಢಶಾಲೆಗೆ. ಅಂದಿನ ದುರ್ಗಮ ದಾರಿ, ಸೌಲಭ್ಯಗಳಿಲ್ಲದ ಊರಿನ ಈ ಶಾಲೆಯಲ್ಲಿ ಒಂದೆರಡು ವರ್ಷ ಸೇವೆಸಲ್ಲಿಸಿ ಹೋಗುವರೆಂದು ಊರವರೆಲ್ಲ ಅಂದುಕೊಂಡಿದ್ದರು ಆದರೆ ತನ್ನ ವೃತ್ತಿಯನ್ನೇ ದೈವೀ ಕಾಯಕವೆಂದು ನಂಬಿದ ವನಿತಾ ನಾಯ್ಕ ಮೇಡಮ್ ಶಾಲೆಯನ್ನು ತನ್ನ ಸ್ವಂತ ಮನೆಗಿಂತಲೂ ಹೆಚ್ಚಾಗಿ ಪ್ರೀತಿಸುತ್ತಾ, ಬೋಧನೆ ಮಾಡುತ್ತಾ, ಶಾಲೆಯ ಅಭಿವೃದ್ದಿಗೆ ಪಣತೊಟ್ಟು ಒಂದೂ ಕಪ್ಪು ಚುಕ್ಕೆ ಇಲ್ಲದಂತೆ 21 ವರ್ಷಗಳ ಕಾಲ ಈ ಶಾಲೆಯಲ್ಲಿ ನಿಸ್ವಾರ್ಥ ಸೇವೆಸಲ್ಲಿಸಿ ಕಳೆದ ಮೇ 30ರಂದು ವಯೋನಿವೃತ್ತರಾದರು.
ಸಹಶಿಕ್ಷಕಿಯಾಗಿ ವೃತ್ತಿ ಆರಂಭಿಸಿದ ದಿನದಿಂದಲೂ ಜಟಿಲ ಇಂಗ್ಲೀಷ್ ವಿಷಯ ಬೊಧನೆಯನ್ನು ಸುಲಭ ಮತ್ತು ಮನಮುಟ್ಟುವಂತೆ ಪಾಠಮಡುತ್ತಾ ಶೇ 100 ನಿರಂತರ ಫಲಿತಾಂóಶ ನೀಡಿರುವುದು ಇವರ ಬೋಭನಾ ಗುಣಮಟ್ಟಕ್ಕೆ ಸಾಕ್ಷಿಯಾದರೆ, ಶಾಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ನಿರಂತರ ಶೇ90ಕ್ಕಿಂತ ಹೆಚ್ಚು ಮತ್ತು ಮೂರು ಬಾರಿ ನೂರಕ್ಕೆ ನೂರು ಫಲಿತಾಂಶ ಸಾಧಿಸಿರುವುದು ಇವರ ಉತ್ತಮ ಆಡಳಿತ ನಿರ್ವಹಣೆಗೆ ಸಾಕ್ಷಿಯಗಿದೆ. ಹಿಡಿದ ಕೈಗನ್ನಡಿಯಾಗಿದೆ. ದಿನಾಂಕ 31-08-2013ರಲ್ಲಿ ಮುಖ್ಯಶಿಕ್ಷಕಿಯಾಗಿ ಪದೋನ್ನತಿ ಪಡೆದಾಗ ನಗರ, ಪಟ್ಟಣಗಳ ಹತ್ತಾರು ಶಾಲೆಗಳ ಆಯ್ಕೆಗೆ ಅವಕಾಶವಿದ್ದರೂ ಮತ್ತೆ ಪುನ ಇದೇ ಶಾಲೆಯನ್ನು ಆಯ್ಕೆಮಾಡಿಕೊಂಡಿರುವುದು ಅವರು ಈ ಶಾಲೆ, ಈ ಊರು, ಇಲ್ಲಿನ ಮಕ್ಕಳ ಮೇಲಿಟ್ಟ ಪ್ರೀತಿ, ಅಭಿಮಾನಕ್ಕೆ ಸಾಕ್ಷಿ.
ಉತ್ತಮ ಶಿಕ್ಷಕಿಯಾಗಿ ಉತ್ತಮ ಬೋಧನೆ ಮತ್ತು ಆಡಳಿತ ನಡೆಸಿದ ಇವರು ಎಂದಿಗೂ ಮಕ್ಕಳೊಂದಿಗಾಗಲಿ, ಸಹೋದ್ಯೋಗಿಗಳ ಜೊತೆಯಲ್ಲಾಗಲೀ ಎಂದೂ ಮುಖ್ಯಶಿಕ್ಷಕಿಯಂತೆ ವರ್ತಿಸಿಯೇ ಇಲ್ಲ. ಎಲ್ಲರೊಡನೆ ಬೆರೆಯುತ್ತಾ ನೋವು ನಲಿವುಗಳಿಗೆ ಸ್ಪಂದಿಸುತ್ತಾ ಸದಾ ಹಸನ್ಮುಖಿಯಾಗಿ ಕಾಲಕಳೆದರು. ಶಾಲಾ ನಾಟಕ ತಂಡ ಮೂರು ಬಾರಿ ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಒಮ್ಮೆ ಬಹುಮಾನ ಪಡೆದಿರುವುದು, ವಿಜ್ಞಾನ ನಾಟಕಗಳು ನಾಲ್ಕು ಬಾರಿ ಜಿಲ್ಲಾ ಹಂತಕ್ಕೆ ತಲುಪಿರುವುದು ಪಠ್ಯೇತರ ವಿಷಯಗಳಲ್ಲಿ ಇವರು ಹೊಂದಿದ ಆಸಕ್ತಿಯನ್ನು ತೋರಿಸುತ್ತದೆ ಅಲ್ಲದೇ ಕುಗ್ರಾಮದ ಶಾಲೆಯನ್ನು ರಾಜ್ಯ ಮಟ್ಟದಲ್ಲಿ ಬೆಳಗಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಟಾಲ್ಪ ಯೋಜನೆಯ ಸಮರ್ಪಕ ಅನುಷ್ಠಾನ, ಸ್ಮಾರ್ಟಕ್ಲಾಸ್ ಸ್ಥಾಪನೆ, ಯು.ಪಿ.ಎಸ್ ಅಳವಡಿಕೆ, 50 ಇಂಚಿನ ಬೃಹತ್ ಟಿ.ವಿ ಹೊಂದಿದ ದೃಕ್-ಶೃವಣ ಕೊಠಡಿ, ಉತ್ತಮ ಮೈದಾನ ನಿರ್ಮಾಣ , ನೂತನ ಆರ್.ಎನ್.ಎಸ್ ಕಟ್ಟ್ಡಡ ನಿರ್ಮಾಣ ಇವರ ಉತ್ತಮ ಆಡಳಿತದ ವೈಖರಿಗೆ ಸಾಕ್ಷಿಯಾಗಿದೆ.ಇವರ ಪರಿಶ್ರಮ ಸಾಧನೆಯನ್ನು ಗುರುತಿಸಿ ಜಿಲ್ಲಾ ಹಾಗೂ ರಾಜ್ಯಪ್ರಶಸ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಒತ್ತಾಯಿಸಿದರೂ ಅದರ ಗೋಜಿಗೆ ಹೋಗದೇ ತನ್ನ ಕಾಯಕದಲ್ಲೇ ತೃಪ್ತಿ ಕಂಡರು. ಎಂದಿಗೂ ಯಾವುದೇ ಪ್ರಶಸ್ತಿ ಹಾಗೂ ಸನ್ಮಾನ ನಿರೀಕ್ಷಿಸದ ಇವರು ಮಕ್ಕಳು ಮತ್ತು ಶಿಕ್ಷಕರಿಂದ ಗಳಿಸಿದ ಪ್ರೀತಿ ಅಭಿಮಾನದ ಎದುರು ಎಲ್ಲಾ ಪ್ರಶಸ್ತಿಗಳೂ ನಗಣ್ಯವೆ ಸರಿ.
ರಾಜ್ಯಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ಶ್ರೀ ಶಿವಾನಂದ ಬಿ. ನಾಯ್ಕ ಇವರ ಸಹಧರ್ಮಿಣಿಯಾದ ವನಿತಾ ನಾಯ್ಕ ಟೀಚರ್ ಸಾರ್ಥಕ ಗೃಹಿಣಿಯಾಗಿ ಸಂಸಾರದ ನೊಗವನ್ನು ಮುನ್ನಡೆಸಿದ್ದು. ಸಾತ್ವಿಕ ಸ್ವಭಾವದ ಪುತ್ರ ಅಭಿಷೇಕ್ ಧಾರವಾಡ ವಿಶ್ವವಿದ್ಯಾಲಯದಲ್ಲಿ ಬಯೋಕೆಮೆಸ್ಟ್ರಿ ಸ್ನಾತಕೋತ್ತರ ಪದವಿ ಅಧ್ಯಯನ ನಡೆಸುತ್ತಿದ್ದಾನೆ. ಅರವತ್ತರ ಸಮಯದಲ್ಲೂ ಈ ಊರಲ್ಲೇ ಉಳಿದುಕೊಂಡು ಶಾಲೆಯನ್ನು ಅಭಿವೃದ್ದಿ ಪಥದಲ್ಲಿ ಮುನ್ನಡೆಸಿದ ನಿಮ್ಮ ಛಾತಿ ಇತರ ವನಿತೆಯರಿಗೆ ಮಾದರಿ ಎಂಬುದರಲ್ಲಿ ಎರಡುಮಾತಿಲ್ಲ. ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಟಾನ ಮತ್ತು ಶಿಕ್ಷಣ ಇಲಾಖೆಯ ಎಲ್ಲಾ ಕಾರ್ಯಗಳನ್ನು ಸಕಾಲದಲ್ಲಿ ನಿರ್ವಹಿಸಿದ ಇವರು ಇಲಾಖಾ ಅಧಿಕಾರಿಗಳ ಪ್ರಶಂಸೆಗೂ ಪಾತ್ರರಾಗಿದ್ದ ಇವರು ಸ್ಥಳಿಯವಾಗಿ ವನಿತಾ ಮೆಡಂ ಎಂದೇ ಪ್ರಸಿದ್ದರಾಗಿದ್ದರು.

ಸರಳ, ಸಜ್ಜನಿಗೆಯ, ಕ್ರಿಯಾಶೀಲ, ಸೌಜನ್ಯಮೂರ್ತಿ ವನಿತಾ ಮೇಡಮ್ ನಿವೃತ್ತ ಜೀವನ ಆರೋಗ್ಯದಾಯಕವೂ, ಸದಾ ಹರ್ಷದಾಯಕವೂ ಆಗಿರಲಿ ಎಂಬುದು ನಮ್ಮೆಲ್ಲರ ಆಶಯ. ಇಂತಿ ನಿಮ್ಮ ಶಿಷ್ಯವರ್ಗ.
ಸದಾಕ್ರಿಯಾಶೀಲತೆ, ಸಮಯ ಪ್ರಜ್ಞೆ, ಇಲಾಖೆಯ ಎಲ್ಲಾ ಕಾರ್ಯಗಳನ್ನು ಉಳಿದ ಶಾಲೆಗಳಿಗಿಂತ ಮೊದಲು ಅನುಷ್ಠಾನಕ್ಕೆ ತರುವಲ್ಲಿ ಹಾಗೂ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಉನ್ನತೀಕರಣದಲ್ಲಿ ಇವರ ಕಾರ್ಯ ಶ್ಲಾಘನೀಯ.
ಶ್ರೀ.ದಿವಾಕರ ಶೆಟ್ಟಿ, ಡಿ.ಡಿ.ಪಿ.ಐ ಶಿರಸಿ ಶೈಕ್ಷಣಿಕ ಜಿಲ್ಲೆ

ತಮ್ಮ ಸಂಪೂರ್ಣ ಸೇವೆಯನ್ನು ಗ್ರಾಮೀಣ ಪ್ರದೇಶದಲ್ಲೇ ಕಳೆದುದು ಇವರ ವೃತ್ತಿ ಜೀವನದ ವಿಶೇಷ. ನಿಷ್ಪಕ್ಷಪಾತ, ಸರಳ, ಸೌಜನ್ಯ ಗುರುಮಾತೆ ವನಿತಾ ಮೇಡಮ್.
ಶ್ರೀ ಗೋಪಾಲ ನಾಯ್ಕ, ಜಿಲ್ಲಾ ಅಧ್ಯಕ್ಷರು ಸರ್ಕಾರಿ ನೌಕರರ ಕಲಾ ಮತ್ತು ಸಾಂಸ್ಕೃ ತಿಕ ವೇದಿಕೆ ಉತ್ತರ ಕನ್ನಡ.

ಇಂಗ್ಲೀಷ್ ಮತ್ತು ನೀತಿ ಶಿಕ್ಷಣದ ಶಿಕ್ಷಕಿಯರಾಗಿ ವನಿತಾ ಮೇಡಂ ನೀಡಿದ ಶಿಕ್ಷಣ ಮತ್ತು ಮಾರ್ಗದರ್ಶನ ನನಗೆ ಇಂದಿಗೂ ಮತ್ತು ಎಂದೆಂದಿಗೂ ಬಹಳ ಪ್ರಸ್ತುತ, ಅಮೂಲ್ಯ. ಮತ್ತು ನನ್ನ ಜೀವನದ ಭದ್ರ ಬುನಾದಿ. ಅವರು ತೋರಿದ ಪ್ರೀತಿ, ಅಕ್ಕರೆ, ನನ್ನ ಬಾಲ್ಯದ ಸವಿ ನೆನಪು. ಅವರು ಮಕ್ಕಳ ಮೇಲೆ ತೋರಿಸುತ್ತದ್ದ ಕಾಳಜಿ. ನನಗೆ ಶಿಕ್ಷಕ ವೃಂದದವರ ಮೇಲೆಯೇ ಗೌರವ ವೃದ್ದಿಸುವಂತೆ ಮಾಡಿತು. – ಡಾ.ಗಣಪತಿ ಗಣೇಶ ಹೆಗಡೆ, ಹುಲಿಮರಡು, ಆಪಲ್ ಕಂಪನಿ ಉದ್ಯೋಗಿ, ಜರ್ಮನಿ, ಹಳೇ ವಿದ್ಯಾರ್ಥಿ.

ಉತ್ತಮ ಶಿಕ್ಷಕರೂ ಸಮರ್ಥ ಆಡಳಿತಗಾರರೂ ಆದ ವನಿತಾ ಮೇಡಮ್ ಸೇವೆಯನ್ನು ನಾವು ಎಂದೂ ಮರೆಯುವಂತಿಲ್ಲ. ಅವರ ನಿಸ್ವಾರ್ಥ ಸೇವೆ, ವೃತ್ತಿ ನೌಪುಣ್ಯತೆ ಇತರರಿಗೆ ಮಾದರಿ.
ಶ್ರೀ. ಚಂದ್ರು ಹಾಲಾ ನಾಯ್ಕ, ಉಪಾಧ್ಯಕ್ಷರು, ಎಸ್.ಡಿ.ಎಮ್.ಸಿ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *