ಉತ್ತರ ಕನ್ನಡ +03-03 ಬರೋಬ್ಬರಿ 99 ಅವರಲ್ಲಿ 85 ಗುಣಮುಖ

ಸಿದ್ಧಾಪುರ ತಾಲೂಕಿನ ಇಬ್ಬರು ಯುವತಿಯರು,ಮತ್ತೊಬ್ಬ ಕಾರವಾರದ ಮಹಿಳೆ ಸೇರಿ 3 ಜನ ಕರೋನಾ ಸೋಂಕಿತರು ಇಂದು ಗುಣಮುಖರಾಗಿ ಹೊರನಡೆಯುವ ಮೂಲಕ ಉತ್ತರಕನ್ನಡ ಜಿಲ್ಲೆಯ ಒಟ್ಟೂ 85 ಜನ ಕರೋನಾ ಸೋಂಕಿತರು ಗುಣಮುಖರಾಗಿ ಅವರವರ ಮನೆ ಸೇರಿದ್ದಾರೆ.


ಸಿದ್ಧಾಪುರ ತಾಲೂಕಿನ ಒಟ್ಟೂ5 ಜನ ಕರೋನಾ ಸೋಂಕಿತರಲ್ಲಿ 3 ಜನ ಗುಣಮುಖರಾಗಿ ಉಳಿದ ಇಬ್ಬರೂ ಅಪಾಯದಿಂದ ಪಾರಾಗಿರುವ ವರದಿ ಇದೆ.

ಇಂದು ಹಳಿಯಾಳ, ದಾಂಡೇಲಿಯ ಮೂರು ಜನರಲ್ಲಿ ಕರೋನಾ ದೃಢಪಡುವ ಮೂಲಕ ಜಿಲ್ಲೆಯ ಕರೋನಾ ಸೋಂಕಿತರ ಪ್ರಮಾಣಬರೋಬ್ಬರಿ99 ಆಗಿದೆ. ಈ 99 ರಲ್ಲಿ ಇಂದಿನವರೆಗೆ ಗುಣಮುಖರಾದವರ ಸಂಖ್ಯೆ 85 ಜಿಲ್ಲೆಯ 99 ಜನ ಕರೋನಾ ಸೋಂಕಿತರಲ್ಲಿ ಬಹುತೇಕರು ಹೊರದೇಶ, ಹೊರ ರಾಜ್ಯಗಳಿಂದ ಬಂದವರು ಮತ್ತು ಅವರ ನಿಕಟ ಸಂಪರ್ಕದಲ್ಲಿದ್ದವರು ಎನ್ನುವುದು ವಿಶೇಶ.

ಈ ಸಂಚೂರಿ ಸಮೀಪದ ಕರೋನಾ ಸೋಂಕಿತರಲ್ಲಿ ಶೇ.90 ಹೊರರಾಜ್ಯ-ಹೊರದೇಶಗಳಿಂದ ಬಂದವರಾಗಿರುವುದರಿಂದ ಈ ವರೆಗೂ ಉತ್ತರ ಕನ್ನಡ ಕರೋನಾ ಮಹಾಮಾರಿಯಿಂದ ಬಚಾವಾಗಿದೆ ಎನ್ನಲಡ್ಡಿಯಿಲ್ಲ.

(one more news)
….ಹಳ್ಳಿಗಾಡಿನ ನಿವೃತ್ತ ಶಿಕ್ಷಕಿಗೆ ಪ್ರಶಂಸೆಯ ಸುರಿಮಳೆ
ನಿಸ್ವಾರ್ಥ ಸೇವೆಯಿಂದ ವಿಶ್ರಾಂತ ಜೀವನದತ್ತ ಹೆಜ್ಜೆಯಿಟ್ಟ ವನಿತಾ ಮೇಡಮ್

ಎಲ್ಲರಿಗೂ ಸಿಗದ ಅಪರೂಪದ ಹುದ್ದೆ ಶಿಕ್ಷಕ ವೃತ್ತಿ.. ಸಿಕ್ಕರೂ ಅದನ್ನ ಕೇವಲ ವೃತ್ತಿಯಾಗಿ ಸ್ವೀಕರಿಸಿದರೆ ಸಾಲದು ಬೋಧನೆಯಲ್ಲಿ ಸಂಪೂರ್ಣ ನಿವೇದನೆ, ನಿಸ್ವಾರ್ಥ ಸೇವಾ ಮನೋಭಾವ, ನಿರಂತರ ಅಧ್ಯಯನಶೀಲ ಹವ್ಯಾಸಗಳು ಈ ವೃತ್ತಿಯ ಅಗತ್ಯತೆಗಳು. ಅಂತೆಯೇ ಇಲ್ಲೊಬ್ಬ ಶಿಕ್ಷಕಿ ಈ ಎಲ್ಲಾ ಅಗತ್ಯ ಗುಣಗಳ ಜೊತೆಯಲ್ಲಿ ಶಿಕ್ಷಕ ವೃತ್ತಿಯನ್ನೇ ತನ್ನ ಜೀವನದ ಅನನ್ಯ ಭಾಗವಾಗಿ ಸ್ವೀಕರಿಸಿ ಸಹೋದ್ಯೋಗಿಗಳನ್ನು ತನ್ನ ಕುಟುಂಬದ ಸದಸ್ಯರಂತೆ ಕಾಣುತ್ತಾ, ಶಾಲಾ ಮಕ್ಕಳನ್ನು ತನ್ನ ಸ್ವಂತ ಮಕ್ಕಳೋಪಾದಿಯಲ್ಲಿ ಉಪಚರಿಸುತ್ತಾ, ಊರ ಜನರೊಂದಿಗೆ ಉತ್ತಮ ಬಾಧವ್ಯ ಹೊಂದುವ ಮೂಲಕ ಅಜಾತ ಶತ್ರುವಿನ ರೀತಿಯಲ್ಲಿ ತೀರಾ ಗ್ರಾಮೀಣ ಭಾಗದ ಶಾಲೆಯಲ್ಲಿ 21 ವರ್ಷಗಳ ಕಾಲ ಸಾರ್ಥಕ ಸೇವೆಸಲ್ಲಿಸಿದ ಶಿಕ್ಷಕಿ ಸಿದ್ದಾಪುರ ತಾಲ್ಲೂಕಿನ ಹಳ್ಳಿಬೈಲ್ ಪ್ರೌಢಶಾಲೆಯ ವನಿತಾ ಟೀಚರ್. …….visit-samajamukhi.net

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *