ಎಲ್.ಎಂ.ನಾಯ್ಕ ಹಸ್ವಂತೆ ಸಾವು, ಮಳೆಗಾಲ,ಕರೋನಾ ನೋವು

ಕರಾವಳಿ, ಮಲೆನಾಡಿನಲ್ಲಿ ಪ್ರಾರಂಭವಾಗಿರುವ ಮಳೆ ಅನೇಕ ತೊಂದರೆಗಳಿಗೆ ಕಾರಣವಾಗಿದೆ. ಶಿರಸಿಯ ಯಲ್ಲಾಪುರ ರಸ್ತೆಯ ಆಶಾಪ್ರಭು ಆಸ್ಫತ್ರೆ ಎದುರು ಪ್ರತಿವರ್ಷದಂತೆ ಈ ವರ್ಷಕೂಡಾ ಮಳೆ ನೀರು ತುಂಬಿ ತೊಂದರೆಯಾಗಿದೆ.

ಶಿರಸಿ ಶಾಸಕರು ಮತ್ತು ಉತ್ತರ ಕನ್ನಡ ಜಿಲ್ಲಾ ಸಂಸದರು ಇದೇ ಮಾರ್ಗದಲ್ಲಿ ಪ್ರತಿದಿನ ಸಂಚರಿಸಿದರೂ ಈ ಸಮಸ್ಯೆಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಯಾಕೆಂದರೆ ಉತ್ತರ ಕನ್ನಡ ಜಿಲ್ಲೆಯ ಜನರು ಜಾತಿ-ಧರ್ಮದ ಕಾರಣಕ್ಕೆ ಮತದಾನ ನೀಡುತ್ತಾರೆಯೆ ವಿನ: ಅಭಿವೃದ್ಧಿಗಲ್ಲ ಎನ್ನುವುದನ್ನು ಈ ಎಂಎಲ್ಲೆ, ಎಂ.ಪಿ.ಗಳು ಅರಿತಿದ್ದಾರೆ ಎಂದು ಆ ಭಾಗದ ಜನರಿಗೆ, ಜನಪ್ರತಿನಿಧಿಗಳಿಗೆ ಸ್ಥಳಿಯರು ವಿರೋಧಿಸಿದ್ದಾರೆ.

ಸಾಯಿನಗರ-

ಸಿದ್ಧಾಪುರದ ಹೊಸ ಬಡಾವಣೆ ಸಾಯಿನಗರದ ರಸ್ತೆಗಳು ಕೆಸರು ತುಂಬಿದ ಹೊಂಡಗಳಾಗಿದ್ದು ಇದರಿಂದ ಸ್ಥಳಿಯರು ಇತರರಿಗಾಗುತ್ತಿರುವ ತೊಂದರೆ ಬಗ್ಗೆ ಸ್ಥಳಿಯ,ಜನಪ್ರತಿನಿಧಿಗಳು, ಶಾಸಕರು, ಸಂಸದರು ಕೇಳುತ್ತಿಲ್ಲ ಎಂದು ಇಲ್ಲಿಯ ನಿವಾಸಿಗಳು ದೂರಿ ಶಾಪಹಾಕುತಿದ್ದಾರೆ.

ಅಕಾಲಿಕ ಸಾವು-

ಸಿದ್ಧಾಪುರದ ಹಸ್ವಂತೆಯ ಉಪನ್ಯಾಸಕ ಎಲ್.ಎಂ. ನಾಯ್ಕ ಅಕಾಲಿಕ ನಿಧನಕ್ಕೆ ಸಾಗರ ಮತ್ತು ಸಿದ್ಧಾಪುರದ ಜನತೆ ಮರುಗಿದ್ದಾರೆ. ಎಲ್.ಎಂ.ಎನ್. ಮೊದಲು ಸಿದ್ಧಾಪುರದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿ ನಂತರ ಸಾಗರ ತಾಳಗುಪ್ಪಾದ ನಳಂದ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತಿದ್ದರು. ಸಿದ್ಧಾಪುರ ಎಂ.ಜಿ.ಸಿ ಕಾಲೇಜಿನಲ್ಲಿ ಕಲಿತು, ಅಲ್ಲಿಯೇ ಉಪನ್ಯಾಸಕರಾಗಿ ಅನೇಕರ ಸ್ನೇಹ-ಸಂಪರ್ಕ, ಸಂಬಂಧ ಹೊಂದಿದ್ದ ಅವರು ಸಾಗರದ ರಾಜಕಾರಣಿ ಭೀಮನೇರಿ ಶಿವಪ್ಪನವರ ಅಳಿಯನಾಗಿದ್ದರು.

ಹುಟ್ಟೂರು ಸಿದ್ಧಾಪುರ, ಮಾವನ ಊರು ಸಾಗರ, ಕೆಲಸದ ಸ್ಥಳ ತಾಳಗುಪ್ಪಗಳಲ್ಲಿ ಜನಪ್ರೀಯರಾಗಿದ್ದ ನಾಯ್ಕರ 51 ನೇ ವರ್ಷದ ಅಕಾಲಿಕ ಸಾವಿಗೆ ಅವರ ಶಿಷ್ಯವೃಂದ,ಸ್ನೇಹಿತ ವಲಯ ಮರುಕ ಪಟ್ಟಿದೆ. ಸಮಾಜಮುಖಿ ಹಿತೈಶಿ ಸ್ನೇಹಿತ ಬಳಗದ ಸದಸ್ಯರಂತಿದ್ದ ಇವರ ಸಾವಿಗೆ ಅವರ ಸಹೋದ್ಯೋಗಿಗಳಾದ ರತ್ನಾಕರ ನಾಯ್ಕ, ಎನ್.ಟಿ.ನಾಯ್ಕ, ಖಾಸಾ ಸ್ನೇಹಿತರಾಗಿದ್ದ ಡಿ.ಎಂ. ನಾಯ್ಕ ಹಸ್ವಂತೆ, ಮಮತಾ ಮತ್ತು ಶ್ಯಾಮಸುಂದರ್ ಜಿ.ಎಲ್..ಜಿಪಂ. ಸದಸ್ಯೆ ಮತ್ತು ಅವರ ಪತಿ ಸುಮಂಗಲಾ ಮತ್ತು ವಸಂತ ನಾಯ್ಕ ಮಳಲವಳ್ಳಿ, ಸ್ವಾಮಿಪಿ.,ವೀರಭದ್ರ ಮತ್ತು ಗೋಪಾಲ ನಾಯ್ಕ, ಡಾ. ನಾಗೇಂದ್ರಪ್ಪ, ಕೃಷ್ಣಮೂರ್ತಿ ಮಂಡಗಳಲೆ, ಜಗದೀಶ್ ನಾಯ್ಕ ಹೊಸೂರು, ಎಸ್.ಕೆ.ಕೋಲಶಿರ್ಸಿ ಸೇರಿದಂತೆ ಅನೇಕರು ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರೋನಾ-

ಉತ್ತರಕನ್ನಡದಲ್ಲಿ ಇಂದು 6 ಜನರಲ್ಲಿ ಕರೋನಾ ದೃಢಪಟ್ಟಿದ್ದು ಯಲ್ಲಾಪುರದ ಮೂವರು, ಹೊನ್ನಾವರ, ದಾಂಡೇಲಿ, ಭಟ್ಕಳಗಳ ತಲಾಒಬ್ಬೊಬ್ಬರು ಸೇರಿದ್ದಾರೆ. ಇವರೆಲ್ಲರೂ ಹೊರರಾಜ್ಯದಿಂದ ಬಂದವರು ಮತ್ತು ಅಂಥವರೊಂದಿಗೆ ನಿಕಟ ಸಂಪರ್ಕ ಹೊಂದಿದವರು ಎನ್ನಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *