Crime news- ಮಗುವನ್ನು ಸಾಯಿಸಿ,ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಕೆಲಕಾಲದ ಮಾನಸಿಕ ಅಸ್ವಸ್ಥ ತೆಯಿಂದ ಬಳಲುತಿದ್ದರು ಎನ್ನಲಾದ ಮಹಿಳೆಯೊಬ್ಬರು ತನ್ನ ಮಗುವನ್ನೂ ಸಾಯಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಿದ್ಧಾಪುರದ ಹೊಸಪೇಟೆಯಲ್ಲಿ ನಡೆದಿದೆ. ಮೃತ ಮಹಿಳೆ ಅಶ್ವಿನಿಗೆ ಮೂರು ಜನ ಹೆಣ್ಣು ಮಕ್ಕಳಿದ್ದು ಅವರಲ್ಲಿ ಹಿರಿಯ ಎರಡು ಜನರು ಅಜ್ಜಿಯ ಮನೆಗೆ ಹೋದ ಸಂದರ್ಭದಲ್ಲಿ ಗಂಡ ಅಶೋಕ್ ಕಾಮತ್ ಪಿಗ್ಮಿ ಸಂಗ್ರಹಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ.
ಮಾನಸಿಕ ಅಸ್ವಸ್ಥತೆಯ ಮಹಿಳೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಂಥ ಕೃತ್ಯಕ್ಕೆ ಮುಂದಾಗಿರುವ ಸಾಧ್ಯತೆ ಇದೆ ಎಂದು ಸಿದ್ಧಾಪುರ ಪಿ.ಆಯ್. ಪ್ರಕಾಶ್ ತಿಳಿಸಿದ್ದಾರೆ. 8 ವರ್ಷದ ಮಗು ಅರ್ಪಿತಾ ಕಾಮತ್ ತಾಯಿಯ ಕುಕೃತ್ಯಕ್ಕೆ ಬಲಿಯಾದ ಬಾಲಕಿಯಾಗಿದ್ದಾಳೆ.

today news-
ಸಿದ್ಧಾಪುರ ಯಲ್ಲಾಪುರ, ಜೊಯಡಾ, ಹೊನ್ನಾವರಗಳಲ್ಲಿ ಒಂದೊಂದು ಪ್ರಕರಣ
ಯಲ್ಲಾಪುರದ ಕಂಡಕ್ಟರ್ ನಿಂದ ಆತಂಕ
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟೂ 5 ಜನರಲ್ಲಿ ಕೋವಿಡ್ 19 ದೃಢಪಟ್ಟಿದ್ದು ಯಲ್ಲಾಪುರದ ಇಬ್ಬರು,ಜೊಯಡಾ, ಹೊನ್ನಾವರ,ಸಿದ್ಧಾಪುರ ರ ತಲಾ ಒಬ್ಬೊಬ್ಬರಲ್ಲಿ ಕರೋನಾ ದೃಢ ಪಟ್ಟಿದೆ.
ಯಲ್ಲಾಪುರದ ಕಂಡಕ್ಟರ್ ಜೂನ್ 11 ರಂದು ಯಲ್ಲಾಪುರದಿಂದ ಬೆಂಗಳೂರು ಬಸ್ ನಲ್ಲಿ ತೆರಳಿ ನಂತರ ಜೂನ್ 13 ರಂದು ಯಲ್ಲಾಪುರಕ್ಕೆ ಮರಳಿದ್ದರು. ಈತ ತೆರಳಿದ್ದ ಬಸ್ ಸಂಖ್ಯೆ ಕೆ.ಎ.31ಎಫ್-1577 ಸಂಖ್ಯೆಯ ಬಸ್ ನಲ್ಲಿ ಪ್ರಯಾಣಿಸಿದವರು ಸಂಬಂಧಿಸಿದ ತಾಲೂಕಾ ಆಸ್ಫತ್ರೆ, ಪೊಲೀಸ್ ಠಾಣೆ ಮೂಲಕ ಪರೀಕ್ಷೆಗೆ ಒಳಪಡಬೇಕಿದೆ.
ಉಳಿದಂತೆ ನಾಲ್ಕು ಜನರು ಕಾರಂಟೈನ್ ನಲ್ಲಿ ಇದ್ದವರು ಎನ್ನಲಾಗಿದೆ.
ಯಲ್ಲಾಪುರದ ಕಂಡಕ್ಟರ್ ಜೂನ್ 14 ರಿಂದ ಕಾರಂಟೈನ್ ಆಗಿ 18 ರಂದು ಸ್ವಾಬ್ ಪರಿಕ್ಷೆಗೆ ಒಳಪಟ್ಟಿದ್ದರು. ಇವರಲ್ಲಿ ಕರೋನಾ ದೃಢವಾಗುತ್ತಲೇ ರಾಜ್ಯ ಸಾರಿಗೆ ಸಂಸ್ಥೆ ಸಿಬ್ಬಂದಿಗಳು, ಇವರು ನಾಲ್ಕುಜನರೊಂದಿಗೆ ಮಾಡಿಕೊಂಡಿದ್ದ ಬಾಡಿಗೆ ಮನೆಯ ಸಹವರ್ತಿಗಳು,ಜೊತೆಗೆ ಅಕ್ಕಪ್ಪದವರು ಎಲ್ಲರ ಮಾದರಿ ಪರೀಕ್ಷೆ ನಡೆಸಲಾಗಿದೆ.
ಕರೋನಾ ಪೀಡಿತರ ಚಿಕಿತ್ಸೆಗೆ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೂ ಅವಕಾಶ ನೀಡಿದ್ದು, ಕನಿಷ್ಟ5 ಸಾವಿರ ದಿನದ ವೆಚ್ಚದಿಂದ 12 ಸಾವಿರದ ವರೆಗೆ ಒಬ್ಬ ರೋಗಿಗೆ ಚಿಕಿತ್ಸೆಯ ವೆಚ್ಚ ವಿಧಿಸಬಹುದು ಅದಕ್ಕಿಂತ ಹೆಚ್ಚು ಬಿಲ್ ಮಾಡುವ ಆಸ್ಫತ್ರೆಗಳ ಮೇಲೆ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *