
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಐವರು ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 173 ಹಾಗೂ ಕಲಬುರಗಿಯಲ್ಲಿ 34 ಮಂದಿ ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 397 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಬುಧವಾರ 149 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 6151ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3799 ಸಕ್ರಿಯ ಪ್ರಕರಣಗಳಿದ್ದು, 112 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸದಾಗಿ ಪತ್ತೆಯಾದ 397 ಸೋಂಕಿತರ ಪೈಕಿ 8 ಮಂದಿ ಅಂತರಾಷ್ಟ್ರೀಯ ಪ್ರಯಾಣ ಹಿನ್ನೆಲೆ ಹಾಗೂ 75 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
