ಸಿದ್ದಾಪುರ- ಕರೋನಾ ಪರಿಣಾಮ- ಬಂಗಾರದ ಅಂಗಡಿಗಳು 2.30 ಕ್ಕೆ ಕ್ಲೋಜ್, ತಾಳಮದ್ದಳೆಯಲ್ಲೂ ಚರ್ಚೆ!

ಕರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಅನಿವಾರ್ಯ ಎನ್ನುವ ಜನಾಭಿಪ್ರಾಯವಿದ್ದರೂ ಸರ್ಕಾರ ಜನರು, ಜನಾಭಿಪ್ರಾಯವನ್ನು ಮನ್ನಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಯಂ ತೀರ್ಮಾನ, ಅಭಿಪ್ರಾಯ ಗಳ ಮೂಲಕ ಸರ್ಕಾರಕ್ಕೇ ಸವಾಲು ಹಾಕುತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾನಾ ಸಂಘ ಸಂಸ್ಥೆಗಳು ಕರೋನಾ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ತಾವೇ ಸ್ವಯಂ ನಿಯಂತ್ರಣ,ಶಿಸ್ತು ಪಾಲನೆ ಮೂಲಕ ಕರೋನಾ ನಿಯಂತ್ರಣಕ್ಕೆ ಸಿದ್ಧರಾಗಿದ್ದಾರೆ. ಕರಾವಳಿ, ಮಲೆನಾಡು, ಅರೆಮಲೆನಾಡಿನ ಉತ್ತರ ಕನ್ನಡದಲ್ಲಿ ಆಯಾ ತಾಲೂಕುಗಳ ಸಂಘ-ಸಂಸ್ಥೆಗಳು ತಮ್ಮ ಕೆಲಸ, ಸೇವೆಗಳ ಸಮಯ ನಿಗದಿ ಮಾಡಿಕೊಳ್ಳುತಿದ್ದಾರೆ. ಸಿದ್ಧಾಪುರದ ಸರಾಪ ಸಂಘ ಜುಲೈ 6 ರ ಸೋಮವಾರದಿಂದ ಮುಂಜಾನೆ 9ರಿಂದ ಮಧ್ಯಾಹ್ನ 2.30 ರ ವರೆಗೆ ಮಾತ್ರ ಬಂಗಾರದ ಻ಅಂಗಡಿಗಳ ವ್ಯವಹಾರ ನಿಗದಿ ಮಾಡಿದೆ. ಸೋಮವಾರದಿಂದ ಸಿದ್ಧಾಪುರದ ಬಂಗಾರದ ಻ಅಂಗಡಿಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2.30 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ.

ತಾಳಮದ್ದಳೆ
ಕರೋನಾ ಹಾವಳಿಯಿಂದಾಗಿ ಇಡೀ ಜಗತ್ತಿಗೆ ಮುಂದೇನು ಎಂಬ ಪ್ರಶ್ನೆ ಕಾಡುತ್ತಿದೆ. ದೇಶ ಮುಂದೆ ಹೋಗುವ ಬದಲು ಹಿಂದೆ ಸಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಾಂಸ್ಕೃತಿಕ ಕ್ಷೇತ್ರವೇ ಜೀವ ಶಕ್ತಿಯನ್ನು ಕೊಡುವುದಾಗಿದೆ ಎಂದು ಜೈರಾಂ ಕೆ.ಆರ್ ತಲವಾಟ ಹೇಳಿದರು.
ಅವರು ತಾಲ್ಲೂಕಿನ ಹೇಮಗಾರ ಕಶಿಗೆಯ ಕೇಶವ ನಾರಾಯಣ ಸಭಾಗೃಹದಲ್ಲಿ ಭುವನೇಶ್ವರೀ ತಾಳಮದ್ದಲೆ ಕೂಟದ 33 ನೇ ವರ್ಷದ ಚಾತುರಮಾಸ್ಯ ಸರಣಿ ತಾಳಮದ್ದಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
3 ದಶಕಗಳ ಕಾಲ ತಾಳಮದ್ದಲೆ ಕೂಟವನ್ನು ನಡೆಸಿಕೊಂಡು ಬರುತ್ತಿರುವ ಭುವನೇಶ್ವರೀ ತಾಳಮದ್ದಲೆ ಕೂಟದ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ. ಻಻ಅನ್ಯರ ಪ್ರೋತ್ಸಾಹಕ್ಕಿಂತ ನಮ್ಮ ಮಣ್ಣಿನ ಕಲಾ ಪ್ರಕಾರವನ್ನು ರಕ್ಷಿಶಿಕೊಂಡು ಹೋಗುವುದು ಈ ಸಂದರ್ಭದಲ್ಲಿ ಮಹತ್ವದ್ದಾಗಿದೆ.

ಕೂಟ ಇದೆ ರೀತಿ ಮುಂದುವರೆದಾಗ ಯುವ ಜನಾಂಗ ಯಕ್ಷಗಾನದ ದತ್ತ ಆಕರ್ಷಿತರಾಗಲು ಸಾಧ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮುಖ್ಯ ಅಭ್ಯಾಗತರಾಗಿದ್ದ ಹಿರಿಯ ನ್ಯಾಯವಾಧಿ ಜೆ.ಪಿ.ಎನ್ ಹೆಗಡೆ ಮಾತನಾಡಿ ಸಂಪರ್ಕ ಸಾಧನಗಳಿಲ್ಲದ ಕಾಲದಲ್ಲೇ ಯಕ್ಷಗಾನ ಕಲೆಯನ್ನು ಪೋಶಿಸಿಕೊಂಡು ಬಂದ ಕಶಿಗೆಯಲ್ಲಿ ನಂತರದ ತಲೆಮಾರಿನವರು ಮುಂದುವರೆಸಿರುವುದು ಖುಷಿಯ ಸಂಗತಿಯಾಗಿದೆ. ಸಂಸ್ಕೃತಿಯ ಬೆಳವಣಿಗೆ ಈ ಮೂಲಕ ಸಾಧ್ಯವಾಗುತ್ತದೆ ಎಂದರು.


ಹಿರಿಯ ವೇದಾಂತ ವಿದ್ವಾಂಸ ಕೃಷ್ಣ ಭಟ್ಟ ಅಡವಿತೋಟ ಅಧ್ಯಕ್ಷತೆ ವಹಿಸಿದ್ದರು. ಜಿ.ಕೆ ಭಟ್ಟ ಕಶಿಗೆ ಸ್ವಾಗತಿಸಿ ಪ್ರಸ್ತಾವನೆ ಮಾಡಿದರು. ಗಣಪತಿ ಹೆಗಡೆ ಗುಂಜಗೋಡ ನಿರೂಪಿಸಿದರೆ ಪ್ರೀತಿವರ್ಧನ ಭಟ್ಟ ವಂದಿಸಿದರು. ನಂತರ ಪಟ್ಟಾಭಿಷೇಕ ಆಖ್ಯಾನ ಪ್ರದರ್ಶನಗೊಂಡಿತು. ಹಿಮ್ಮೇಳದಲ್ಲಿ ಕೊಳಗಿ ಕೇಶವ ಹೆಗಡೆ ಹಾಗೂ ಮಾಧವ ಭಟ್ಟ (ಭಾಗವತ) ಮಂಜುನಾಥ ಹೆಗಡೆ ಕಂಚಿಮನೆ (ಮದ್ದಳೆ) ಪಾಲ್ಗೊಂಡಿದ್ದರು. ಮುಮ್ಮೇಳನದಲ್ಲಿ ಜಿ.ಕೆ ಭಟ್ಟ ಕಶಿಗೆ, (ದಶರಥ) ಜಯರಾಮ ತಲವಾಟ (ಕೈಕೆಯಿ) ಶೇಷಗಿರಿ ಭಟ್ಟ (ಶ್ರೀರಾಮ) ಗ.ನಾ ಹೆಗಡೆ (ಲಕ್ಷ್ಮಣ) ಜಯರಾಮ ಭಟ್ಟ (ಮಂಥರೆ) ಎಂ.ಕೆ ಹೆಗಡೆ (ಸೀತೆ) ದಿನೇಶ ಹೆಗಡೆ (ಕೌಸಲ್ಯೆ) ಟಿ.ಎಂ ರಮೇಶ (ಗುಹಾ) ಪಾತ್ರಗಳನ್ನು ನಿರ್ವಹಿಸುವ ಮೂಲಕ ರಂಜಿಸಿದರು. ಭಾಗವತಿಕೆಯ ಅಭ್ಯಾಸ ಮಾಡುತ್ತಿರುವ ಸಾಪ್ಟೇವೆರ್ ಇಂಜನಿಯರ್ ಮಹೇಶ ಹೆಗಡೆ ಕೊಳಗಿ ಆರಂಭದಲ್ಲಿ ಪದ್ಯ ಹೇಳಿ ರಂಜಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *