ಮುಖ್ಯಮಂತ್ರಿಗಳಿಗೆ ಮನವಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಸನ್ಮಾನ

ಈ ವಾರ ಉತ್ತರ ಕನ್ನಡ-01-

ನಿನ್ನೆ ಕೋಲಾರ ಬಂಗಾರಪೇಟೆಯಲ್ಲಿ ನಡೆದ ತಹಸಿಲ್ಧಾರರ ಹತ್ಯೆಗೆ ರಾಜ್ಯದಾದ್ಯಂತ ತೀವೃ ವಿರೋಧ ವ್ಯಕ್ತವಾಗಿದೆ. ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಮನವಿ ನೀಡಿದ ರಾಜ್ಯ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರು ಈ ಪ್ರಕರಣದ ಸೂಕ್ತ ತನಿಖೆ ಮಾಡಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಮತ್ತು ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆಗೆ ಆಗ್ರಹಿಸಿ ತಹಸಿಲ್ಧಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸಿದ್ಧಾಪುರ ಸೋಮುವಾರದಿಂದ ಮಧ್ಯಾಹ್ನ 2 ಗಂಟೆಗೆ ಕ್ಲೋಜ್-
ಉತ್ತರ ಕನ್ನಡ ದಲ್ಲಿ ಬಹುತೇಕ ತಾಲೂಕುಗಳಲ್ಲಿ ಅರ್ಧದಿನದ ಲಾಕ್ ಡೌನ್ ನಡೆಯುತ್ತಿದೆ. ಇದೇ ರೀತಿ ಸಿದ್ಧಾಪುರದಲ್ಲಿ ಕೂಡಾ ಜುಲೈ13 ರ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುವ ಬಗ್ಗೆ ರವಿವಾರದ ಒಳಗೆ ನಿರ್ಧರಿಸುವುದಾಗಿ ಪ.ಪಂ. ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್ ತಿಳಿಸಿದ್ದಾರೆ. ಸಮಾಜಮುಖಿ ಗೆ ಪ್ರತಿಕ್ರೀಯೆ ನೀಡಿದ ಻ಅವರು ಹಣ,ವ್ಯಾಪಾರಕ್ಕಿಂತ ಬದುಕು ದೊಡ್ಡದು, ಕರೋನಾ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ಮುಂದಿನ ವಾರ ಮಧ್ಯಾಹ್ನದ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುತ್ತೇವೆ. ಈ ಬಗ್ಗೆ ಎರಡು ದಿವಸಗಳಲ್ಲಿ ಸಾರ್ವಜನಿಕವಾಗಿ ಪ್ರಕಟಣೆ ಮಾಡುತ್ತೇವೆ ಎಂದರು.


ಮರತೆಗೆಸಿ- ಸಿದ್ಧಾಪುರ ನಗರದಲ್ಲಿ ಬೀಳಬಹುದಾದ ಹಳೆಯ ಮರಗಳನ್ನು ಕಡಿಸಲು ಜೆ.ಡಿ.ಎಸ್. ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಇಬ್ರಾಹಿಂ ಶೇಖ್ ಆಗ್ರಹಿಸಿದ್ದಾರೆ. ಈ ಬಗ್ಗೆ ಲಿಖಿತ ಮನವಿಯೊಂದನ್ನು ಸ್ಥಳಿಯ ವಲಯ ಅರಣ್ಯಾಧಿಕಾರಿಗಳಿಗೆ ನೀಡಿರುವ ಅವರು ಮಳೆಗಾಲದಲ್ಲಿ ಬೀಳಬಹುದಾದ ಈ ಮರಗಳನ್ನು ತೆರವು ಮಾಡಿ ಸಂಭಾವ್ಯ ಅನಾಹುತ ತಪ್ಪಿಸುವಂತೆ ಕೋರಿದ್ದಾರೆ.
ಆಶಾ ಕಾಳಜಿ- ಕೋವಿಡ್ ಕಾರ್ಯಕರ್ತರಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ವೇತನ, ಗೌರವ ಧನ ನೀಡಿ ಅವರ ನಿಸ್ವಾರ್ಥ ಸೇವೆ ಗೌರವಿಸಬೇಕೆಂದು ಇಲಿಯಾಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಆಶಾಕಾರ್ಯಕರ್ತೆಯರ ಗೌರವ ಧನ, ಸುರಕ್ಷತಾ ವಸ್ತುಗಳನ್ನು ನೀಡಿ ಅವರ ಶ್ರಮಕ್ಕೆ ಗೌರವಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆಶಾ ಗೌರವ-

ಕರೋನಾ ಮತ್ತು ಮಂಗನ ಕಾಯಿಲೆ ತಡೆಗೆ ಶ್ರಮಿಸಿದ ವಾಜಗೋಡು ಭಾಗದ ಆಶಾ ಕಾರ್ಯಕರ್ತರನ್ನು ವಾಜಗೋಡು ಸೇವಾ ಸಹಕಾರಿ ಸಂಘ ಗೌರವಿಸಿದೆ. ಅವರ ಕೆಲಸವನ್ನು ಅಭಿನಂದಿಸಿದ ಸಂಘ ಆಶಾ ಕಾರ್ಯಕರ್ತೆಯರನ್ನು ಗೌರವಿಸಿ ಗೌರವ ಧನ ನೀಡುವ ಮೂಲಕ ಅವರ ಸೇವೆಯನ್ನು ಪ್ರಶಂಸಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *