ಮುಖ್ಯಮಂತ್ರಿಗಳಿಗೆ ಮನವಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಸನ್ಮಾನ

ಈ ವಾರ ಉತ್ತರ ಕನ್ನಡ-01-

ನಿನ್ನೆ ಕೋಲಾರ ಬಂಗಾರಪೇಟೆಯಲ್ಲಿ ನಡೆದ ತಹಸಿಲ್ಧಾರರ ಹತ್ಯೆಗೆ ರಾಜ್ಯದಾದ್ಯಂತ ತೀವೃ ವಿರೋಧ ವ್ಯಕ್ತವಾಗಿದೆ. ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಮನವಿ ನೀಡಿದ ರಾಜ್ಯ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರು ಈ ಪ್ರಕರಣದ ಸೂಕ್ತ ತನಿಖೆ ಮಾಡಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಮತ್ತು ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆಗೆ ಆಗ್ರಹಿಸಿ ತಹಸಿಲ್ಧಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸಿದ್ಧಾಪುರ ಸೋಮುವಾರದಿಂದ ಮಧ್ಯಾಹ್ನ 2 ಗಂಟೆಗೆ ಕ್ಲೋಜ್-
ಉತ್ತರ ಕನ್ನಡ ದಲ್ಲಿ ಬಹುತೇಕ ತಾಲೂಕುಗಳಲ್ಲಿ ಅರ್ಧದಿನದ ಲಾಕ್ ಡೌನ್ ನಡೆಯುತ್ತಿದೆ. ಇದೇ ರೀತಿ ಸಿದ್ಧಾಪುರದಲ್ಲಿ ಕೂಡಾ ಜುಲೈ13 ರ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುವ ಬಗ್ಗೆ ರವಿವಾರದ ಒಳಗೆ ನಿರ್ಧರಿಸುವುದಾಗಿ ಪ.ಪಂ. ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್ ತಿಳಿಸಿದ್ದಾರೆ. ಸಮಾಜಮುಖಿ ಗೆ ಪ್ರತಿಕ್ರೀಯೆ ನೀಡಿದ ಻ಅವರು ಹಣ,ವ್ಯಾಪಾರಕ್ಕಿಂತ ಬದುಕು ದೊಡ್ಡದು, ಕರೋನಾ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ಮುಂದಿನ ವಾರ ಮಧ್ಯಾಹ್ನದ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುತ್ತೇವೆ. ಈ ಬಗ್ಗೆ ಎರಡು ದಿವಸಗಳಲ್ಲಿ ಸಾರ್ವಜನಿಕವಾಗಿ ಪ್ರಕಟಣೆ ಮಾಡುತ್ತೇವೆ ಎಂದರು.


ಮರತೆಗೆಸಿ- ಸಿದ್ಧಾಪುರ ನಗರದಲ್ಲಿ ಬೀಳಬಹುದಾದ ಹಳೆಯ ಮರಗಳನ್ನು ಕಡಿಸಲು ಜೆ.ಡಿ.ಎಸ್. ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಇಬ್ರಾಹಿಂ ಶೇಖ್ ಆಗ್ರಹಿಸಿದ್ದಾರೆ. ಈ ಬಗ್ಗೆ ಲಿಖಿತ ಮನವಿಯೊಂದನ್ನು ಸ್ಥಳಿಯ ವಲಯ ಅರಣ್ಯಾಧಿಕಾರಿಗಳಿಗೆ ನೀಡಿರುವ ಅವರು ಮಳೆಗಾಲದಲ್ಲಿ ಬೀಳಬಹುದಾದ ಈ ಮರಗಳನ್ನು ತೆರವು ಮಾಡಿ ಸಂಭಾವ್ಯ ಅನಾಹುತ ತಪ್ಪಿಸುವಂತೆ ಕೋರಿದ್ದಾರೆ.
ಆಶಾ ಕಾಳಜಿ- ಕೋವಿಡ್ ಕಾರ್ಯಕರ್ತರಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ವೇತನ, ಗೌರವ ಧನ ನೀಡಿ ಅವರ ನಿಸ್ವಾರ್ಥ ಸೇವೆ ಗೌರವಿಸಬೇಕೆಂದು ಇಲಿಯಾಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಆಶಾಕಾರ್ಯಕರ್ತೆಯರ ಗೌರವ ಧನ, ಸುರಕ್ಷತಾ ವಸ್ತುಗಳನ್ನು ನೀಡಿ ಅವರ ಶ್ರಮಕ್ಕೆ ಗೌರವಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆಶಾ ಗೌರವ-

ಕರೋನಾ ಮತ್ತು ಮಂಗನ ಕಾಯಿಲೆ ತಡೆಗೆ ಶ್ರಮಿಸಿದ ವಾಜಗೋಡು ಭಾಗದ ಆಶಾ ಕಾರ್ಯಕರ್ತರನ್ನು ವಾಜಗೋಡು ಸೇವಾ ಸಹಕಾರಿ ಸಂಘ ಗೌರವಿಸಿದೆ. ಅವರ ಕೆಲಸವನ್ನು ಅಭಿನಂದಿಸಿದ ಸಂಘ ಆಶಾ ಕಾರ್ಯಕರ್ತೆಯರನ್ನು ಗೌರವಿಸಿ ಗೌರವ ಧನ ನೀಡುವ ಮೂಲಕ ಅವರ ಸೇವೆಯನ್ನು ಪ್ರಶಂಸಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *