ಮುಖ್ಯಮಂತ್ರಿಗಳಿಗೆ ಮನವಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಸನ್ಮಾನ

ಈ ವಾರ ಉತ್ತರ ಕನ್ನಡ-01-

ನಿನ್ನೆ ಕೋಲಾರ ಬಂಗಾರಪೇಟೆಯಲ್ಲಿ ನಡೆದ ತಹಸಿಲ್ಧಾರರ ಹತ್ಯೆಗೆ ರಾಜ್ಯದಾದ್ಯಂತ ತೀವೃ ವಿರೋಧ ವ್ಯಕ್ತವಾಗಿದೆ. ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಮನವಿ ನೀಡಿದ ರಾಜ್ಯ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರು ಈ ಪ್ರಕರಣದ ಸೂಕ್ತ ತನಿಖೆ ಮಾಡಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಮತ್ತು ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆಗೆ ಆಗ್ರಹಿಸಿ ತಹಸಿಲ್ಧಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸಿದ್ಧಾಪುರ ಸೋಮುವಾರದಿಂದ ಮಧ್ಯಾಹ್ನ 2 ಗಂಟೆಗೆ ಕ್ಲೋಜ್-
ಉತ್ತರ ಕನ್ನಡ ದಲ್ಲಿ ಬಹುತೇಕ ತಾಲೂಕುಗಳಲ್ಲಿ ಅರ್ಧದಿನದ ಲಾಕ್ ಡೌನ್ ನಡೆಯುತ್ತಿದೆ. ಇದೇ ರೀತಿ ಸಿದ್ಧಾಪುರದಲ್ಲಿ ಕೂಡಾ ಜುಲೈ13 ರ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುವ ಬಗ್ಗೆ ರವಿವಾರದ ಒಳಗೆ ನಿರ್ಧರಿಸುವುದಾಗಿ ಪ.ಪಂ. ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್ ತಿಳಿಸಿದ್ದಾರೆ. ಸಮಾಜಮುಖಿ ಗೆ ಪ್ರತಿಕ್ರೀಯೆ ನೀಡಿದ ಻ಅವರು ಹಣ,ವ್ಯಾಪಾರಕ್ಕಿಂತ ಬದುಕು ದೊಡ್ಡದು, ಕರೋನಾ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ಮುಂದಿನ ವಾರ ಮಧ್ಯಾಹ್ನದ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುತ್ತೇವೆ. ಈ ಬಗ್ಗೆ ಎರಡು ದಿವಸಗಳಲ್ಲಿ ಸಾರ್ವಜನಿಕವಾಗಿ ಪ್ರಕಟಣೆ ಮಾಡುತ್ತೇವೆ ಎಂದರು.


ಮರತೆಗೆಸಿ- ಸಿದ್ಧಾಪುರ ನಗರದಲ್ಲಿ ಬೀಳಬಹುದಾದ ಹಳೆಯ ಮರಗಳನ್ನು ಕಡಿಸಲು ಜೆ.ಡಿ.ಎಸ್. ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಇಬ್ರಾಹಿಂ ಶೇಖ್ ಆಗ್ರಹಿಸಿದ್ದಾರೆ. ಈ ಬಗ್ಗೆ ಲಿಖಿತ ಮನವಿಯೊಂದನ್ನು ಸ್ಥಳಿಯ ವಲಯ ಅರಣ್ಯಾಧಿಕಾರಿಗಳಿಗೆ ನೀಡಿರುವ ಅವರು ಮಳೆಗಾಲದಲ್ಲಿ ಬೀಳಬಹುದಾದ ಈ ಮರಗಳನ್ನು ತೆರವು ಮಾಡಿ ಸಂಭಾವ್ಯ ಅನಾಹುತ ತಪ್ಪಿಸುವಂತೆ ಕೋರಿದ್ದಾರೆ.
ಆಶಾ ಕಾಳಜಿ- ಕೋವಿಡ್ ಕಾರ್ಯಕರ್ತರಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ವೇತನ, ಗೌರವ ಧನ ನೀಡಿ ಅವರ ನಿಸ್ವಾರ್ಥ ಸೇವೆ ಗೌರವಿಸಬೇಕೆಂದು ಇಲಿಯಾಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಆಶಾಕಾರ್ಯಕರ್ತೆಯರ ಗೌರವ ಧನ, ಸುರಕ್ಷತಾ ವಸ್ತುಗಳನ್ನು ನೀಡಿ ಅವರ ಶ್ರಮಕ್ಕೆ ಗೌರವಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆಶಾ ಗೌರವ-

ಕರೋನಾ ಮತ್ತು ಮಂಗನ ಕಾಯಿಲೆ ತಡೆಗೆ ಶ್ರಮಿಸಿದ ವಾಜಗೋಡು ಭಾಗದ ಆಶಾ ಕಾರ್ಯಕರ್ತರನ್ನು ವಾಜಗೋಡು ಸೇವಾ ಸಹಕಾರಿ ಸಂಘ ಗೌರವಿಸಿದೆ. ಅವರ ಕೆಲಸವನ್ನು ಅಭಿನಂದಿಸಿದ ಸಂಘ ಆಶಾ ಕಾರ್ಯಕರ್ತೆಯರನ್ನು ಗೌರವಿಸಿ ಗೌರವ ಧನ ನೀಡುವ ಮೂಲಕ ಅವರ ಸೇವೆಯನ್ನು ಪ್ರಶಂಸಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *