ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ದಾಖಲೆಯ 28,637 ಕೇಸ್, 551 ಮಂದಿ ಬಲಿ

ಭಾರತದಲ್ಲಿ ಭಾನುವಾರ ಕೊರೋನಾ ಸ್ಫೋಟಗೊಂಡಿದ್ದು, ಸಾರ್ವಕಾಲಿಕ ಗರಿಷ್ಟ 28,637 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಅದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

file photo

ನವದೆಹಲಿ: ಭಾರತದಲ್ಲಿ ಭಾನುವಾರ ಕೊರೋನಾ ಸ್ಫೋಟಗೊಂಡಿದ್ದು, ಸಾರ್ವಕಾಲಿಕ ಗರಿಷ್ಟ 28,637 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಅದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 551 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 22,674ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. 

ಈ ನಡುವೆ 8,49,553 ಮಂದಿ ಸೋಂಕಿತರ ಪೈಕಿ 5,34,621 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 2,92,258 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ದೇಶದ ಕೊರೋನಾ ಹಾಟ್’ಸ್ಪಾಟ್ ಎನಿಸಿಕೊಂಡಿರುವ ಮಹಾರಾಷ್ಟ್ರದಲ್ಲಿ 7,842 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2,46,600ಕ್ಕೆ ಏರಿಕೆಯಾಗಿದೆ. ಇದೇ ವೇಳೆ ದೆಹಲಿಯಲ್ಲಿ 1,781 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖಅಯೆ 1,10,921ಕ್ಕೆ ಹೆಚ್ಚಳವಾಗಿದೆ. ಅದೇ ರೀತಿ ತಮಿಳುನಾಡು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,34,226ಕ್ಕೆ ತಲುಪಿದೆ. 

5 ಲಕ್ಷ ಗಡಿದಾಟಿದ ಗುಣಮುಖರ ಸಂಖ್ಯೆ
ಕೊರೋನಾ ವೈರಸ್ ದಿನದಿಂದ ದಿನಕ್ಕೆ ಭಾರೀ ವೇಗದಲ್ಲಿ ಏರಿಕೆಯಾಗುತ್ತಿರುವ ಮಧ್ಯೆಯೇ ಸೋಂಕಿನಿಂದ ಗುಣಮುಖರಾವದರ ಸಂಖ್ಯೆ 5 ಲಕ್ಷ ಗಡಿ ದಾಟಿದೆ. ಭಾನುವಾರದವರೆಗೂ ಗುಣಮುಖರಾದವರ ಸಂಖ್ಯೆ 5,34,621ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಕೊರೋನಾದಿಂದ ರೋಗಿಗಳು ಗುಣಮುಖರಾಗುತ್ತಿರುವ ಪ್ರಮಾಣ ಶೇ.62.78ರಷ್ಟಿದೆ. ಪ್ರಸ್ತುತ ದೇಶದಲ್ಲಿನ್ನೂ 2,92,258 ಸಕ್ರಿಯ ಪ್ರಕರಣಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *