ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದ ಟಾಪರ್ಸ್ ಇವರು.

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ. 61.80ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.  ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದರೆ  ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚ…..

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ. 61.80ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.  ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದರೆ  ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರಗಳು ಕೊನೆಯ ಸ್ಥಾನದಲ್ಲಿವೆ. ಈ ಬಾರಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಟಾಪರ್ಸ್ ಆದವರ ವಿವರ ಹೀಗಿದೆ-

ವಿಜ್ಞಾನ ವಿಭಾಗ

ವಿಜ್ಞಾನ ವಿಭಾಗದಲ್ಲಿ ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಅಭಿಜ್ಞಾ ರಾವ್ ಟಾಪರ್ ಆಗಿದ್ದಾರೆ. ಅಭಿಜ್ಞಾ ರಾವ್ ವಿಜ್ಞಾನ ವಿಭಾಗದಲ್ಲಿ 596 ಅಂಕಗಳನ್ನು ಗಳಿಸಿಕೊಂಡಿದ್ದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.

ಅಭಿಜ್ಞಾ  ಪಿಸಿಎಂಸಿ ವಿಷಯಗಳಲ್ಲಿ ತಲಾ 100 , ಇಂಗ್ಲೀಷ್  ಭಾಷೆಯಲ್ಲಿ 96  ಹಾಗೂ ಸಂಸ್ಕೃತದಲ್ಲಿ 100  ಅಂಕ ಪಡೆದಿದ್ದಾರೆ.

ಇನ್ನು ಇದೇ ವಿಭಾಗದಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ವಿದ್ಯಾಮಂದಿರ್ ಪಿ.ಯು ಕಾಲೇಜಿನ ಪ್ರೇರಣಾ ಕೂಡ 596 ಅಂಕ ಗಳಿಸಿದ್ದಾರೆ. ಆಕಾಂಕ್ಷಾ ಪೈ (595) ದ್ವಿತೀಯ ಹಾಗೂ ಯಶಸ್​ ಎಂ.ಎಸ್ (594) ತೃತೀಯ  ಸ್ಥಾನ ಗಳಿಸಿಕೊಂಡಿದ್ದಾರೆ. 

ವಾಣಿಜ್ಯ ವಿಭಾಗ

ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿದ್ಯಾಮಂದಿರ್ ಪಿ.ಯು ಕಾಲೇಜಿನ ಅರವಿಂದ ಶ್ರೀವತ್ಸ 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. 

ವಾಣಿಜ್ಯ ವಿಭಾಗದಲ್ಲಿ ಬೃಂದಾ  ದ್ವಿತೀಯ ಸ್ಥಾನ (596), ಮಲ್ಲೇಶ್ವರಂ ವಿದ್ಯಾಮಂದಿರ್ ಪಿಯು ಕಾಲೇಜಿನ ಅಭಿಲಾಶ್ ಶರ್ಮಾ(595)   ತೃತೀಯ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗ

ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ 594 ಅಂಕ ಗಳಿಸಿ ಕಲಾ ವಿಭಾಗದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. 

ಕಲಾ ವಿಭಾಗದಲ್ಲಿ ಸ್ವಾಮಿ (592) ದ್ವಿತೀಯ ಮೊಹಮ್ಮದ್​ ರಫೀಕ್ (591) ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik