nepal clarification- ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳ ಪ್ರಧಾನಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಕೊಟ್ಟ ಸ್ಪಷ್ಟತೆ ಏನು ಗೊತ್ತೇ?

ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಲು ಯತ್ನಿಸಿದೆ. 

PM K P Sharma Oli's remarks on Lord Ram not meant to debase Ayodhya's significance and cultural value: Nepal Foreign Ministry

ಕಠ್ಮಂಡು: ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ತೇಪೆ ಹಚ್ಚುವ ಕೆಲಸ ಮಾಡಿ ಸ್ಪಷ್ಟನೆ ನೀಡಲು ಯತ್ನಿಸಿದೆ. 

ಜು.13 ರಂದು ಕೆ.ಪಿ ಶರ್ಮಾ ಓಲಿ ನೀಡಿರುವ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಅಯೋಧ್ಯೆ ಹಾಗೂ ಅದರ ಸಾಂಸ್ಕೃತಿಕ ಮೌಲ್ಯಗಳನ್ನು  ಮಹತ್ವವನ್ನು ಕಡಿಮೆಮಾಡುವ ಉದ್ದೇಶ  ಪ್ರಧಾನಿಗಳ ಹೇಳಿಯಲ್ಲಿ ಇರಲಿಲ್ಲ ಎಂದು ಹೇಳಿದೆ.

ನೇಪಾಳಿ ಭಾಷೆಯ ರಾಮಾಯಣದ ಕರ್ತೃ ಆದಿಕವಿ ಭಾನು ಭಕ್ತ ಆಚಾರ್ಯರ 207 ನೇ ಜನ್ಮದಿನಾಚರಣೆ ಅಂಗವಾಗಿ ಮಾತನಾಡಿದ್ದ ನೇಪಾಳ ಪ್ರಧಾನಿ ರಾಮನ ನಿಜವಾದ ಜನ್ಮಭೂಮಿ ಇರುವುದು ಭಾರತದಲ್ಲಿ ಅಲ್ಲ ನೇಪಾಳದಲ್ಲಿ ಎಂದು ಹೇಳಿದ್ದರು.

ಈ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ನೇಪಾಳ ವಿದೇಶಾಂಗ ಸಚಿವಾಲಯ, ಪ್ರಧಾನಿಯವರ ಹೇಳಿಕೆ ಯಾವುದೇ ರಾಜಕೀಯ ವಿಷಯಕ್ಕೂ ಸಂಬಂಧಿಸಿದ್ದಾಗಲೀ ಯಾವುದೇ ಭಾವನೆಗಳಿಗೆ ನೋವುಂಟು ಮಾಡುವುದಾಗಲೀ ಅಲ್ಲ. ರಾಮಾಯಣ ಹಾಗೂ ಅವುಗಳ ಘಟನೆಗಳಿಗೆ ಬೆಸೆದುಕೊಂಡಿರುವ ಹಲವಾರು ಪ್ರದೇಶಗಳು ಪುರಾಣಗಳಲ್ಲಿ ಬಂದಿವೆ, ಈ ಸಂಬಂಧ ಹೆಚ್ಚಿನ ಅಧ್ಯಯನಕ್ಕೆ ಸಹಾಯವಾಗುವಂತೆ ಅವುಗಳ ಮಹತ್ವವನ್ನು ಪ್ರಧಾನಿ ಹೇಳಿದ್ದಾರೆ ಎಂದು ತಿಳಿಸಿದೆ.

ಪ್ರತಿ ವರ್ಷ ಬಿಭಾ ಪಂಚಮಿಯ ದಿನದಂದು ಭಾರತದ ಅಯೋಧ್ಯೆಯಿಂದ ನೇಪಾಳದ ಜನಕಪುರಿಗೆ ಮದುವೆ ದಿಬ್ಬಣ ಬರುವ ಸಂಪ್ರದಾಯ ಗಮನಾರ್ಹವಾಗಿದೆ. 2018 ರಲ್ಲಿ ನೇಪಾಳ ಪ್ರಧಾನಿಯೇ ರಾಮಾಯಣ ಸರ್ಕ್ಯೂಟ್ ಉದ್ಘಾಟಿಸಿ ಜನಕಪುರದಿಂದ ಅಯೋಧ್ಯೆಗೆ ಬಸ್ ಸೇವೆಯನ್ನು ಪ್ರಾರಂಭಿಸಿದ್ದನ್ನೂ ವಿದೇಶಾಂಗ ಇಲಾಖೆ ಉಲ್ಲೇಖಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *