nation @10am-ಭಾರತದಲ್ಲಿ ಕೊರೋನಾ ರೌದ್ರನರ್ತನ: 24 ಗಂಟೆಗಳಲ್ಲಿ ದಾಖಲೆಯ 34,956 ಮಂದಿಯಲ್ಲಿ ವೈರಸ್ ಪತ್ತೆ, 10 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಾದ್ಯಂತ ಸೋಂಕು ಪತ್ತೆ ಹೆಚ್ಚಳವಾದ ಬೆನ್ನಲ್ಲೇ ಸೋಂಕಿತರ ಸಂಖ್ಯೆಯಲ್ಲೂ ಭಾರೀ ಏರಿಕೆ ಕಂಡುಬರುತ್ತಿದ್ದು, ಶುಕ್ರವಾರ ದಾಖಲೆಯ 34,956 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,03,832ಕ್ಕೆ ತಲುಪಿದೆ. 

File photo

ನವದೆಹಲಿ: ದೇಶದಾದ್ಯಂತ ಸೋಂಕು ಪತ್ತೆ ಹೆಚ್ಚಳವಾದ ಬೆನ್ನಲ್ಲೇ ಸೋಂಕಿತರ ಸಂಖ್ಯೆಯಲ್ಲೂ ಭಾರೀ ಏರಿಕೆ ಕಂಡುಬರುತ್ತಿದ್ದು, ಶುಕ್ರವಾರ ದಾಖಲೆಯ 34,956 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,03,832ಕ್ಕೆ ತಲುಪಿದೆ. 

ಇನ್ನು ನಿನ್ನೆ ಒಂದೇ ದಿನ 687 ಮಂದಿ ಕೊರೋನಾಗೆ ಬಲಿಯಾದರೊಂದಿಗೆ ಈ ವರೆಗೆ ಬಲಿಯಾದವರ ಸಂಖ್ಯೆ 25,602ಕ್ಕೆ ಮುಟ್ಟಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 22987 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯೊಂದಿದ್ದಾರೆ. 

ಇದರೊಂದಿಗೆ ದೇಶದಲ್ಲಿ ಗುಣಮುಖರಾದವರ ಸಂಖ್ಯೆ 6,35,757ಕ್ಕೆ ಏರಿಕೆಯಾಗಿದ್ದು, ಇನ್ನೂ ದೇಶದಲ್ಲಿ 3,42,473 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

2020ರ ಜ.30ರಂದು ಭಾರತದಲ್ಲಿ ಮೊದಲ ಸೋಂಕು ಪತ್ತೆಯಾಗಿದ್ದು, ಆದಾದ ಐದೂವರೆ ತಿಂಗಳಿನಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. 

ಮಹಾರಾಷ್ಟ್ರದಲ್ಲಿ ಗುರುವಾರ ಒಂದೇ ದಿನ ದಾಖಲೆಯ 8641 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ನಿನ್ನೆ ಒಂದೇ ದಿನ ಕೊರೋನಾಗೆ 266 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೋನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 11,194ಕ್ಕೆ ಏರಿಕೆಯಾದರೆ, ಸೋಂಕಿತರ ಸಂಖ್ಯೆ 2,84,281 ಅಂದರೆ, 3 ಲಕ್ಷದ ಸಮೀಪಕ್ಕೆ ದಾಪುಗಾಲು ಹಾಕುತ್ತಿದೆ. 

ಉಳಿದಂತೆ ತಮಿಳುನಾಡಿನಲ್ಲೂ ಗುರುವಾರ ದಾಖಲೆ ಪ್ರಮಾಣದ 4549 ಕೊರೋನಾ ಪ್ರಕರಣಗಳು ದೃಢಪಟ್ಟಿದೆ. ಇನ್ನು ಕರ್ನಾಟಕದಲ್ಲಿ 4169, ಆಂಧ್ರಪ್ರದೇಶದಲ್ಲಿ 2593, ಉತ್ತರಪ್ರದೇಶ 2058, ಪಶ್ಚಿಮ ಬಂಗಾಳದಲ್ಲಿ 1690 ಗರಿಷ್ಠ ಪ್ರಮಾಣದ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದೇ ವೇಳೆ ಗುರುವಾರ ಒಂದೇ ದಿನ ಕೊರೋನಾ ಮಹಾಮಾರಿಗೆ ಮಹಾರಾಷ್ಟ್ರದಲ್ಲಿ 266, ಕರ್ನಾಟಕ 104, ತಮಿಳುನಾಡು 69, ದೆಹಲಿ 58 ಮತ್ತು ಆಂಧ್ರಪ್ರದೇಶ 40 ಮಂದಿ ಸಾವನ್ನಪ್ಪಿದ್ದಾರೆ. 

ದೇಶಾದ್ಯಂತ 24 ಗಂಟೆಗಳಲ್ಲಿ 3,33,228 ಕೋವಿಡ್ ಪರೀಕ್ಷೆ
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,33,228 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,33,228 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.16ರ ವರೆಗೂ 1,30,72,718 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *