ಒಂದೇ ವಾರದಲ್ಲಿ 800 ರ ಪೈಕಿ 500 ಜನರು ಗುಣಮುಖ!ಕೆಲಸ ಮಾಡುತ್ತಿದೆ ‘ಅವೇಕ್ ಪ್ರೋನಿಂಗ್’

ಕೋವಿಡ್-19 ನ್ನು ಎದುರಿಸಲು ಭಿನ್ನ ಭಿನ್ನ ಮಾದರಿಯ ಚಿಕಿತ್ಸೆಗಳ ಮೊರೆ ಹೋಗುತ್ತಿದೆ ವೈದ್ಯ ಲೋಕ.  2 ವಾರಗಳ ಹಿಂದಷ್ಟೇ ಸರ್ಕಾರ ಘೋಷಣೆ ಮಾಡಿದ್ದ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಕೋವಿಡ್-19 ನಿಂದ ಗುಣಮುಖವಾಗುವುದಕ್ಕೆ ಒಂದಷ್ಟು ಆಶಾಕಿರಣ ಮೂಡಿಸಿದೆ.

COVID-19 vaccine

ಕೋವಿಡ್-19 ನ್ನು ಎದುರಿಸಲು ಭಿನ್ನ ಭಿನ್ನ ಮಾದರಿಯ ಚಿಕಿತ್ಸೆಗಳ ಮೊರೆ ಹೋಗುತ್ತಿದೆ ವೈದ್ಯ ಲೋಕ.  2 ವಾರಗಳ ಹಿಂದಷ್ಟೇ ಸರ್ಕಾರ ಘೋಷಣೆ ಮಾಡಿದ್ದ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಕೋವಿಡ್-19 ನಿಂದ ಗುಣಮುಖವಾಗುವುದಕ್ಕೆ ಒಂದಷ್ಟು ಆಶಾಕಿರಣ ಮೂಡಿಸಿದೆ.

ಅವೇಕ್ ಪ್ರೋನಿಂಗ್ ವಿಧಾನದ ಮೂಲಕ ಚಿಕಿತ್ಸೆ ಪಡೆದಿದ್ದ 800 ಜನರ ಪೈಕಿ 500 ಜನರು ಕೋವಿಡ್-19 ನಿಂದ ಕೇವಲ ಒಂದು ವಾರದಲ್ಲಿ ಗುಣಮುಖರಾಗಿದ್ದಾರೆ.

ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶದ 45 ವರ್ಷದ ವೈದ್ಯರೊಬ್ಬರು ಅವೇಕ್ ಪ್ರೋನಿಂಗ್ ವಿಧಾನದ ಮೂಲಕ ಕೋವಿಡ್-19 ಗುಣಮುಖರಾಗಿದ್ದಾರೆ.

ಪ್ರಾರಂಭದ ದಿನಗಳಲ್ಲಿ ಅವರ ಪರಿಸ್ಥಿತಿ ಹದಗೆಟ್ಟಿತ್ತು. ಪ್ರತಿ ದಿನಕ್ಕೆ 4-5 ಲೀಟರ್ ನಷ್ಟು ಆಕ್ಸಿಜನ್ ಅಗತ್ಯವಿತ್ತು. ಆದರೆ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಪ್ರಯೋಗಿಸಿದ ನಂತರ ಅವರ ಆರೋಗ್ಯ ಸುಧಾರಣೆಯಾಯಿತು. ಒಂದು ವಾರದ ಅವಧಿಯಲ್ಲಿ ಉತ್ತಮ ಫಲಿತಾಂಶ ದೊರೆಯಲಾರಂಭಿಸಿ ಆಕ್ಸಿಜನ್ ಅಗತ್ಯತೆಯಿಂದ ಹೊರಬಂದರು. ಪ್ರಮಾಣೀಕೃತ ಥೆರೆಪಿಗಳ ಜೊತೆಗೆ ಆಕ್ಟೀವ್ ಪ್ರೋನಿಂಗ್ ನ್ನೂ ಮಾಡಲಾಯಿತು ಎನ್ನುತ್ತಾರೆ ಕ್ರಿಟಿಕಲ್ ಕೇರ್ ಸಪೋರ್ಟ್ ಟೀಮ್ ನ ಸದಸ್ಯ ಹಾಗೂ ಮಣಿಪಾಲ್ ಆಸ್ಪತ್ರೆಯ  ಬೋರ್ಡ್ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ವಿಭಾಗದ  ಅಧ್ಯಕ್ಷ ಡಾ. ಅನೂಪ್ ಅಮರನಾಥ್.

ಅವೇಕ್ ಪ್ರೋನಿಂಗ್ ಎಂದರೇನು?

ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನದಲ್ಲಿ ರೋಗಿಗಳನ್ನು, ಮೇಲ್ಕಂಡ ಚಿತ್ರದಲ್ಲಿ ತೋರಿಸಿರುವಂತೆ ಹೊಟ್ಟೆ ಕೆಳಭಾಗಕ್ಕೆ ಬರುವ ಭಂಗಿಯಲ್ಲಿ ಮಲಗಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ಶ್ವಾಸಕೋಶಕ್ಕೆ ಆಮ್ಲಜನಕ ಹೆಚ್ಚಿನ ಪ್ರಮಾಣದಲ್ಲಿ ತಲುಪುತ್ತದೆ. ದಿನವೊಂದಕ್ಕೆ 16-18 ಗಂಟೆಗಳ ಕಾಲ ಈ ಪ್ರಕ್ರಿಯೆಯನ್ನು ನಡೆಸಬೇಕಾಗುತ್ತದೆ.

ಕೋವಿಡ್-19 ಸೋಂಕು ತೀವ್ರವಾದ ಹಂತಕ್ಕೆ ಹೋದ 300 ರೋಗಿಗಳಿಗೆ ಮಾತ್ರ ಈ ಚಿಕಿತ್ಸಾ ವಿಧಾನ ಕೆಲಸ ಮಾಡಿಲ್ಲ. ಪ್ರಾರಂಭಿಕ ಹಂತದಲ್ಲಿದ್ದವರಿಗೆ ಈ ಚಿಕಿತ್ಸಾ ವಿಧಾನ ಫಲಿಸುತ್ತಿದೆ ಇದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ಡಾ ಅಮರ್ ನಾಥ್ ಹೇಳಿದ್ದಾರೆ.

ಸರ್ವೈಕಲ್ ಸ್ಪಾಂಡಿಲೋಸಿಸ್ ಎದುರಿಸುತ್ತಿರುವ ಗರ್ಭಿಣಿ ಮಹಿಳೆಯರಿಗೆ ಈ ಚಿಕಿತ್ಸಾ ವಿಧಾನ ಸೂಕ್ತವಲ್ಲ ಎಂದೂ ವೈದ್ಯರು ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *